ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾ ತಂಡದವಿರುದ್ದಸ ಭಾರತ ತಂಡ ರೋಚಕ ಜಯ ಸಾಧಿಸಿದೆ. ಶನಿವಾರ, ಬೊಲೊವಿಯಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ 18 ರನ್ಗಳಿಂದ ಗೆದ್ದಿರುವ ಭಾರತ ತಂಡ,ಸತತ ಎರಡು ಗೆಲುವುಗಳೊಂದಿಗೆ ಬಿ ಗುಂಪಿನಲ್ಲಿ ಅಗ್ರ ಸ್ಥಾನಕ್ಕೇರಿದೆ.
ಟಾಸ್ ಸೋತು, ಮೊದಲು ಬ್ಯಾಟಿಂಗ್ ಭಾರತ ತಂಡ ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿತು. ತಂಡದ ನಾಯಕ ಆಯುಷ್ ಮಾತ್ರೆ(6), ವೇದಾಂತ್ ತ್ರಿವೇದಿ (0), ವಿಹಾನ್ ಮಲೋತ್ರಾ (7) ಹೆಚ್ಚು ಹೊತ್ತು ಸ್ಕ್ರೀಜ್ನಲ್ಲಿ ನಿಲ್ಲದೆ, ವಿಕೆಟ್ ಒಪ್ಪಿಸಿದರು. ಆದಾಗ್ಯೂ, ವೈಭವ್ ಸೂರ್ಯವಂಶಿ(72) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 48.4 ಓವರ್ಗಳಲ್ಲಿ 238 ರನ್ ಗಳಿಸಿತು.
ಬಾಂಗ್ಲಾ ತಂಡ ಬ್ಯಾಟಿಂಗ್ ಮಾಡುವ ಹೊತ್ತಿಗೆ, ಪಂದ್ಯಕ್ಕೆ ಮಳೆ ಅಡ್ಡಿಯುಂಟುಮಾಡಿತು. ಪರಿಣಾಮ, ಬಾಂಗ್ಲಾಗೆ 29 ಓವರ್ಗಳಲ್ಲಿ 165 ರನ್ಗಳ ಪರಿಷ್ಕೃತ ಗುರಿಯನ್ನು ನಿಗದಿ ಮಾಡಲಾಯಿತು. ಪರಿಷ್ಕೃತ ಗುರಿಯ ಬೆನ್ನಟ್ಟಿದ ಬಾಂಗ್ಲಾ ತಂಡ 28.3 ಓವರ್ಗಳಲ್ಲಿ 145 ರನ್ಗಳಿಗೆ ಆಲೌಟ್ ಆಯಿತು.




