ಕರ್ತವ್ಯಕ್ಕೆ ಮರಳಿದ ಕುಸ್ತಿಪಟುಗಳು: ಪ್ರತಿಭಟನೆ ಮುಂದುವರಿಯಲಿದೆ ಎಂದ ಸಾಕ್ಷಿ, ಪುನಿಯಾ

Date:

ಭಾರತೀಯ ಕುಸ್ತಿ ಒಕ್ಕೂಟದ ​​ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ. 

ಆದರೆ ಈ ಬಗ್ಗೆ ಕುಸ್ತಿಪಟುಗಳು ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿರುವ ಸುದ್ದಿಯನ್ನು ಕುಸ್ತಿಪಟು ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ನಿರಾಕರಿಸಿದ್ದು, ಧರಣಿಯ ಜೊತೆಗೆ ಭಾರತೀಯ ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ಇದು ನ್ಯಾಯಕ್ಕಾಗಿ ನಾವು ನಡೆಸುತ್ತಿರುವ ಹೋರಾಟ. ನಾವು ಹಿಂದೆ ಸರಿಯುವುದಿಲ್ಲ. ಮುಂದಿನ ಕಾರ್ಯತಂತ್ರದ ಬಗ್ಗೆ ಯೋಜನೆ ರೂಪಿಸುತ್ತೇವೆ” ಎಂದು ತಿಳಿಸಿದ್ದಾರೆ.

ಸಾಕ್ಷಿ ಮಲಿಕ್ ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂಬ ವರದಿಗಳಿವೆ. ಆದರೆ, ಇದನ್ನು ಸಾಕ್ಷಿ ಮಲಿಕ್ ನಿರಾಕರಿಸಿದ್ದಾರೆ. ನ್ಯಾಯಕ್ಕಾಗಿ ನಡೆಯುವ ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ್ಲ, ಸರಿಯುವುದಿಲ್ಲ ಎಂದರು. ನಮಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ಸಾಕ್ಷಿ ಮಲಿಕ್ ಅವರ ಪತಿ ಸತ್ಯವ್ರತ್ ಕಡಿಯಾನ್ ಕೂಡ ಚಳವಳಿಯಿಂದ ಹಿಂದೆ ಸರಿಯುವ ಸುದ್ದಿಯನ್ನು ನಿರಾಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತ್ರಿವಳಿ ರೈಲು ದುರಂತ| ಘಟನೆ ಸಿಬಿಐ ತನಿಖೆಗೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ರೈಲ್ವೆ ಸಚಿವ

ಸಾಕ್ಷಿ ಮಲಿಕ್‌ ಹಾಗೂ ಭಜರಂಗ್ ಪುನಿಯಾ ಟ್ವೀಟ್‌ ಮಾಡಿದ್ದು, ಪ್ರತಿಭಟನೆ ಕೈಬಿಟ್ಟಿದ್ದರೂ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಪ್ರತಿಭಟನೆಗೆ ನೈತಿಕ ಬೆಂಬಲ ಇದ್ದೇ ಇರುತ್ತದೆ, ಎಂದು ತಿಳಿಸಿದ್ದಾರೆ. ಇವರಿಬ್ಬರೂ ಭಾರತೀಯ ರೈಲ್ವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ನೇತೃತ್ವದಲ್ಲಿ ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪಿ ಭಾರತೀಯ ಕುಸ್ತಿ ಒಕ್ಕೂಟದ ​​ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಪ್ರಿಲ್ 23 ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

7 ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21ರಂದು ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಬ್ರಿಜ್ ಭೂಷಣ್ ವಿರುದ್ಧ ದೂರು ದಾಖಲಿಸಿದ್ದರು. ಈ ದೂರುಗಳ ಆಧಾರದ ಮೇಲೆ, ಏಪ್ರಿಲ್ 28ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ಪೋಕ್ಸೊ ಕಾಯ್ದೆ ಒಳಗೊಂಡು ಎರಡು ಲೈಂಗಿಕ ಕಿರುಕುಳ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಶನಿವಾರ(ಜೂ.4) ರಾತ್ರಿ  ಸಾಕ್ಷಿ ಮಲಿಕ್‌ ಒಳಗೊಂಡ ಪ್ರಮುಖ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅಪ್ರಾಪ್ತ ವಯಸ್ಕ ಸೇರಿದಂತೆ 7 ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಮನವಿ ಮಾಡಿದರು. ಆದರೆ ಗೃಹ ಸಚಿವರಿಂದ ಸಮರ್ಪಕವಾದ ಪ್ರತಿಕ್ರಿಯೆ ಸಿಗದ ಕಾರಣ ಸಭೆಯಿಂದ ಹೊರ ಬಂದೆವು ಎಂದು ಕುಸ್ತಿಪಟುಗಳು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...