ಏಪ್ರಿಲ್ 2, 2011: ಟೀಮ್ ಇಂಡಿಯಾ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನ; ಐತಿಹಾಸಿಕ ಕ್ಷಣ ಮೆಲುಕು ಹಾಕಿದ ಬಿಸಿಸಿಐ

Date:

ಏಪ್ರಿಲ್ 2, 2011. ಯಾರಿಗೆ ನೆನಪಿಲ್ಲ ಹೇಳಿ. ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಟೀಮ್ ಇಂಡಿಯಾವು ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದು ಸಂಭ್ರಮಿಸಿದ ಐತಿಹಾಸಿಕ ದಿನ. 13 ವರ್ಷಗಳ ಹಿಂದೆ ಇದೇ ದಿನ, ಇಡೀ ಭಾರತವೇ ಖುಷಿಯ ಅಲೆಯಲ್ಲಿ ತೇಲುತ್ತಿತ್ತು.

ಸುದೀರ್ಘ 28 ವರ್ಷಗಳ ಕಾಯುವಿಕೆಯ ಬಳಿಕ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಎಂಎಸ್ ಧೋನಿ ನೇತೃತ್ವದ ತಂಡವು ಶ್ರೀಲಂಕಾವನ್ನು ರೋಚಕವಾಗಿ ಸೋಲಿಸುವ ಮೂಲಕ ವಿಶ್ವಕಪ್‌ ಗೆದ್ದು ಬೀಗಿತ್ತು. ಈ ಐತಿಹಾಸಿಕ ದಿನವನ್ನು ಇಂದು ಬಿಸಿಸಿಐ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ನೆನಪಿಸಿದ್ದು, ಕ್ರಿಕೆಟ್ ಅಭಿಮಾನಿಗಳನ್ನು ಮತ್ತೊಮ್ಮೆ 13 ವರ್ಷ ಹಿಂದಕ್ಕೆ ಕರೆದೊಯ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 2ರಂದು ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ್ದ ಶ್ರೀಲಂಕಾ, 6 ವಿಕೆಟ್ ಕಳೆದುಕೊಂಡು 274 ರನ್ ದಾಖಲಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಟೀಮ್ ಇಂಡಿಯಾ, 48.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 277 ರನ್ ದಾಖಲಿಸುವ ಮೂಲಕ ಬರೋಬ್ಬರಿ 28 ವರ್ಷಗಳ ನಂತರ ತನ್ನದೇ ತವರಿನಲ್ಲಿ ಭಾರತ ವಿಶ್ವಕಪ್ ಎತ್ತಿಹಿಡಿದು ಸಂಭ್ರಮಿಸಿತು.

2011ರಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಹೀಗಿತ್ತು.

  1. 2011ರ ಫೆಬ್ರವರಿ 19ರಂದು, ಭಾರತವು ತನ್ನ ವಿಶ್ವಕಪ್ ಅಭಿಯಾನವನ್ನು ಬಾಂಗ್ಲಾದೇಶದ ಢಾಕಾದಲ್ಲಿ ಆರಂಭಿಸಿತ್ತು. ಮೊದಲ ಪಂದ್ಯದಲ್ಲೇ ಗೆದ್ದು ಶುಭಾರಂಭ ಮಾಡಿತು. ವೀರೇಂದ್ರ ಸೆಹ್ವಾಗ್‌ ಪಂದ್ಯದ ಹೀರೋ ಆಗಿ ಮಿಂಚಿದರು.
  2. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ‌ ಸಚಿನ್ ತೆಂಡೂಲ್ಕರ್ ಆಕರ್ಷಕ ಶತಕ ಬಾರಿಸಿದರು. ಆದರೆ ಈ ಪಂದ್ಯ ಟೈನಲ್ಲಿ ಕೊನೆಗೊಂಡಿತು.
  3. ಐರ್ಲೆಂಡ್ ವಿರುದ್ಧ ಭಾರತ ಸುಲಭ ಜಯ ತನ್ನದಾಗಿಸಿಕೊಂಡಿತು. ಪಂದ್ಯದಲ್ಲಿ ಐದು ವಿಕೆಟ್‌ ಹಾಗೂ 50 ರನ್‌ ಗಳಿಸಿದ ಯುವರಾಜ್‌ ಸಿಂಗ್‌ ಪಂದ್ಯಶ್ರೇಷ್ಠರಾದರು.
  4. ನೆದರ್ಲೆಂಡ್ಸ್‌ ವಿರುದ್ಧದ ಪಂದ್ಯದಲ್ಲಿ ಡಚ್ಚರು ನೀಡಿದ ಸುಲಭ ಗುರಿಯನ್ನು 36.3 ಓವರ್‌ಗಳಲ್ಲಿ ಬೆನ್ನಟ್ಟಿದ ಭಾರತವು, 5 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.
  5. ದಕ್ಷಿಣ ಆಫ್ರಿಕಾ ವಿರುದ್ಧ ಸಚಿನ್ ತೆಂಡೂಲ್ಕರ್ ಮತ್ತೊಂದು ಅದ್ಭುತ ಶತಕ ಸಿಡಿಸಿದರು. ಆದರೆ, ರೋಚಕ ಪಂದ್ಯದಲ್ಲಿ ಭಾರತ ಸೋತಿತು. ಟೂರ್ನಿಯಲ್ಲಿ ಭಾರತ ಸೋತ ಏಕೈಕ ಪಂದ್ಯವಿದು.
  6. ಚೆನ್ನೈನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿತು. ಯುವರಾಜ್ ಸಿಂಗ್ ಆಕರ್ಷಕ ಶತಕ ಬಾರಿಸಿದರು. 80 ರನ್‌ಗಳ ಗೆಲುವಿನೊಂದಿಗೆ ಭಾರತ ಟ್ರೋಫಿಗೆ ಹತ್ತಿರವಾಯ್ತು.

1999, 2003 ಮತ್ತು 2007ರಲ್ಲಿ ಹ್ಯಾಟ್ರಿಕ್‌ ವಿಶ್ವಕಪ್‌ ಗೆದ್ದು ಸತತ ನಾಲ್ಕನೇ ವಿಶ್ವಕಪ್‌ ಗೆಲುವಿನ ಹೊಸ್ತಿಲಲ್ಲಿದ್ದ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಧೋನಿ ಬಳಗ ಸೋಲಿಸಿತು. ವಿಶ್ವಕಪ್‌ ಗೆಲ್ಲುವ ಫೇವರೀಟ್‌ ತಂಡವಾಗಿದ್ದ ಕಾಂಗರೂಗಳನ್ನು ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಭಾರತವು 5 ವಿಕೆಟ್‌ಗಳಿಂದ ಮಣಿಸಿತು. ಇದರೊಂದಿಗೆ ರಿಕಿ ಪಾಂಟಿಂಗ್‌ ಬಳಗವನ್ನು ಟೂರ್ನಿಯಿಂದಲೇ ಹೊರದಬ್ಬಿತು.

ಮೊಹಾಲಿಯಲ್ಲಿ ನಡೆದ ಸೆಮಿಫೈನಲ್‌ ಪಂದ್ಯ ಇನ್ನೂ ರೋಚಕವಾಗಿತ್ತು. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 29 ರನ್‌ಗಳಿಂದ ರೋಚಕವಾಗಿ ಸೋಲಿಸಿದ ಭಾರತ, ಫೈನಲ್‌ಗೆ ಲಗ್ಗೆ ಹಾಕಿತು.

ಫೈನಲ್‌ನಲ್ಲಿ ಕುಮಾರ್ ಸಂಗಕ್ಕಾರ ನೇತೃತ್ವದ ಲಂಕನ್ನರನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಫೈನಲ್ ಪಂದ್ಯದಲ್ಲಿ ಗೌತಮ್ ಗಂಭೀರ್ 97 ರನ್ ಗಳಿಸಿ ಔಟಾಗುವ ಮೂಲಕ 3 ರನ್‌ಗಳಿಂದ ಶತಕ ವಂಚಿತರಾದರು. ವಿರಾಟ್ ಕೊಹ್ಲಿ 35, ಸಚಿನ್ ತೆಂಡುಲ್ಕರ್ 18 ರನ್, ಯುವರಾಜ್ ಸಿಂಗ್ ಔಟಾಗದೆ 21 ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ 91 ರನ್ ಗಳಿಸಿ, ಮಿಂಚಿದರು.

ಈ ಗೆಲುವಿನೊಂದಿಗೆ ಬರೋಬ್ಬರಿ 28 ವರ್ಷಗಳ ನಂತರ ತನ್ನದೇ ತವರಿನಲ್ಲಿ ಭಾರತ ವಿಶ್ವಕಪ್ ಎತ್ತಿಹಿಡಿದು ಸಂಭ್ರಮಿಸಿತು. ಭಾರತ ತಂಡದ ನಾಯಕ ಎಂಎಸ್ ಧೋನಿ ಸಿಕ್ಸರ್‌ ಸಿಡಿಸುವುದರೊಂದಿಗೆ ಶ್ರೀಲಂಕಾ ತಂಡವನ್ನು ಫೈನಲ್‌ ಪಂದ್ಯದಲ್ಲಿ ಸೋಲಿಸಿ, ಭಾರತ ಕ್ರಿಕೆಟ್‌ ತಂಡದ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಏಪ್ರಿಲ್ 2ರಂದು ರಾತ್ರಿ ಇಡೀ ಭಾರತಕ್ಕೆ ಭಾರತವೇ ಸಂಭ್ರಮಿಸಿತ್ತು.

ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಮುಂಬೈನ ತಾಜ್ ಪ್ಯಾಲೇಸ್ ಹೋಟೆಲ್‌ ಬಳಿ ನಡೆದ ಫೋಟೋ ಶೂಟ್‌ನಲ್ಲಿ ಪಾಲ್ಗೊಂಡರು. ಗೇಟ್ ವೇ ಆಫ್ ಇಂಡಿಯಾ ಪಕ್ಕದಲ್ಲಿ ನಿಂತು ಐಸಿಸಿ ಕ್ರಿಕೆಟ್ ವಿಶ್ವಕಪ್ ಟ್ರೋಫಿಯೊಂದಿಗೆ ಫೋಟೋಗೆ ಪೋಸ್ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...