ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್

Date:

ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ  ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್ 12 ದಿನಗಳ ನಂತರ ಮೌನ ಮುರಿದಿದ್ದಾರೆ.

ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿರುವ 32 ವರ್ಷದ ಮಿಚೆಲ್ ಮಾರ್ಷ್ ಅವರು “ನಾನು ಕಾಲಿಟ್ಟಿರುವ ಟ್ರೋಫಿಯ ಭಾವಚಿತ್ರದಲ್ಲಿ ನಿಸ್ಸಂಶಯವಾಗಿ ಯಾವುದೇ ಅಗೌರವ ಇರಲಿಲ್ಲ. ನಾನು ಅದರ ಬಗ್ಗೆ ಹೆಚ್ಚು ಯೋಚಿಸಲೂ ಇಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಈ ಫೋಟೋ ವೈರಲ್‌ ಆಗಿರುವ ಬಗ್ಗೆ ನನ್ನ ಸ್ನೇಹಿತರು ಹೇಳಿದ್ದರು. ನಾನು ಯಾವ ಸಂದೇಶವನ್ನು ಕೂಡ ನೋಡಿಲ್ಲ. ಭಾವಚಿತ್ರದಲ್ಲಿ ಯಾವುದೇ ಅಗೌರವ ಇಲ್ಲ” ಎಂದು ತಿಳಿಸಿದ್ದಾರೆ.

ಆಸೀಸ್‌ನ ಎರಡನೇ ಕ್ರಮಾಂಕದ ಆಟಗಾರ ಮಿಚೆಲ್ 2 ಶತಕ ಹಾಗೂ 1 ಅರ್ಧ ಶತಕದೊಂದಿಗೆ ಟೂರ್ನಿಯಲ್ಲಿ 441 ರನ್‌ ಕಲೆ ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರ ತಂದೆ ಜೆಫ್‌ ಮಾರ್ಷ್ ಕೂಡ 80ರ ದಶಕದಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಆಟಗಾರರಾಗಿದ್ದು, 1987ರಲ್ಲಿ ಆಸೀಸ್‌ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಬಳಗದ ಸದಸ್ಯರಾಗಿದ್ದರು. ಇವರ ಸೋದರ ಶೇನ್‌ ಮಾರ್ಷ್ ಕೂಡ ಕ್ರಿಕೆಟ್ ಆಟಗಾರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಟ್ಯಾಕ್ಸಿ ಚಾಲಕನ ಸಲಹೆಗೆ ಕೃತಜ್ಞತೆ ಸಲ್ಲಿಸಿದ ಕ್ರಿಕೆಟಿಗ ಜಾಂಟಿ ರೋಡ್ಸ್

ವಿಶ್ವಕಪ್ ಗೆಲುವಿನ ನಂತರ ಸಂಭ್ರಮ ಆಚರಿಸಿಕೊಂಡಿದ್ದ ಆಸೀಸ್ ಪಡೆ, ತನ್ನ ತಂಡದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿತ್ತು. ಚಿತ್ರವೊಂದರಲ್ಲಿ ಮಿಚೆಲ್ ಮಾರ್ಷ್ ಟ್ರೋಫಿಯ ಮೇಲೆ ಕಾಲಿಟ್ಟು ಪೋಸ್ ನೀಡಿದ್ದರು. ಮಿಚೆಲ್ ಮಾರ್ಷ್ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್‌ ಆಗಿತ್ತು.

ನ.19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ತಂಡವನ್ನು ಪ್ಯಾಟ್‌ ಕಮಿನ್ಸ್ ಸಾರಥ್ಯದ ಆಸ್ಟ್ರೇಲಿಯಾ ಬಳಗ 6 ವಿಕೆಟ್‌ನಿಂದ ಮಣಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

ಟೂರ್ನಿಯುದ್ದಕ್ಕೂ ಒಂದೂ ಪಂದ್ಯವನ್ನು ಸೋಲದ ಭಾರತ ಫೈನಲ್‌ ಪಂದ್ಯದಲ್ಲಿ ಎಡವಿತ್ತು. ಕೇವಲ 240 ರನ್‌ಗಳಿಗೆ ಆಲೌಟ್‌ ಆಗಿತ್ತು. ಈ ರನ್‌ಗಳನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತ್ತು.

ಸದ್ಯ ಟೀಂ ಇಂಡಿಯಾ – ಆಸ್ಟ್ರೇಲಿಯಾ ವಿರುದ್ಧ ಭಾರತದಲ್ಲಿ 5 ಪಂದ್ಯಗಳ ಟಿ20 ಸರಣಿ ಆಡುತ್ತಿದ್ದು, ಈಗಾಗಲೇ 2-1ರಲ್ಲಿ ಭಾರತ ಮುಂದಿದ್ದು, ಉಳಿದ ಎರಡು ಪಂದ್ಯಗಳು ರಾಯ್‌ಪುರ ಹಾಗೂ ಬೆಂಗಳೂರಿನಲ್ಲಿ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...