ಟೀಂ ಇಂಡಿಯಾ ಕ್ರಿಕೆಟ್ ಕೋಚ್‌ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ

Date:

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ಗಂಭೀರ್ ದೂರು ನೀಡಿದ್ದಾರೆ.

ಗೌತಮ್ ಗಂಭೀರ್ ಅವರು ದೆಹಲಿ ಪೊಲೀಸರನ್ನು ಸಂಪರ್ಕಿಸಿ, ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೆಯೇ ತಮ್ಮ ಕುಟುಂಬದ ಭದ್ರತೆಯನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ ಎಂದು ರಾಜೇಂದ್ರ ನಗರ ಠಾಣೆ ಅಧಿಕಾರಿ ತಿಳಿಸಿದ್ದಾರೆ. ಏಪ್ರಿಲ್ 22 ರಂದು ಗಂಭೀರ್‌ಗೆ ಎರಡು ಬೆದರಿಕೆ ಇಮೇಲ್‌ಗಳು ಬಂದಿದ್ದವು. ಒಂದು ಇಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿತ್ತು. ಎರಡೂ ಸಂದೇಶಗಳಲ್ಲೂ ಐ ಕಿಲ್ಲ್ ಯು ಎಂದು ಬರೆಯಲಾಗಿತ್ತು. ಈ ಬೆದರಿಕೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಗೌತಮ್ ಗಂಭೀರ್ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಅಂದಹಾಗೆ ಟೀಮ್ ಇಂಡಿಯಾ ಕೋಚ್​ಗೆ ಇಂತಹದೊಂದು ಕೊಲೆ ಬೆದರಿಕೆ ಸಂದೇಶಗಳು ಬರುತ್ತಿರುವುದು ಇದೇ ಮೊದಲೇನಲ್ಲ. 2021 ರಲ್ಲಿ ಬಿಜೆಪಿ ಸಂಸರಾಗಿದ್ದ ವೇಳೆ ಗಂಭೀರ್​ಗೆ ಇದೇ ರೀತಿಯ ಇಮೇಲ್ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಅಬ್ಬರಿಸಿದ ಭಯೋತ್ಪಾದನೆ- ಮೋಶಾರತ್ತ ದಿಟ್ಟಿ ನೆಟ್ಟ ದೇಶ

ಇದೀಗ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ “ಐಸಿಸ್ ಕಾಶ್ಮೀರ” ಖಾತೆಯ ಹೆಸರಿನಿಂದ ಗೌತಮ್ ಗಂಭೀರ್​ಗೆ ಜೀವ ಬೆದರಿಕೆಯ ಸಂದೇಶ ಬಂದಿದೆ.

ಇದಕ್ಕೂ ಮುನ್ನ ಗೌತಮ್ ಗಂಭೀರ್ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು.

ಮೃತರ ಕುಟುಂಬಗಳಿಗಾಗಿ ಪ್ರಾರ್ಥಿಸುತ್ತೇನೆ. ಇದಕ್ಕೆ ಕಾರಣರಾದವರು ಬೆಲೆ ತೆರಬೇಕಾಗುತ್ತದೆ. ಇದಕ್ಕೆ ಪ್ರತೀಕಾರವಾಗಿ ಭಾರತ ತಿರುಗೇಟು ನೀಡಲಿದೆ ಎಂದು ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ “ಐಸಿಸ್ ಕಾಶ್ಮೀರ” ಹೆಸರಿನ ಮೇಲ್ ಐಡಿಯಿಂದ ಗೌತಮ್ ಗಂಭೀರ್​ಗೆ ಕೊಲೆ ಬೆದರಿಕೆಯೊಡ್ಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...