ಏಪ್ಯಾ ಕಪ್ | ಶತಕದ ಮೂಲಕ ‘ಗಂಭೀರ’ವಾಗಿ ಉತ್ತರಿಸಿದ ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್

Date:

  • ಮುರಿಯದ ಮೂರನೇ ವಿಕೆಟ್‌ಗೆ 233 ರನ್ ಕಲೆ ಹಾಕಿದ ಕೊಹ್ಲಿ-ರಾಹುಲ್ ಜೋಡಿ
  • ಪಾಕಿಸ್ತಾನಕ್ಕೆ ಗೆಲ್ಲಲು 357 ರನ್‌ಗಳ ಬೃಹತ್ ಗುರಿ ನೀಡಿದ ಟೀಮ್ ಇಂಡಿಯಾ

ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಟೀಕಾಕಾರರಿಂದ ಟೀಕೆಗೆ ಒಳಗಾಗಿದ್ದ ಕನ್ನಡಿಗ ಕೆ ಎಲ್ ರಾಹುಲ್ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ‘ಕಮ್ ಬ್ಯಾಕ್’ ಮಾಡಿದ್ದಾರೆ.

ಕೆ ಎಲ್ ರಾಹುಲ್ ಜೊತೆಗೆ ವಿರಾಟ್ ಕೊಹ್ಲಿ ಕೂಡ ಶತಕ ಬಾರಿಸಿದ್ದು, ತನ್ನ ಬ್ಯಾಟಿಂಗ್ ಬಗ್ಗೆ ಟೀಕಿಸಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಬ್ಯಾಟ್ ಮೂಲಕವೇ ಉತ್ತರಿಸಿದ್ದಾರೆ.

ನಿನ್ನೆ (ಸೆಪ್ಟೆಂಬರ್‌ 10) ಕೊಲೊಂಬೋದ ಆರ್ ಪ್ರೇಮದಾಸ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನದ ಏಷ್ಯಾ ಕಪ್ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿತ್ತು. ಸೂಪರ್-4 ಹಂತದ ನಿನ್ನೆಯ ಪಂದ್ಯವನ್ನು ಸೆಪ್ಟೆಂಬರ್​ 11ಕ್ಕೆ ಮುಂದೂಡಲಾಗಿತ್ತು. ಪಂದ್ಯ ನಿಲ್ಲುವ ಹೊತ್ತಿಗೆ ಭಾರತ 147/2 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ (ಅಜೇಯ 8) ಮತ್ತು ಕೆ.ಎಲ್. ರಾಹುಲ್ (ಅಜೇಯ 17) ರನ್ ಗಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಬ್ಯಾಟಿಂಗ್ ಆರಂಭಿಸಿದ ಈ ಜೋಡಿ ಮುರಿಯದ ಮೂರನೇ ವಿಕೆಟ್‌ಗೆ 233 ರನ್ ಕಲೆ ಹಾಕಿತು.

ಕೆ ಎಲ್ ರಾಹುಲ್ 106 ಎಸೆತಗಳಲ್ಲಿ 12 ಬೌಂಡರಿ ಹಾಗೂ 2 ಸಿಕ್ಸರ್‌ನ ನೆರವಿನಿಂದ 111 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ ಮೂರು ಸಿಕ್ಸ್, 9 ಬೌಂಡರಿಗಳ ನೆರವಿನಿಂದ 122 ರನ್ ಬಾರಿಸಿ, ಔಟಾಗದೆ ಉಳಿದರು. ಆ ಮೂಲಕ ಪಂದ್ಯವನ್ನು ಗೆಲ್ಲಲು ಪಾಕಿಸ್ತಾನಕ್ಕೆ 357 ರನ್‌ಗಳ ಬೃಹತ್ ಗುರಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...