ಅಂಡರ್‌ 19 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ ಭಾರತ

Date:

ಸಚಿನ್ ದಾಸ್‌ ಸ್ಫೋಟಕ ಆಟ ಹಾಗೂ ನಾಯಕ ಉದಯ್‌ ಸಹರನ್ ಅವರ ಆಕರ್ಷಕ ಆಟದಿಂದ ಭಾರತದ ಕಿರಿಯರ ತಂಡ ದಕ್ಷಿಣ ಆಫ್ರಿಕಾ ಕಿರಿಯರ ವಿರುದ್ಧ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ  50 ಓವರ್‌ಗಳ ಅಂಡರ್‌ 19 ವಿಶ್ವಕಪ್‌ ಟೂರ್ನಿಯ ಫೈನಲ್ ಪ್ರವೇಶಿಸಿತು.

ದಕ್ಷಿಣ ಆಫ್ರಿಕಾದ ಬೆನೋನಿಯ ವಿಲ್ಲೋಮೊರೆ ಪಾರ್ಕ್‌ನಲ್ಲಿ ನಡೆದ ಪಂದ್ಯದಲ್ಲಿ ಹರಿಣ ತಂಡ ನೀಡಿದ್ದ 245 ರನ್‌ಗಳ ಸವಾಲನ್ನು ಬೆನ್ನಟ್ಟಿದ  ಟೀಂ ಇಂಡಿಯಾದ ಕಿರಿಯರ ಪಡೆ 48.5 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

ಆರಂಭದಲ್ಲಿ 10 ಓವರ್‌ಗಳಾಗುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾದ ಟೀಂ ಇಂಡಿಯಾಗೆ 171 ರನ್‌ಗಳ ಐದನೇ ವಿಕೆಟ್ ಜೊತೆಯಾಟದಲ್ಲಿ ಮಧ್ಯಮ ಕ್ರಮಾಂಕದ ಆಟಗಾರ ಸಚಿನ್ ದಾಸ್ ಹಾಗೂ ನಾಯಕ ಉದಯ್‌ ಸಹರನ್ ತಂಡವನ್ನು ಅಪಾಯದಿಂದ ಪಾರು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇವಲ 4 ರನ್‌ಗಳಿಂದ ಶತಕ ತಪ್ಪಿಸಿಕೊಂಡ ಮಧ್ಯಮ ಕ್ರಮಾಂಕದ ಆಟಗಾರ ಸಚಿನ್ ದಾಸ್ 95 ಚೆಂಡುಗಳಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್‌ನೊಂದಿಗೆ 96 ರನ್‌ ಬಾರಿಸಿದರೆ, ನಾಯಕ ಉದಯ್‌ ಶರಣ್‌  124 ಎಸೆತಗಳಲ್ಲಿ 6 ಬೌಂಡರಿಯೊಂದಿಗೆ 81 ರನ್‌ ಗಳಿಸಿ ಗೆಲುವಿನ ರೂವಾರಿಗಳಾದರು.

ಈ ಸುದ್ದಿ ಓದಿದ್ದೀರಾ? ರಜೆ ನೀಡಿ ಮೋದಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆದೇಶಿಸಿದ ಗೋವಾ ಸರ್ಕಾರ

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾದ ಕಿರಿಯರ ತಂಡ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 244 ರನ್‌ ಗಳಿಸಿತು. ಆರಂಭಿಕ ಆಟಗಾರ ಆರಂಭಿಕ ಆಟಗಾರ ಲಾನ್‌ ದ್ರೆ ಪ್ರಟೋರಿಯಸ್‌ (76),  ರಿಚರ್ಡ್‌ ಸೆಲಿಸ್ಟಾವನೆ (64) ಅರ್ಧ ಶತಕದ ನೆರವಿನಿಂದ ತಂಡ 240ರ ಗಡಿ ದಾಟಲು ಸಾಧ್ಯವಾಯಿತು.

ಭಾರತದ ಕಿರಿಯರ ಪರ ರಾಜ್‌ ಲಿಂಬಿನಿ 60/3, ಮುಶೀರ್ ಖಾನ್ 43/2 ಹಾಗೂ  ಸುಮಯ್‌ ಪಾಂಡೆ ಹಾಗೂ ನಮನ್‌ ತಿವಾರಿ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಫೆ.8 ರಂದು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ಕಿರಿಯರ ನಡುವೆ ಮತ್ತೊಂದು ಸೆಮಿಫೈನಲ್ ಪಂದ್ಯ ನಡೆಯಲಿದ್ದು  ಅಲ್ಲಿ ವಿಜೇತರಾದ ತಂಡ ಫೆ.11 ರಂದು ನಡೆಯುವ ಫೈನಲ್‌ನಲ್ಲಿ ಭಾರತದ ಕಿರಿಯರನ್ನು ಸೆಣಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...