ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸಲು ಬಿಸಿಸಿಐ ಸಿದ್ಧವಿರಲಿಲ್ಲ: ಗಂಗೂಲಿ

Date:

ʻಭಾರತ ಕ್ರಿಕೆಟ್‌ ತಂಡದ ಟೆಸ್ಟ್ ನಾಯಕತ್ವ ಸ್ಥಾನ ತ್ಯಜಿಸಿದ ವಿರಾಟ್ ಕೊಹ್ಲಿಯ ನಿರ್ಧಾರ ಬಿಸಿಸಿಐಗೆ ಅಚ್ಚರಿ ಮೂಡಿಸಿತ್ತುʼ ಎಂದು ಸೌರವ್‌ ಗಂಗೂಲಿ ಹೇಳಿದ್ಧಾರೆ.

ʻಕೊಹ್ಲಿಯನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸುವ ಯಾವುದೇ ಆಲೋಚನೆಯನ್ನು ಬಿಸಿಸಿಐ ಹೊಂದಿರಲಿಲ್ಲ. ಆದರೆ 2022ರ ದಕ್ಷಿಣ ಆಫ್ರಿಕಾ ಸರಣಿಯ ಬಳಿಕ ಕೊಹ್ಲಿ, ತಾವಾಗಿಯೇ ನಾಯಕ ಪಟ್ಟವನ್ನು ಬಿಟ್ಟುಕೊಟ್ಟರು. ಇದು ಅವರ ಸ್ವಂತ ನಿರ್ಧಾರವಾಗಿತ್ತುʼ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಗಂಗೂಲಿ ಹೇಳಿದ್ಧಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಟೀಮ್‌ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತ ಬಳಿಕ ರೋಹಿತ್ ಶರ್ಮಾ ನಾಯಕತ್ವದ ಸಾಮರ್ಥ್ಯದ ಕುರಿತು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಇದೇ ವೇಳೆ ವಿರಾಟ್‌ ಕೊಹ್ಲಿಗೆ ಮತ್ತೆ ನಾಯಕತ್ವ ಜವಾಬ್ದಾರಿ ನೀಡುವಂತೆ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗಂಗೂಲಿ ಹೇಳಿಕೆ ಮಹತ್ವ ಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೌರವ್​ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿದ್ದಾಗ ನಾಯಕತ್ವ ತ್ಯಜಿಸಲು ವಿರಾಟ್​ ಕೊಹ್ಲಿ ಮೇಲೆ ಒತ್ತಡ ಹೇರಲಾಗಿತ್ತು ಎಂಬ ಆಪಾದನೆ ಕೇಳಿ ಬಂದಿತ್ತು. ಈ ಕುರಿತು ʻಆಜ್‌ ತಕ್‌ʼ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಗಂಗೂಲಿ, ʻವಿರಾಟ್​ರನ್ನು ನಾಯಕತ್ವದಿಂದ ಕೆಳಗಿಳಿಸಲು ಮಂಡಳಿ ಸಿದ್ಧವಿರಲಿಲ್ಲ. ಅದು ಅವರ ವೈಯಕ್ತಿಕ ನಿರ್ಧಾರವಾಗಿತ್ತು. ದಕ್ಷಿಣ ಆಫ್ರಿಕಾ ಪ್ರವಾಸದ ಸೋಲಿನ ನಂತರ ಅವರು ಹಠಾತ್​ ರಾಜೀನಾಮೆ ಘೋಷಿಸಿದರು. ನಮಗೂ ಇದು ಅನಿರೀಕ್ಷಿತವಾಗಿತ್ತು. ನಾಯಕತ್ವ ತೊರೆದ ನಿರ್ಧಾರದ ಹಿಂದಿನ ಉದ್ದೇಶ ಏನೆಂಬುದನ್ನು ಅವರೇ ಬಲ್ಲರು, ಅವರೇ ಅದನ್ನು ಬಹಿರಂಗಪಡಿಸಬೇಕುʼ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವ ತೊರೆದ ಕಾರಣದ ಕುರಿತು ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ. ಕೊಹ್ಲಿ ನಿರ್ಗಮನದ ಬಳಿಕ ತಂಡಕ್ಕೆ ಹೊಸ ನಾಯಕನ ಅಗತ್ಯವಿತ್ತು. ಆ ಸಮಯದಲ್ಲಿ ರೋಹಿತ್ ಶರ್ಮಾ ಉತ್ತಮ ಆಯ್ಕೆಯಾಗಿದ್ದರು ಎಂದು ಸೌರವ್ ಸಂದರ್ಶನದಲ್ಲಿ ಹೇಳಿದ್ದಾರೆ.

ಸೌರವ್​- ವಿರಾಟ್​ ಕಿತ್ತಾಟ: 2021ರಲ್ಲಿ ವಿರಾಟ್ ಕೊಹ್ಲಿ ಟಿ20 ನಾಯಕತ್ವ ತೊರೆದ ಬಳಿಕ ಏಕದಿನದಿಂದಲೂ ಬಿಸಿಸಿಐ ರಾಜೀನಾಮೆ ಬಯಸಿತ್ತು. ಆದರೆ, ವಿರಾಟ್ ಇದಕ್ಕೆ ಸಿದ್ಧರಿರಲಿಲ್ಲ. ಹೀಗಾಗಿ ರೋಹಿತ್​ ಶರ್ಮಾರನ್ನು ನಾಯಕರನ್ನಾಗಿ ಘೋಷಿಸಿತು. ಅಂದಿನಿಂದ ವಿರಾಟ್​ ಮತ್ತು ಅಂದಿನ ಬಿಸಿಸಿಐ ಅಧ್ಯಕ್ಷರಾಗಿದ್ದ ಸೌರವ್​ ಗಂಗೂಲಿ ಮಧ್ಯೆ ಕಿತ್ತಾಟ ಶುರುವಾಗಿತ್ತು. ಯಾವುದೇ ಮಾಹಿತಿ ನೀಡದೇ ವಿರಾಟ್ ಅವ​ರನ್ನು ನಾಯಕತ್ವ ಸ್ಥಾನದಿಂದ ವಜಾ ಮಾಡಿದ್ದು, ಅಭಿಮಾನಿಗಳನ್ನು ಕೆರಳಿಸಿತ್ತು. ಇದಾದ ಬಳಿಕ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ವಿರಾಟ್​ ಟೆಸ್ಟ್ ನಾಯಕತ್ವಕ್ಕೂ ಹಠಾತ್​ ರಾಜೀನಾಮೆ ನೀಡಿದ್ದರು. ಈ ಅನಿರೀಕ್ಷಿತ ಬೆಳವಣಿಗೆಯಿಂದ ಬಿಸಿಸಿಐ ರೋಹಿತ್​ ಅವರನ್ನೇ ಟೆಸ್ಟ್​ಗೂ ಕ್ಯಾಪ್ಟನ್​ ಆಗಿ ಮುಂದುವರಿಸಿತು. ಮೂರೇ ತಿಂಗಳಲ್ಲಿ ಟೆಸ್ಟ್, ಏಕದಿನ, ಟಿ20 ನಾಯಕತ್ವವನ್ನು ತೊರೆದ ಕೊಹ್ಲಿಯ ಈ ನಿರ್ಧಾರ ಕ್ರಿಕೆಟ್​ ಜಗತ್ತಿನಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...