ಟಿ20 ವಿಶ್ವಕಪ್ | ವಿಂಡೀಸ್ ಮಣಿಸಿ ಸೆಮಿ ತಲುಪಿದ ಭಾರತದ ರೋಚಕ ಆಟ

Date:

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಅಸಾಧಾರಣ ಹೋರಾಟ ಪ್ರದರ್ಶಿಸಿದ ಟೀಮ್ ಇಂಡಿಯಾ, ಬಲಿಷ್ಠ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ರೋಚಕವಾಗಿ ಮಣಿಸಿ 2026ನೇ ಸಾಲಿನ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ಗೆ ದರ್ಪದಿಂದ ಅಡಿಯಿಟ್ಟಿದೆ. ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಹೈ-ವೋಲ್ಟೇಜ್ ಹಣಾಹಣಿಯಲ್ಲಿ ಕೆರಿಬಿಯನ್ನರ ಕಠಿಣ ಸವಾಲನ್ನು ದಿಟ್ಟವಾಗಿ ಎದುರಿಸಿದ ಭಾರತ, ಒತ್ತಡವನ್ನು ಮೆಟ್ಟಿಬೆರೆತು ಸ್ಮರಣೀಯ ಗೆಲುವು ದಾಖಲಿಸಿತು. ಆರಂಭಿಕನಾಗಿ ಕಣಕ್ಕಿಳಿದು ಅಜೇಯ 97 ರನ್ ಸಿಡಿಸಿದ ಪ್ರತಿಭಾನ್ವಿತ ಬ್ಯಾಟರ್ ಸಂಜು ಸ್ಯಾಮ್ಸನ್ ಈ ಐತಿಹಾಸಿಕ ಗೆಲುವಿನ ರೂವಾರಿ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ವೆಸ್ಟ್ ಇಂಡೀಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಆರಂಭಿಕರಾದ ಶಾಯ್ ಹೋಪ್ (32 ರನ್) ಮತ್ತು ರಾಸ್ಟನ್ ಚೇಸ್ (40 ರನ್) ಮೊದಲ ವಿಕೆಟ್‌ಗೆ 68 ರನ್ ಸೇರಿಸಿ ಭದ್ರ ಬುನಾದಿ ಹಾಕಿದರು. ಮಧ್ಯಮ ಕ್ರಮಾಂಕದಲ್ಲಿ ಶಿಮ್ರಾನ್ ಹೆಟ್ಮೆಯರ್ ಕೇವಲ 12 ಎಸೆತಗಳಲ್ಲಿ 27 ರನ್ ಸಿಡಿಸಿ ಅಪಾಯಕಾರಿಯಾಗುವ ಮುನ್ಸೂಚನೆ ನೀಡಿದರು. ಅಂತಿಮ ಓವರ್‌ಗಳಲ್ಲಿ ಅಬ್ಬರಿಸಿದ ಜೇಸನ್ ಹೋಲ್ಡರ್ (ಅಜೇಯ 37) ಮತ್ತು ರೋವ್‌ಮನ್ ಪೊವೆಲ್ (ಅಜೇಯ 34) ಮುರಿಯದ ಐದನೇ ವಿಕೆಟ್‌ಗೆ ಕೇವಲ 35 ಎಸೆತಗಳಲ್ಲಿ 76 ರನ್ ಚಚ್ಚಿ ತಂಡದ ಮೊತ್ತವನ್ನು 190ರ ಗಡಿ ದಾಟಿಸಿದರು. ಭಾರತದ ಪರ ಜಸ್‌ಪ್ರೀತ್ ಬುಮ್ರಾ (36ಕ್ಕೆ 2) ಯಶಸ್ವಿ ಬೌಲರ್ ಎನಿಸಿದರೆ, ಫೀಲ್ಡಿಂಗ್‌ನಲ್ಲಿ ಕೆಲವು ಕ್ಯಾಚ್‌ಗಳನ್ನು ಕೈಚೆಲ್ಲಿದ ಪ್ರಮಾದಗಳು ಭಾರತದ ಪಾಲಿಗೆ ತುಸು ದುಬಾರಿಯಾದವು.

​196 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಅಲ್ಪಮೊತ್ತಕ್ಕೆ ಪೆವಿಲಿಯನ್ ಸೇರಿದರು (ತಂಡದ ಮೊತ್ತ 41/2). ಆದರೆ, ಕ್ರೀಸ್ ಕಚ್ಚಿ ನಿಂತ ಸಂಜು ಸ್ಯಾಮ್ಸನ್ ವಿಂಡೀಸ್ ಬೌಲರ್‌ಗಳನ್ನು ನಿರ್ದಾಕ್ಷಿಣ್ಯವಾಗಿ ದಂಡಿಸಿದರು. ನಾಯಕ ಸೂರ್ಯಕುಮಾರ್ ಯಾದವ್ (18 ರನ್) ಜೊತೆಗೂಡಿ 58 ರನ್‌ಗಳ ಮಹತ್ವದ ಜೊತೆಯಾಟ ಕಟ್ಟಿದ ಸಂಜು, ಇನಿಂಗ್ಸ್‌ಗೆ ಜೀವ ತುಂಬಿದರು. ಸೂರ್ಯಕುಮಾರ್ ಔಟಾದ ನಂತರ ಬಂದ ಯುವ ಆಟಗಾರ ತಿಲಕ್ ವರ್ಮಾ ಕೇವಲ 15 ಎಸೆತಗಳಲ್ಲಿ 27 ರನ್ ಸಿಡಿಸಿ ರನ್‌ಗತಿಗೆ ವೇಗ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಶೋಯೆಬ್ ಖಾನ್ | ಬಿಹಾರದ ಕುಗ್ರಾಮದಿಂದ ಯುಎಇ ವಿಶ್ವಕಪ್ ತಂಡದವರೆಗೆ ರೋಚಕ ಪಯಣ

ಅಂತಿಮ ಹಂತದಲ್ಲಿ ಪಂದ್ಯ ತೀವ್ರ ಕುತೂಹಲ ಕೆರಳಿಸಿತ್ತು. ಹಾರ್ದಿಕ್ ಪಾಂಡ್ಯ 14 ಎಸೆತಗಳಲ್ಲಿ 17 ರನ್ ಗಳಿಸಿ ನಿರ್ಗಮಿಸಿದರು. ಕೊನೆಯ 12 ಎಸೆತಗಳಲ್ಲಿ ಭಾರತದ ಗೆಲುವಿಗೆ 12 ರನ್‌ಗಳ ಅಗತ್ಯವಿತ್ತು. 19ನೇ ಓವರ್‌ನಲ್ಲಿ ಕ್ರೀಸ್‌ಗೆ ಬಂದ ಶಿವಂ ದುಬೆ 4 ಎಸೆತಗಳಲ್ಲಿ 8 ರನ್ ಬಾರಿಸಿ ಒತ್ತಡ ಕಡಿಮೆ ಮಾಡಿದರು. ಕೊನೆಯ ಓವರ್‌ನಲ್ಲಿ 7 ರನ್ ಬೇಕಿದ್ದಾಗ, ಸ್ಟ್ರೈಕ್‌ನಲ್ಲಿದ್ದ ಸಂಜು ಸ್ಯಾಮ್ಸನ್ ರೋಮಾರಿಯೊ ಶೆಫರ್ಡ್ ಅವರ ಮೊದಲ ಎಸೆತವನ್ನು ಸಿಕ್ಸರ್‌ಗಟ್ಟಿ, ಮರು ಎಸೆತವನ್ನು ಬೌಂಡರಿಗಟ್ಟುವ ಮೂಲಕ 19.2 ಓವರ್‌ಗಳಲ್ಲಿ (199/5) ತಂಡಕ್ಕೆ ಗೆಲುವು ತಂದುಕೊಟ್ಟರು.

​ಕೇವಲ 50 ಎಸೆತಗಳನ್ನು ಎದುರಿಸಿದ ಸಂಜು 12 ಆಕರ್ಷಕ ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 97 ರನ್ ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಕೇವಲ 3 ರನ್‌ಗಳಿಂದ ಚೊಚ್ಚಲ ಟಿ20 ವಿಶ್ವಕಪ್ ಶತಕವಂಚಿತರಾದರೂ, ಅವರು ಆಡಿದ ಈ ‘ಮ್ಯಾಚ್ ವಿನ್ನಿಂಗ್’ ಇನಿಂಗ್ಸ್ ಪ್ರೇಕ್ಷಕರ ಮನಗೆದ್ದಿತು.

​ಈ ರೋಚಕ ದಿಗ್ವಿಜಯದೊಂದಿಗೆ ಸೆಮಿಫೈನಲ್ ಪ್ರವೇಶಿಸಿರುವ ಟೀಮ್ ಇಂಡಿಯಾ, ಮಾರ್ಚ್ 5ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಸೆಮಿಫೈನಲ್ ಕದನದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...