ಟಿ20 ವಿಶ್ವಕಪ್ | ನೇಪಾಳಕ್ಕೆ ಆಘಾತ; 1 ರನ್‌ನಿಂದ ಸೌತ್ ಆಫ್ರಿಕಾ ವಿರುದ್ಧ ವಿರೋಚಿತ ಸೋಲು

Date:

ಏಡೆನ್ ಮಾರ್ಕರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು 115 ರನ್‌ಗಳಿಗೆ ಕಟ್ಟಿ ಹಾಕಿದ್ದ ನೇಪಾಳ, ಚೇಸಿಂಗ್‌ ಮಾಡುವಾಗ ಎಡವಿದೆ.

ಕೊನೆಯ ಬಾಲ್‌ನಲ್ಲಿ ಗೆಲ್ಲಲು ಎರಡು ರನ್‌ಗಳ ಅವಶ್ಯಕತೆ ಇದ್ದಾಗ ಅನಿರೀಕ್ಷತವಾಗಿ ರನೌಟ್ ಆದ ಪರಿಣಾಮ, ಹರಿಣಗಳ ಪಡೆ ಎದುರು ಕೇವಲ ಒಂದು ರನ್‌ನಿಂದ ಪಂದ್ಯವನ್ನು ನೇಪಾಳ ಕಳೆದುಕೊಂಡಿತು. ಅನಿರೀಕ್ಷಿತ ಸೋಲಿನಿಂದ ನೇಪಾಳ ತಂಡ ಹಾಗೂ ತಂಡದ ಅಭಿಮಾನಿಗಳು ಆಘಾತಕ್ಕೊಳಗಾದರು. ಒಂದು ವೇಳೆ ರನ್ ಪೂರ್ತಿಯಾಗಿದ್ದಿದ್ದರೆ ಸೂಪರ್ ಓವರ್ ಆಗುವ ಸಾಧ್ಯತೆ ಇತ್ತು. ಆದರೆ ಅದೃಷ್ಟ ನೇಪಾಳದ ಕಡೆಗೆ ವಾಲಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಸೂಪರ್‌-8ರ ಘಟಕ್ಕೆ ಆರ್ಹತೆ ಪಡೆದಿದ್ದ ದಕ್ಷಿಣ ಆಫ್ರಿಕಾ, ನೇಪಾಳ ವಿರುದ್ಧ ರೋಚಕವಾಗಿ ಗೆಲ್ಲುವ ಮೂಲಕ ಗುಂಪು ಹಂತದಲ್ಲಿ ಆಡಿದ 4 ಪಂದ್ಯಗಳನ್ನು ಗೆದ್ದಿರುವ ಸಾಧಿನೆ ಮಾಡಿದೆ. ನೇಪಾಳ ತಂಡ ಟೂರ್ನಿಯಿಂದ ಔಟ್‌ ಆದರೆ, ಬಾಂಗ್ಲಾದೇಶ ಸೂಪರ್‌-8 ಸುತ್ತಿಗೆ ಆರ್ಹತೆ ಪಡೆಯುವುದು ಬಹುತೇಕ ಖಚಿತವಾಗಿದೆ.

NEPAL RUNOUT
ರನೌಟ್ ಆದ ಕ್ಷಣ

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದ ನೇಪಾಳ ತಂಡದ ನಾಯಕ ರೋಹಿತ್ ಪೌಡೆಲ್ ಅವರು ದಕ್ಷಿಣ ಆಫ್ರಿಕಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿ ಕಾಕ್ ಮತ್ತು ರೀಜಾ ಹೆಂಡ್ರಿಕ್ಸ್ ಜೋಡಿ ಉತ್ತಮ ಅಡಿಪಾಯ ಹಾಕಲಿಲ್ಲ. ಕ್ವಿಂಟನ್ ಡಿ ಕಾಕ್ 10 ರನ್‌ಗೆ ಔಟ್‌ ಆದರೆ, ಬಳಿಕ ಬಂದ ನಾಯಕ ಐಡೆನ್ ಮಾರ್ಕ್ರಾಮ್ (15), ಹೆನ್ರಿಚ್ ಕ್ಲಾಸೆನ್ (3) ಮತ್ತು ಡೇವಿಡ್ ಮಿಲ್ಲರ್ (7) ನೇಪಾಳ ಬೌಲರ್‌ಗಳ ಎದುರು ತಂಡದ ಪರ ಅತಿಹೆಚ್ಚು ರನ್‌ ಗಳಿಸದೆ ವಿಕೆಟ್‌ ಕಳೆದುಕೊಂಡರು. ಕುಸಿದ ದಕ್ಷಿಣ ಆಫ್ರಿಕಾ ಪರ ರೀಜಾ ಹೆಂಡ್ರಿಕ್ಸ್ ಜವಾಬ್ದಾರಿಯುತ ಇನ್ನಿಂಗ್ಸ್‌ ಆಡಿದರು.

ಹೆಂಡ್ರಿಕ್ಸ್‌ ಎದುರಿಸಿದ 49 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್‌ ನೆರವಿನಿಂದ 43 ರನ್‌ಗಳನ್ನು ಹೊಡೆದು ವಿಕೆಟ್‌ ಕಳೆದುಕೊಂಡರು. ನಂತರ ಮಾರ್ಕೊ ಜಾನ್ಸೆನ್ (1) ಮತ್ತು ಕಗಿಸೊ ರಬಾಡಾ ಶೂನ್ಯಕ್ಕೆ ಔಟ್‌ ಆದರು ಇಂತಹ ಪರಿಸ್ಥಿತಿಯಲ್ಲಿ ಯುವ ಬ್ಯಾಟರ್‌ ಟ್ರಿಸ್ಟಾನ್ ಸ್ಟಬ್ಸ್ 18 ಎಸೆತಗಳಲ್ಲಿ ಅಜೇಯ 27 ರನ್‌ ಬಾರಿಸಿದರು. ಹೀಗಾಗಿ ದಕ್ಷಿಣ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 115 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತು.

ನೇಪಾಳ ಪರ ಕುಶಾಲ್ ಭುರ್ಟೆಲ್ 4 ವಿಕೆಟ್‌ ಉರುಳಿಸಿ ಮಿಂಚಿದರೆ, ದೀಪೇಂದ್ರ ಸಿಂಗ್ 3 ವಿಕೆಟ್‌ ಪಡೆದು ಸಂಭ್ರಮಿಸಿದರು.

ಹರಿಣಗಳ ಪಡೆ ನೀಡಿದ 116 ರನ್‌ಗಳ ಗುರಿ ಬೆನ್ನಟ್ಟಿದ ನೇಪಾಳ ಪರ ಆಸಿಫ್ ಶೇಖ್ ಮತ್ತು ಅನಿಲ್ ಸಾಹ್ ಉತ್ತಮ ಇನ್ನಿಂಗ್ಸ್‌ ಆಡಿದರು. ಆದರೆ ದಕ್ಷಿಣ ಆಫ್ರಿಕಾದ ತಬ್ರೈಝ್ ಶಮ್ಸಿ ಸ್ಪಿನ್‌ ಮೋಡಿಗೆ ಸಿಲುಕಿದ ನೇಪಾಳ ಬ್ಯಾಟರ್‌ಗಳು ಒಬ್ಬೊಬ್ಬರಾಗಿ ವಿಕೆಟ್‌ ಕಳೆದುಕೊಂಡರು.

ಕುಶಾಲ್ ಭುರ್ಟೆಲ್ 13 ರನ್ ಗಳಿಸಿದರೆ ಹಾಗೂ ನಾಯಕ ರೋಹಿತ್ ಪೌಡೆಲ್ ಶೂನ್ಯಕ್ಕೆ ಔಟ್‌ ಅದರು. ಬಳಿಕ ಒಂದಾದ ಆಸಿಫ್ ಶೇಖ್ ಮತ್ತು ಅನಿಲ್ ಸಾಹ್ ಜೋಡಿ ಅರ್ಧಶತಕದ ಜೊತೆಯಾಟವಾಡಿತು.

ಆಸಿಫ್ ಶೇಖ್ 49 ಎಸೆತಗಲ್ಲಿ 4 ಬೌಂಡರಿ, 1 ಸಿಕ್ಸರ್‌ ನೆರವಿನಿಂದ 41 ರನ್‌ಗಳಿಸಿ ಔಟ್‌ ಆದರೆ, ‌ಅನಿಲ್ ಸಾಹ್ 24 ಎಸೆತಗಳನ್ನು 3 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 27 ರನ್ ‌ಹೊಡೆದು ವಿಕೆಟ್‌ ಕಳೆದುಕೊಂಡರು. ಬಳಿಕ ಕ್ರೀಸ್‌ಗೆ ಬಂದ ಯಾವುದೇ ಬ್ಯಾಟರ್‌ಗಳು ನೇಪಾಳ ತಂಡದ ಗೆಲುವಿಗೆ ಶ್ರಮಿಸಲಿಲ್ಲ.

ಕುಶಾಲ್ ಮಲ್ಲಾ(1), ದೀಪೇಂದ್ರ ಸಿಂಗ್ ಐರಿ (6) ಔಟ್‌ ಆದರೆ, ಗುಲ್ಸನ್ ಝಾ (6) ಕೊನೆಯಲ್ಲಿ ತಂಡದ ಗೆಲುವಿಗೆ 1 ಎಸೆತದಲ್ಲಿ ಎರಡು ರನ್‌ ಬೇಕಿದಾಗ ದುರದೃಷ್ಟಕರ ರನೌಟ್‌ ಆದರು. ಈ ಮೂಲಕ ಹರಿಣಗಳ ಪಡೆ 1 ರನ್‌ನಿಂದ ರೋಚಕ ಪಂದ್ಯವನ್ನು ಗೆದ್ದು ಬೀಗಿತು.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ಐರ್ಲ್ಯಾಂಡ್-ಯುಎಸ್‌ಎ ಪಂದ್ಯ ಮಳೆಗಾಹುತಿ; ಟೂರ್ನಿಯಿಂದಲೇ ಔಟಾದ ಪಾಕಿಸ್ತಾನ!

ಸೌತ್ ಆಫ್ರಿಕಾ ಪರ ಬೌಲಿಂಗ್‌ನಲ್ಲಿ ತಬ್ರೈಝ್‌ ಶಮ್ಸಿ 19 ರನ್‌ ನೀಡಿ 4 ಕಬಳಿಸಿದರೆ, ಆನ್ರಿಚ್ ನಾರ್ಟ್ಜೆ ಮತ್ತು ಐಡೆನ್ ಮಾರ್ಕ್ರಾಮ್ ತಲಾ ಒಂದೊಂದು ವಿಕೆಟ್‌ ಪಡೆದುಕೊಂಡರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...