ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಪ್ರಶಸ್ತಿ

Date:

ಕೇವಲ 14 ವರ್ಷ ವಯಸ್ಸಿನಲ್ಲೇ ಕ್ರಿಕೆಟ್‌ ಲೋಕದಲ್ಲಿ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಮಕ್ಕಳ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಲಾಗಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.

ವೈಭವ್ ಸೂರ್ಯವಂಶಿ ತಮ್ಮ ವೃತ್ತಿಜೀವನದ ಆರಂಭದ ಹಂತದಲ್ಲೇ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಕಿರಿಯನೆಂಬ ದಾಖಲೆಯಿಂದ ಹಿಡಿದು, ಇಂಗ್ಲೆಂಡ್‌, ಆಸ್ಟ್ರೇಲಿಯಾದಲ್ಲೂ ವೈಭವ್ ಆರ್ಭಟ ಜೋರಿತ್ತು. ಸಿಕ್ಕ ಅವಕಾಶಗಳನ್ನು ಎರಡು ಕೈಗಳಿಂದ ಬಾಚಿಕೊಂಡಿರುವ ವೈಭವ್​ಗೆ ಇದೀಗ ಭಾರತ ಸರ್ಕಾರದಿಂದಲೂ ಮನ್ನಣೆ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸೋಲಿನ ಆಘಾತದಿಂದ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದ ರೋಹಿತ್‌ ಶರ್ಮಾ

ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡದ ಪರ ಕಣಕ್ಕಿಳಿದಿರುವ ವೈಭವ್ ಮೊದಲ ಪಂದ್ಯದಲ್ಲೇ 190 ರನ್​ಗಳ ಸ್ಫೋಟಕ ಇನಿಂಗ್ಸ್ ಆಡಿದ್ದರು. ಹೀಗಾಗಿ ಇಂದು ನಡೆದ ಎರಡನೇ ಪಂದ್ಯದಲ್ಲೂ ವೈಭವ್ ಆರ್ಭಟ ನೋಡಲು ಎಲ್ಲರೂ ಕಾದಿದ್ದರು. ಆದರೆ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವ ಪ್ರಯುಕ್ತ ಈ ಪಂದ್ಯದಲ್ಲಿ ವೈಭವ್ ಆಡಿರಲಿಲ್ಲ.

ಪ್ರತಿ ವರ್ಷವೂ ದೇಶಾದ್ಯಂತ ಅನೇಕ ಯುವಕರು ಮತ್ತು ಮಕ್ಕಳಿಗೆ ಅವರು ಮಾಡಿದ ಸಾಧನೆಗಳಿಗಾಗಿ, ಕ್ರೀಡೆ, ಸಂಗೀತ ಅಥವಾ ವಿಜ್ಞಾನಕ್ಕೆ ನೀಡಿದ ಕೊಡುಗೆಗಳಿಗಾಗಿ ಗೌರವಿಸಲಾಗುತ್ತದೆ.

ಅದರಂತೆ ಬಿಹಾರದ ಸಮಷ್ಟಿಪುರದ ವೈಭವ್ ಅವರಿಗೆ ಕ್ರಿಕೆಟ್ ಜಗತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...