ಅಂಧ ವನಿತೆಯರ ಟಿ20 ವಿಶ್ವಕಪ್: ಪಾಕ್ ಆಟಗಾರ್ತಿಯರ ಕೈಕುಲುಕಿ ಕ್ರೀಡಾ ಸ್ಫೂರ್ತಿ ಮೆರೆದ ಟೀಂ ಇಂಡಿಯಾ

Date:

ಅಂಧ ವನಿತೆಯರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಎಂಟು ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತು. ಎದುರಾಳಿಗಳು ನೀಡಿದ 136 ರನ್‍ಗಳ ಸವಾಲನ್ನು ಕೇವಲ 10 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ ತಲುಪುವ ಮೂಲಕ ಟೂರ್ನಿಯಲ್ಲಿ ಸತತ ಐದನೇ ಜಯ ದಾಖಲಿಸಿತು.

ಅಗ್ರ ಕ್ರಮಾಂಕದ ಆಟಗಾರರ ಕಳಪೆ ಪ್ರದರ್ಶನದಿಂದ ಟೂರ್ನಿಯ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ಒಂದು ಹಂತದಲ್ಲಿ 23 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡು ದಯನೀಯ ಸ್ಥಿತಿಯಲ್ಲಿತ್ತು. ಆದರೆ ಮೆಹ್ರೀನ್ ಅಲಿ (66) ಮತ್ತು ಬುಶ್ರಾ ಅಶ್ರಫ್ (44) ತಂಡವನ್ನು ಮೇಲೆತ್ತುವ ಪ್ರಯತ್ನ ಮಾಡಿದರು. ಭಾರತ ಈ ಪಂದ್ಯದಲ್ಲಿ ಏಳು ರನೌಟ್ ಮಾಡುವ ಮೂಲಕ ಗಮನ ಸೆಳೆಯಿತು.

ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಭಾರತದ ಪರ ನಾಯಕಿ ದೀಪಿಕಾ ಟಿಸಿ (45) ಮತ್ತು ಅನೇಖಾ ದೇವಿ (ಅಜೇಯ 64) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅನೇಖಾ ಅವರ ಭರ್ಜರಿ ಪ್ರದರ್ಶನದಿಂದ ಭಾರತ ಸೆಮೀಸ್ ಅರ್ಹತೆ ಸಂಪಾದಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಐಪಿಎಲ್ 2026 | ಸಂಜು ಸ್ಯಾಮ್ಸನ್ ಸಿಎಸ್‌ಕೆಗೆ ಸೇರ್ಪಡೆ, ರವೀಂದ್ರ ಜಡೇಜಾ ರಾಜಸ್ಥಾನಕ್ಕೆ ವಾಪಸ್

ಉಭಯ ದೇಶಗಳ ನಡುವಿನ ಹಳಸಿದ ಸಂಬಂಧದ ನಡುವೆ ಗಮನ ಸೆಳೆದ ಅಂಶವೆಂದರೆ, ಉಭಯ ತಂಡಗಳ ಆಟಗಾರ್ತಿಯರು ಪರಸ್ಪರ ಹಸ್ತಲಾಘವ ನೀಡಿ ಕ್ರೀಡಾಸ್ಫೂರ್ತಿ ಮೆರೆದದ್ದು. ಟಾಸ್ ಸಂದರ್ಭದಲ್ಲಿ ಹ್ಯಾಂಡ್‍ಶೇಕ್ ಇಲ್ಲದಿದ್ದರೂ, ಪಂದ್ಯದ ಬಳಿಕ ಭಾರತ ತಂಡದ ಆಟಗಾರ್ತಿಯರು ಹಸ್ತಲಾಘವ ನೀಡಿದರು.

ಇತ್ತೀಚೆಗೆ ನಡೆದ ಏಷ್ಯಾ ಕಪ್, ವನಿತಾ ವಿಶ್ವಕಪ್ ಹಾಗೂ ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಪಂದ್ಯಗಳಲ್ಲಿ ಉಭಯ ತಂಡಗಳ ಆಟಗಾರರು ಹಸ್ತಲಾಘವ ನೀಡಿರಲಿಲ್ಲ ಎನ್ನುವುದು ಗಮನಾರ್ಹ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...