ಸಿಂಹಳೀಯರು ಬಿಹಾರ ಮೂಲದವರು; ತಮಿಳುನಾಡು ನಮ್ಮ ಸಮಸ್ಯೆ ಅರ್ಥ ಮಾಡಿಕೊಂಡಿಲ್ಲ: ಮುತ್ತಯ್ಯ ಮುರಳೀಧರನ್

Date:

ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು ತಮ್ಮ ಜೀವನಗಾಥೆ ಕುರಿತ ‘800’ ಸಿನಿಮಾ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ ಶ್ರೀಲಂಕಾ ಕ್ರಿಕೆಟ್ ದಂತಕತೆ ಮತ್ತಯ್ಯ ಮುರಳೀಧರನ್,  ಶ್ರೀಲಂಕಾದಲ್ಲಿ ನಡೆಯುತ್ತಿರುವ ಸಿಂಹಳೀಯರು ಹಾಗೂ ತಮಿಳರ ಸಂಘರ್ಷದ ಬಗ್ಗೆ ಮಾತನಾಡಿದರು.

“ಭಾರತ ಹಾಗೂ ನಿರ್ದಿಷ್ಟವಾಗಿ ತಮಿಳುನಾಡಿನ ಸರ್ಕಾರಗಳು ಶ್ರೀಲಂಕಾದ ಅಂತರ್ಯುದ್ಧದ ಸಮಯದಲ್ಲಿ ಜನಾಂಗೀಯ ಸಂಘರ್ಷವನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿವೆ. ಶ್ರೀಲಂಕಾದಲ್ಲಿನ ಸಮಸ್ಯೆ ಭಾರತಕ್ಕೆ ಅರ್ಥವಾಗಲೇ ಇಲ್ಲ. ಇದು ನನ್ನ ಪ್ರಾಮಾಣಿಕ ಉತ್ತರ. ನಾನು ಇದನ್ನು ಹೇಳಲು ಹೆದರುವುದಿಲ್ಲ. ಭಾರತ ಎಂದರೆ ನಾನು ಕೇಂದ್ರ ಸರ್ಕಾರಕ್ಕೆ ಹೇಳುತ್ತಿಲ್ಲ, ತಮಿಳುನಾಡು ಸರ್ಕಾರಕ್ಕೆ ಅಲ್ಲಿನ ನಿಜವಾದ ಸಮಸ್ಯೆ ಏನೆಂದು ಅರ್ಥವಾಗಲಿಲ್ಲ. ಏಕೆಂದರೆ, ಶ್ರೀಲಂಕಾದಲ್ಲಿನ ತಮಿಳು ಸಮುದಾಯವು ತುಂಬಾ ವಿಭಿನ್ನವಾಗಿದೆ. ಅಲ್ಲಿನ ತಮಿಳು ಸಮುದಾಯದಲ್ಲಿ ಹಲವಾರು ಉಪಗುಂಪುಗಳಿವೆ” ಎಂದು ಮತ್ತಯ್ಯ ಮುರಳೀಧರನ್ ಹೇಳಿದರು.

ಇದೇ ಸಂದರ್ಭದಲ್ಲಿ ತಮ್ಮ ಪೂರ್ವಜರು ಶ್ರೀಲಂಕಾಕ್ಕೆ ವಲಸೆ ಹೋದ ಬಗ್ಗೆಯೂ ಮಾತನಾಡಿದರು. “ನನ್ನ ಅಜ್ಜ ಭಾರತದ ತಮಿಳುನಾಡು ಮೂಲದವರು. 1920 ರ ದಶಕದಲ್ಲಿ ಅವರು ಚಹಾ ತೋಟಗಳಿಗೆ ಕೆಲಸ ಮಾಡಲು ಹೋದರು. ಬ್ರಿಟಿಷರು ನಮ್ಮನ್ನು ಬಲವಂತವಾಗಿ ಅಲ್ಲಿಗೆ ಕರೆದೊಯ್ದರು. ಆದ್ದರಿಂದಲೇ ನಮ್ಮ ಕುಟುಂಬ ಹಾಗೂ ಸಮುದಾಯದವರು ಮಧ್ಯ ಶ್ರೀಲಂಕಾದಲ್ಲಿ ನೆಲೆ ಕಂಡುಕೊಂಡರು. ಅಲ್ಲಿನವರು ನಮ್ಮನ್ನು ಭಾರತೀಯ ಮೂಲದ ತಮಿಳರು ಎನ್ನುತ್ತಾರೆ. ಭಾರತೀಯರು ನಮ್ಮನ್ನು ಶ್ರೀಲಂಕಾ ತಮಿಳರು ಎಂದು ಸಂಬೋಧಿಸುತ್ತಾರೆ. ನಮ್ಮ ಭಾಷೆಯಲ್ಲಿಯೂ ಸ್ವಲ್ಪ ವ್ಯತ್ಯಾಸವಿದೆ. ಆದರು ನಮ್ಮ ಭಾಷೆ ತಮಿಳು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂಹಳೀಯರ ಮೂಲ ಬಿಹಾರ

“ಕೆಲವರು ಶ್ರೀಲಂಕಾದಲ್ಲಿ ಒಂದು ಭಾಗವನ್ನು ಪ್ರತ್ಯೇಕಿಸಿ ಪ್ರತ್ಯೇಕ ದೇಶವನ್ನುಕಟ್ಟಲು ಬಯಸಿದ್ದರು. ಆದರೆ ನಮಗೆ ಪ್ರತ್ಯೇಕ ದೇಶ ಬೇಕಾಗಿಲ್ಲ. ನಾವು ಎಲ್ಲರೊಂದಿಗೆ ಸೌಹಾರ್ದಯುತವಾಗಿ ಬಾಳಲು ಬಯಸಿದ್ದೇವೆ. ಭಾರತದಲ್ಲಿನ ಕೆಲವು ರಾಜಕಾರಣಿಗಳು ತಮ್ಮ ದೇಶದ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲಿಲ್ಲ. ನನ್ನನ್ನು ಒಳಗೊಂಡು ಹಲವರನ್ನು ‘ಜನಾಂಗದ ದ್ರೋಹಿ’ ಎಂದು ತೆಗಳಿದರು. ಅಲ್ಲದೆ ಕೆಲವು ಪ್ರಮುಖರು ನಾನು ತಮಿಳರ ಸಮಸ್ಯೆಗಳ ಬಗ್ಗೆ ಮಾತನಾಡಲಿಲ್ಲವೆಂದು ನಾನು ಸರ್ಕಾರದ ಪರವೆಂದು ನನ್ನನ್ನು ದ್ವೇಷಿಸಿದರು” ಎಂದು ಸ್ಪಿನ್‌ ಮಾಂತ್ರಿಕ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

“ಹಾಗೆ ನೋಡಿದರೆ ಶ್ರೀಲಂಕಾದ ಸಿಂಹಳೀಯರೂ ಭಾರತದ ಬಿಹಾರದವರು. ತಮಿಳುನಾಡಿನಲ್ಲಿ ನಮ್ಮ ಪೂರ್ವಜರು ಸಾಕಷ್ಟಿದ್ದಾರೆ. ಆದರೆ ಸುನಾಮಿ ಸಂದರ್ಭದಲ್ಲಿ ಕ್ರಿಕೆಟ್ ತಾರೆಯರಾದ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್ ಸೇರಿದಂತೆ ಹಲವರು ನಮಗೆ ಮಾಡಿದ ಸಹಾಯವನ್ನು ಮರೆಯಲಾರೆ. ಎಲ್ಲ ಮಹನೀಯರ ನೆರವಿನಿಂದ ನಾನು ಟ್ರಸ್ಟ್ ಸ್ಥಾಪಿಸಿದ್ದು, ಪ್ರತೀ ವರ್ಷವೂ ಸಾವಿರಾರು ಜನರಿಗೆ ಸಹಾಯ ಮಾಡುತ್ತಿದ್ದೇನೆ” ಎಂದರು.

1995ರಲ್ಲಿ ಆಸ್ಟ್ರೇಲಿಯ ವಿರುದ್ಧದ ಪಂದ್ಯದ ವೇಳೆ ಅಂಪೈರ್‌ನಿಂದ ಚಕಿಂಗ್‌ ವಿವಾದ ಎದುರಿಸಿದ ಸಮಸ್ಯೆಯನ್ನು ನೆನಪಿಸಿಕೊಂಡ ಮುರಳೀಧರನ್, “ಆಗ ಶ್ರೀಲಂಕಾ, ಭಾರತ ಸೇರಿ ಹಲವು ರಾಷ್ಟ್ರಗಳ ಅಭಿಮಾನಿಗಳು, ಕ್ರಿಕೆಟ್ ದಿಗ್ಗಜರು ನನ್ನ ಬೆಂಬಲಕ್ಕೆ ನಿಂತಿದ್ದರು. ಈ ಸಹಾಯ ಎಂದಿಗೂ ಮರೆಯಲಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...