ನೋ‌ಬಾಲ್ ತೀರ್ಪು ನೀಡಿದ ಅಂಪೈರ್‌; ಚಾಕುವಿನಿಂದ ಇರಿದು ಹತ್ಯೆ

Date:

ಕ್ರಿಕೆಟ್‌ ಪಂದ್ಯವೊಂದರ ವೇಳೆ ತಪ್ಪಾದ ನಿರ್ಣಯ ನೀಡಿದ್ದಾನೆ ಎಂದು ಆರೋಪಿಸಿ ಅಂಪೈರ್‌ನನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾದ ಘಟನೆ ಒಡಿಶಾದಲ್ಲಿ ನಡೆದಿದೆ. ಮೃತ ಯುವಕನನ್ನು ಲಕ್ಕಿ ರೌತ್ (22) ಎಂದು ಗುರುತಿಸಲಾಗಿದೆ.

ಒಡಿಶಾದ ಕಟಕ್ ಜಿಲ್ಲೆಯ ಮಹಿಸಲಂದಾ ಗ್ರಾಮದಲ್ಲಿ ಭಾನುವಾರ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಶಂಕರಪುರ ಮತ್ತು ಬ್ರಹ್ಮಪುರ ಗ್ರಾಮಗಳ ನಡುವಿನ ಪಂದ್ಯದಲ್ಲಿ ಲಕ್ಕಿ ರೌತ್ ಅಂಪೈರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಪಂದ್ಯದ ನಡುವೆ ಲಕ್ಕಿ ನೀಡಿದ್ದ ನೋಬಾಲ್‌ ತೀರ್ಪು ವಿವಾದಕ್ಕೆ ಕಾರಣವಾಗಿತ್ತು. ಅಂಪೈರ್‌ ತೀರ್ಮಾನಕ್ಕೆ ಬ್ರಹ್ಮಪುರ ತಂಡದ ಆಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಪರ – ವಿರೋಧವಾಗಿ ಉಭಯ ತಂಡಗಳ ನಡುವೆ ಮಾತಿನ ಚಕಮಕಿ ನಡೆದಿತ್ತು.

ಈ ವೇಳೆ ಬ್ರಹ್ಮಪುರ ಗ್ರಾಮದ ತಂಡದ ಬೆಂಬಲಿಗರು ಮೈದಾನ ಪ್ರವೇಶಿಸಿ ಅಂಪೈರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಮೊದಲು ಬ್ಯಾಟ್‌ನಿಂದ ತಲೆಗೆ ಬಡಿದು ಬಳಿಕ ನೆಲಕ್ಕೆ ಬಿದ್ದ ಲಕ್ಕಿ ರೌತ್ ಮೇಲೆ ಸ್ಮೃತಿ ರಂಜನ್ ರಾವತ್‌ ಅಲಿಯಾಸ್ ಮುನಾ ಎಂಬಾತ ಚಾಕುವಿನಿಂದ ಇರಿದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಕ್ತದ ಮಡುವಿನಲ್ಲಿ ಬಿದ್ದಿದ್ದ ಲಕ್ಕಿ ರೌತ್‌ನನ್ನು ಸ್ಥಳೀಯರು ತಕ್ಷಣವೇ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ದಾಖಲಿಸಿದರಾದರೂ, ಅದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ತುಷಾರ್​ ದೇಶಪಾಂಡೆ ಐಪಿಎಲ್‌ನ ಮೊತ್ತಮೊದಲ ʻಇಂಪ್ಯಾಕ್ಟ್‌ ಪ್ಲೇಯರ್‌ʼ

ಲಕ್ಕಿ ರೌತ್ ಮೇಲೆ ಚಾಕುವಿನಿಂದ ಇರಿದ ಸ್ಮೃತಿ ರಂಜನ್ ರಾವತ್‌ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆದರೆ, ಗ್ರಾಮಸ್ಥರು ಆತನ ಸ್ನೇಹಿತರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ʻಮುಗುನಿ ರಾವತ್‌, ಜಗರಾವತ್‌ ಹಾಗೂ ಸ್ಮೃತಿ ರಂಜನ್ ರಾವತ್‌ ಎಂಬುವವರು ಲಕ್ಕಿ ರಾವತ್‌ ಮೇಲೆ ಗಂಭೀರ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆʼ ಎಂದು ಎಂದು ಪಂದ್ಯದ ಸಹ ಅಂಪೈರ್ ಪ್ರೀತಿರಂಜನ್ ಸಮಲ್ ಪೊಲೀಸರಿಗೆ ತಿಳಿಸಿದ್ದಾನೆ.

‘ಈ ಪ್ರಕರಣದಲ್ಲಿ ರಾಜಾ, ಸ್ಮೃತಿ ಅಕಾ ಮುನಾ, ಸಂಜಯ್ ಅಕಾ ಮುಗುನಿ ಮತ್ತು ಬಾದಲ್ ಸೇರಿದಂತೆ ನಾಲ್ವರು ಆರೋಪಿಗಳು ಭಾಗಿಯಾಗಿದ್ದಾರೆ. ಎಲ್ಲರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಕಟಕ್‌ನ ವಲಯ-1 ಎಸಿಪಿ ಅರುಣ್ ಸ್ವೈನ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...