ತಮ್ಮ 10 ವಿಕೆಟ್ ಸಾಧನೆಯನ್ನು ಕ್ಯಾನ್ಸರ್‌ಪೀಡಿತ ಸಹೋದರಿಗೆ ಅರ್ಪಿಸಿದ ಆಕಾಶ್‌ ದೀಪ್

Date:

“ನಾವೆಲ್ಲರೂ ನಿನ್ನಿಂದಿಗಿದ್ದೇವೆ, ಕೈಯಲ್ಲಿ ಚೆಂಡು ಹಿಡಿದಾಗಲೆಲ್ಲಾ, ಆಕೆಯ ಕುರಿತ ಆಲೋಚನೆಗಳು ನನ್ನ ಮನಸ್ಸನ್ನು ಮುಟ್ಟುತ್ತಿದ್ದವು”. ಇದು ಕ್ಯಾನ್ಸರ್‌ಪೀಡಿತ ಸಹೋದರಿಯನ್ನು ನೆನೆದು, ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 10 ವಿಕೆಟ್‌ ಕಬಳಿಸಿ ಮೆರೆದ ಭಾರತದ ವೇಗಿ ಆಕಾಶ್‌ ದೀಪ್‌ ಅವರ ಭಾವುಕ ನುಡಿಗಳು.

ಆಕಾಶ್‌ ದೀಪ್‌ ಅವರು ತಮ್ಮ 10 ವಿಕೆಟ್‌ನ ಅಮೋಘ ಸಾಧನೆಯನ್ನು, ತಮ್ಮ ಕ್ಯಾನ್ಸರ್‌ಪೀಡಿತ ಸಹೋದರಿಗೆ ಅರ್ಪಿಸಿದ್ದಾರೆ. ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ, ಆಕಾಶ್‌ ದೀಪ್‌ ಅವರು ಎರಡು ಇನ್ನಿಂಗ್ಸ್‌ನಿಂದ ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ಆಕಾಶ್‌ ದೀಪ್‌, ತಮ್ಮ ಅದ್ಭುತ ಪ್ರದರ್ಶನವನ್ನು ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ತಮ್ಮ ಸಹೋದರಿಗೆ ಅರ್ಪಿಸುವುದಾಗಿ ಹೇಳಿದರು.

ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತದ 336 ರನ್‌ಗಳ ಸರಣಿ ಸಮಬಲದ ಗೆಲುವಿನಲ್ಲಿ, ಪಶ್ಚಿಮ ಬಂಗಾಳದ ವೇಗಿ 10 ವಿಕೆಟ್‌ಗಳನ್ನು ಕಬಳಿಸಿ ಗಮನ ಸೆಳೆದರು. ಇದು ಆಕಾಶ್‌ ದೀಪ್‌ ಅವರ ಇದುವರೆಗಿನ ಅತ್ಯುತ್ತಮ ಟೆಸ್ಟ್‌ ಪ್ರದರ್ಶನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? IND vs ENG 2ND Test: ಜಯದ ಮೂಲಕ ಇತಿಹಾಸ ನಿರ್ಮಿಸಲು ಟೀಂ ಇಂಡಿಯಾಗೆ ಬೇಕು 7 ವಿಕೆಟ್‌

“ನಾನು ಇದರ ಬಗ್ಗೆ ಯಾರೊಂದಿಗೂ ಮಾತನಾಡಿಲ್ಲ ಆದರೆ ಎರಡು ತಿಂಗಳ ಹಿಂದೆ, ನನ್ನ ತಂಗಿಗೆ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಅವಳು ನನ್ನ ಪ್ರದರ್ಶನದಿಂದ ತುಂಬಾ ಸಂತೋಷಪಡುತ್ತಾಳೆ ಮತ್ತು ಭಾರತ ತಂಡದ ಗೆಲುವು ಆಕೆಯ ನಗುವನ್ನು ಮರಳಿ ತರುತ್ತದೆ. ನಾನು ಚೆಂಡನ್ನು ಕೈಗೆತ್ತಿಕೊಂಡಾಗಲೆಲ್ಲ ಅವಳ ಆಲೋಚನೆಗಳು ಮತ್ತು ಆಕೆಯ ಮುಖ ನನ್ನ ಮನಸ್ಸಿನಲ್ಲಿ ಹಾದು ಹೋಗುತ್ತಿತ್ತು. ನನ್ನ ಈ ಪ್ರದರ್ಶನ ಅವಳಿಗೆ ಸಮರ್ಪಿತವಾಗಿದೆ. ನಾವೆಲ್ಲರೂ ನಿನ್ನೊಂದಿಗಿದ್ದೇವೆ ಎಂದು ನಾನು ಅವಳಿಗೆ ಹೇಳಲು ಬಯಸುತ್ತೇನೆ” ಎಂದು ಆಕಾಶ್ ದೀಪ್‌ ತಮ್ಮ ಭಾವನೆಗಳನ್ನು ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಪಂದ್ಯದ ಬಗ್ಗೆ ಮಾತನಾಡಿದ ಅವರು “ನಾವು ಒಂದು ತಂಡವಾಗಿ ಜಾರಿಗೆ ತಂದ ಯೋಜನೆಗಳು ಮತ್ತು ಪ್ರಕ್ರಿಯೆಗಳು ಅದ್ಭುತವಾಗಿ ಕೆಲಸ ಮಾಡಿವೆ. ಹಾರ್ಡ್ ಲೆಂತ್‌ಗಳಲ್ಲಿ ಸೀಮ್‌ನ್ನು ಚುರುಕುಗೊಳಿಸುವುದು ನನ್ನ ಮುಖ್ಯ ಗುರಿಯಾಗಿ. ತಂತ್ರಗಾರಿಕೆಯ ಕ್ರಮಬದ್ಧ ಯೋಜನೆಯಿಂದ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ವಿಕೆಟ್‌ ಕಬಳಿಸಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...