ವೈಯಕ್ತಿಕ ಕಾರಣಕ್ಕಾಗಿ ಸ್ವದೇಶಕ್ಕೆ ಮರಳಿದ ವಿರಾಟ್ ಕೊಹ್ಲಿ

Date:

ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಗಾಗಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ್ದಾರೆ. ಆದರೆ ಸೆಂಚುರಿಯನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ಗೆ ಮುಂಚಿತವಾಗಿ ತಂಡವನ್ನು ಮತ್ತೆ ಸೇರಿಕೊಳ್ಳುವ ಸಾಧ್ಯತೆಯಿದೆ.

ಪ್ರಿಟೋರಿಯಾದಲ್ಲಿ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದಿಂದ ಹೊರಗುಳಿಯಲು ಟೀಮ್ ಮ್ಯಾನೇಜ್‌ಮೆಂಟ್ ಮತ್ತು ಬಿಸಿಸಿಐ ಎರಡರಿಂದಲೂ ಅನುಮತಿ ಪಡೆದ ನಂತರ ವಿರಾಟ್ ಕೊಹ್ಲಿ ಸರಿಸುಮಾರು ಮೂರು ದಿನಗಳ ಹಿಂದೆ ಮುಂಬೈಗೆ ತೆರಳಿದರು. ಅವರ ನಿರೀಕ್ಷಿತ ಪುನರಾಗಮನ ಶುಕ್ರವಾರ (ಡಿಸೆಂಬರ್ 22) ಕ್ಕೆ ನಿಗದಿಯಾಗಿದೆ.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ಟಿ20 ಹಾಗೂ ಏಕದಿನ ಸರಣಿಯನ್ನು ಆಡಿದ್ದು, ಎರಡು ಟೆಸ್ಟ್ ಪಂದ್ಯಗಳ ಸರಣಿ ಬಾಕಿಯುಳಿದಿದೆ. ಟಿ20 1-1 ಸರಣಿಯಲ್ಲಿ ಮುಕ್ತಾಯಗೊಂಡಿದ್ದರೆ, ಏಕದಿನ ಸರಣಿ 2-1ರಲ್ಲಿ ಕೆ ಎಲ್ ರಾಹುಲ್ ನೇತೃತ್ವದಲ್ಲಿ ಗೆಲುವು ಸಾಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಪ್ರೀಮ್ ಕೋರ್ಟ್ ತೀರ್ಪಿಗೆ ತಿರುಮಂತ್ರ ಹಾಕಿದ ಮೋದಿ ಸರ್ಕಾರ!

ಏತನ್ಮಧ್ಯೆ, ರುತುರಾಜ್ ಗಾಯಕ್ವಾಡ್ ಬೆರಳಿನ ಗಾಯದಿಂದಾಗಿ ಎರಡು ಟೆಸ್ಟ್‌ಗಳ ಸರಣಿಯಿಂದ ಹೊರಗುಳಿದಿದ್ದಾರೆ. ಪ್ರಸ್ತುತ ದಕ್ಷಿಣ ಆಫ್ರಿಕಾದ ಪ್ರವಾಸದಲ್ಲಿರುವ ಭಾರತ ಎ ತಂಡದ ಭಾಗವಾಗಿರುವ ಅಭಿಮನ್ಯು ಈಶ್ವರನ್, ಗಾಯಕ್ವಾಡ್ ಬದಲಿಗೆ ಮೀಸಲು ಆರಂಭಿಕ ಆಟಗಾರನಾಗಿ ತಂಡದಲ್ಲಿದ್ದಾರೆ. ರೋಹಿತ್ ಮತ್ತು ಯಶಸ್ವಿ ಜೈಸ್ವಾಲ್ ಅವರು ಜುಲೈ-ಆಗಸ್ಟ್‌ನಲ್ಲಿ ವೆಸ್ಟ್‌ ಇಂಡೀಸ್ ಸರಣಿಯಲ್ಲಿ ಮಾಡಿದಂತೆ ಮಧ್ಯಮ ಕ್ರಮಾಂಕದಲ್ಲಿ ಆಟವನ್ನು ಮುಂದುವರೆಸುವ ಸಾಧ್ಯತೆಯಿದೆ.

ದೀರ್ಘಾವಧಿಯ ವಿಶ್ರಾಂತಿಯ ನಂತರ ಶ್ರೇಯಸ್ ಅಯ್ಯರ್ ಮತ್ತು ಕೆ ಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ ಸರಣಿಗೆ ಮರಳಲಿದ್ದಾರೆ. ಫೆಬ್ರವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಇಬ್ಬರೂ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.

ಡಿ.26 ರಂದು ಸಂಚೂರಿಯನ್‌ನಲ್ಲಿ ಮೊದಲ ಟೆಸ್ಟ್ ಹಾಗೂ ಜನವರಿ 3 ರಂದು ಕೇಪ್‌ಟೌನ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...