ಕೆಎಸ್‌ಸಿಎ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟಕ್ಕೆ ಹೈಕೋರ್ಟ್‌ ತಡೆ

Date:

ಡಿಸೆಂಬರ್‌ 7ರಂದು ನಿಗದಿಯಾಗಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಗುರುವಾರದವರೆಗೆ ಪ್ರಕಟಿಸದಂತೆ ಹೈಕೋರ್ಟ್‌, ಚುನಾವಣಾಧಿಕಾರಿಗೆ ಬುಧವಾರ ನಿರ್ದೇಶನ ನೀಡಿದೆ. ಅಲ್ಲದೆ, ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿದೆ.

ತಾಂತ್ರಿಕ ಅಂಶ ಮುಂದಿಟ್ಟುಕೊಂಡು ತಾವು ಸಲ್ಲಿಸಿದ್ದ ನಾಮಪತ್ರ ತಿರಸ್ಕರಿಸಿರುವ ಚುನಾವಣಾಧಿಕಾರಿಗಳ ಕ್ರಮ ಪ್ರಶ್ನಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಕೆ ಎನ್‌ ಶಾಂತಕುಮಾರ್‌ ಸಲ್ಲಿಸಿದ್ದ ಅರ್ಜಿ ಕುರಿತು ನ್ಯಾ. ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ – ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, “ಚುನಾವಣೆಯ ಅಧ್ಯಕ್ಷ ಸ್ಥಾನದ ಕುರಿತು ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸದಂತೆ ನಿರ್ಬಂಧ ವಿಧಿಸಲಾಗುವುದು ಮತ್ತು ನಾಮಪತ್ರ ತಿರಸ್ಕೃತಗೊಂಡಿರುವ ಸಂಬಂಧ ದಾಖಲೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸಬೇಕು,” ಎಂದು ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರ ಜತೆಗೆ, ಪ್ರತಿವಾದಿಗಳಾದ ಬಿ.ಕೆ. ವೆಂಕಟೇಶ್‌ ಪ್ರಸಾದ್‌, ಕಲ್ಪನಾ ವೆಂಕಟಾಚಾರ್‌, ಕೆಎಸ್‌ಸಿಎ ಚುನಾವಣಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ.

ವಿಚಾರಣೆ ವೇಳೆ ನ್ಯಾಯಾಲಯ, “ನಾಮಪತ್ರ ಪರಿಶೀಲನೆ ವೇಳೆಗೆ ಚಂದಾ ಹಣ ಪಾವತಿಸಲಾಗಿತ್ತೇ ಇಲ್ಲವೇ ಎಂಬ ಬಗ್ಗೆ ಚುನಾವಣಾಧಿಕಾರಿಗಳಿಗೆ ಮೊದಲೇ ಮಾಹಿತಿ ಇತ್ತೇ,” ಎಂದು ಪ್ರಶ್ನಿಸಿತು.

ಇದನ್ನು ಓದಿದ್ದೀರಾ? ದೀಪಿಕಾ ಟಿ ಸಿ | ಅಂಧತ್ವದ ಗೆರೆಗಳನ್ನು ಮೀರಿ ಕ್ರಿಕೆಟ್‌ನಲ್ಲಿ ಬೆಳಗುತ್ತಿರುವ ನಕ್ಷತ್ರ

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಚುನಾವಣೆಗೆ ಮಾಜಿ ಅಧ್ಯಕ್ಷ ಬ್ರಿಜೇಶ್‌ ಪಟೇಲ್‌ ಬಣದಿಂದ ಕೆ ಎನ್‌ ಶಾಂತಕುಮಾರ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಮತ್ತೊಂದು ಬಣದಿಂದ ಮಾಜಿ ಕ್ರಿಕೆಟಿಗ ಬಿ ಕೆ ವೆಂಕಟೇಶ್‌ ಪ್ರಸಾದ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಧಿಸಿದ್ದರು.

ನ್ಯಾಯಾಲಯದ ನಿರ್ದೇಶನದಂತೆ ನಾಮಪತ್ರ ಪರಿಶೀಲನೆ ನಡೆಸಿದಾಗ, ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಕೆ.ಎನ್‌. ಶಾಂತಕುಮಾರ್‌ ಕೇವಲ 200 ರೂ. ವಂತಿಗೆ ಹಣ ಬಾಕಿ ಉಳಿಸಿಕೊಂಡಿದ್ದರೆಂಬ ಕಾರಣ ನೀಡಿ ಅವರ ನಾಮಪತ್ರ ತಿರಸ್ಕರಿಸಲಾಗಿತ್ತು. ಹೀಗಾಗಿ, ವೆಂಕಟೇಶ್‌ ಪ್ರಸಾದ್‌ ಮತ್ತು ಕಲ್ಪನಾ ವೆಂಕಟಾಚಾರ್‌ ನಾಮಪತ್ರ ಸಿಂಧು ಎಂದು ಪ್ರಕಟಿಸಲಾಗಿತ್ತು. ಇಬ್ಬರೂ ಒಂದೇ ಬಣಕ್ಕೆ ಸೇರಿರುವುದರಿಂದ ವೆಂಕಟೇಶ್‌ ಪ್ರಸಾದ್‌ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ನಿಚ್ಚಳವಾಗಿತ್ತು. ಹಾಗೆಯೇ ವೆಂಕಟಢಶ್ ಪ್ರಸಾದ್ ಬಣದಿಂದ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದ ಕೆಎಸ್‌ಸಿಎ ಮಾಜಿ ಖಜಾಂಚಿ ವಿನಯ್‌ ಮೃತ್ಯುಂಜಯ ಅವರ ನಾಮಪತ್ರ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕೃತಗೊಂಡಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...