ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಡಿಎಲ್‌ಎಸ್ ನಿಯಮದಂತೆ ಭಾರತಕ್ಕೆ 2 ರನ್‌ಗಳ ಜಯ

Date:

ಭಾರತ ಹಾಗೂ ಐರ್ಲೆಂಡ್ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ ರನ್‌ಗಳ ಆಧಾರದಲ್ಲಿ ಮುನ್ನಡೆಯಲ್ಲಿದ್ದ ಟೀಂ ಇಂಡಿಯಾ ತಂಡವನ್ನು ಡಿಎಲ್‌ಎಸ್‌ ನಿಯಮದ ಪ್ರಕಾರ 2 ರನ್‌ಗಳ ಅಂತರದಲ್ಲಿ ವಿಜೇತ ತಂಡ ಎಂದು ಘೋಷಿಸಲಾಯಿತು. ಇದರೊಂದಿಗೆ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

ಐರ್ಲೆಂಡ್ ನೀಡಿದ 140 ರನ್‌ಗಳನ್ನು ಬೆನ್ನಟ್ಟಿದ ಜಸ್‌ಪ್ರೀತ್ ಬೂಮ್ರ ಸಾರಥ್ಯದ ಭಾರತ ತಂಡ 6.5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 47 ರನ್‌ ಗಳಿಸಿದ್ದಾಗ ವರುಣನ ಆಗಮನವಾಯಿತು. ಎರೆಡು ಗಂಟೆ ಕಾದರೂ ಮಳೆ ನಿಲ್ಲದ ಕಾರಣ ಪಂದ್ಯದ ರೆಫ್ರಿ ರನ್‌ ರೇಟ್‌ ಆಧಾರದಲ್ಲಿ ಮುನ್ನಡೆಯಲ್ಲಿದ್ದ ಟೀಂ ಇಂಡಿಯಾವನ್ನು ಜಯ ಗಳಿಸಿದ ತಂಡ ಎಂದು ಘೋಷಿಸಿದರು.

ಭಾರತದ ಪರ ಯಶಸ್ವಿ 24, ತಿಲಕ್‌ ವರ್ಮಾ ಶೂನ್ಯಕ್ಕೆ ಔಟಾಗಿದ್ದರೆ, ಋತುರಾಜ್‌ ಗಾಯಕ್‌ವಾಡ್‌ 19, ಸಂಜು ಸ್ಯಾಮ್ಸನ್‌ 1 ರನ್‌ ಗಳಿಸಿ ಆಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮೊದಲು ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್‌, 7 ವಿಕೆಟ್ ಕಳೆದುಕೊಂಡು 139 ರನ್‌ ಕಲೆ ಹಾಕಿತು.

ಐರ್ಲೆಂಡ್‌ ಆರಂಬದಲ್ಲೇ ಬ್ಯಾಟಿಂಗ್‌ನಲ್ಲಿ ಕುಸಿತ ಕಂಡಿತು. ಗಾಯಗೊಂಡು ಸುದೀರ್ಘ ಅಂತರದ ಬಳಿಕ ಮೈದಾನಕ್ಕಿಳಿದ ನಾಯಕ ಹಾಗೂ ವೇಗಿ ಜಸ್ಪ್ರೀತ್‌ ಬೂಮ್ರಾ, ಮೊದಲ ಓವರ್‌ನಲ್ಲೇ ಐರ್ಲೆಂಡ್‌ ತಂಡದ ಮೊದಲ ಎರಡು ವಿಕೆಟ್‌ ಕಬಳಿಸಿದರು.

ಆ ಮೂಲಕ ಟೀಮ್‌ ಇಂಡಿಯಾ ಆರಂಭಿಕ ಮುನ್ನಡೆ ಸಾಧಿಸಿತು. ಬಾಲ್ಬಿರ್ನಿ ಒಂದು ಬೌಂಡರಿ ಸಿಡಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬಂದ ಟಕ್ಕರ್‌ ಶೂನ್ಯಕ್ಕೆ ನಿರ್ಗಮಿಸಿದರು. ನಾಯಕ ಸ್ಟಿರ್ಲಿಂಗ್‌ ಆಟ 11 ರನ್‌ಗಳಿಗೆ ಅಂತ್ಯವಾಯ್ತು.

ಈ ಸುದ್ದಿ ಓದಿದ್ದೀರಾ? ಭಾರತ – ಐರ್ಲೆಂಡ್‌ ಟಿ20 ಸರಣಿ: ಮೊದಲ ಪಂದ್ಯಕ್ಕೆ ಮಳೆಯ ಭೀತಿ?

ಒಂದು ಹಂತದಲ್ಲಿ ತಂಡಕ್ಕೆ ತುಸು ಬಲ ತುಂಬಿದ ಕರ್ಟಿಸ್ ಕ್ಯಾಂಫರ್ ನಿಧಾನಗತಿಯಲ್ಲಿ ಬ್ಯಾಟ್‌ ಬೀಸಿ 39 ರನ್‌ ಕಲೆ ಹಾಕಿದರು. ಮತ್ತೊಂದೆಡೆ ಕೊನೆಯ ಓವರ್‌ಗಳಲ್ಲಿ ಅಬ್ಬರಿಸಿದ ಬ್ಯಾರಿ ಮೆಕಾರ್ಥಿ 51 ರನ್‌ ಗಳಿಸುವುದರೊಂದಿಗೆ ಕೊನೆಯ ಎಸೆತದಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅವರ ಆಟದಲ್ಲಿ ಭರ್ಜರಿ ನಾಲ್ಕು ಸಿಕ್ಸರ್‌ ಸಿಡಿಸಿದ್ದರು.

ಟೀಮ್‌ ಇಂಡಿಯಾ ಪರ ನಾಯಕ ಬೂಮ್ರಾ 2 ವಿಕೆಟ್‌ ಕಬಳಿಸಿದರೆ, ಕನ್ನಡಿಗ ಪ್ರಸಿದ್ಧ ಕೃಷ್ಣ ಹಾಗೂ ರವಿ ಬಿಷ್ಣೋಯ್‌ ಕೂಡಾ ತಲಾ 2 ವಿಕೆಟ್‌ ಪಡೆದರು. ಅರ್ಷದೀಪ್‌ ಒಂದು ವಿಕೆಟ್‌ ಪಡೆದರು. ಎದುರಾಳಿ ತಂಡದ ರನ್‌ಗಳನ್ನು ಕಟ್ಟಿಹಾಕಿದ ಕಾರಣಕ್ಕೆ ಬೂಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಮೈದಾನಕ್ಕಿಳಿಯುವುದರೊಂದಿಗೆ ಬೂಮ್ರಾ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಟಿ20 ಸ್ವರೂಪದಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಮೊದಲ ಬೌಲರ್ ಎಂಬ ಇತಿಹಾಸವನ್ನು ನಿರ್ಮಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...