ಐಪಿಎಲ್‌ಗೆ ಆದ್ಯತೆ; ಟೀಮ್‌ ಇಂಡಿಯಾ ಆಟಗಾರರ ವಿರುದ್ಧ ರವಿಶಾಸ್ತ್ರಿ ಆಕ್ರೋಶ

Date:

ಅಂತಾರಾಷ್ಟ್ರೀಯ ಕ್ರಿಕೆಟ್‌ ಬದಲು ಐಪಿಎಲ್‌ ಟೂರ್ನಿಯನ್ನು ಆಟಗಾರರು ಆದ್ಯತೆಯಾಗಿ ಪರಿಗಣಿಸುವುದರ ವಿರುದ್ಧ ಟೀಮ್‌ ಇಂಡಿಯಾದ ಮಾಜಿ ಕೋಚ್‌ ರವಿಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ʻವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯದ ಮೊದಲ ಮೂರು ದಿನಗಳಲ್ಲೂ ನಿರೀಕ್ಷಿತ ಪ್ರದರ್ಶನ ನೀಡಲು ಟೀಮ್‌ ಇಂಡಿಯಾ ವಿಫಲವಾಗಿದೆ. ಫೈನಲ್‌ ಪಂದ್ಯದ ಮೊದಲ ದಿನ ಕೇವಲ ಮೂರು ವಿಕೆಟ್‌ ಪಡೆಯಲಷ್ಟೇ ಭಾರತದ ಬೌಲರ್‌ಗಳು ಯಶಸ್ವಿಯಾಗಿದ್ದರು. ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲೂ ಆಸಿಸ್‌ ಕೈ ಮೇಲಾಗಿದೆ. ಈ ಹಿನ್ನಲೆಯಲ್ಲಿ ಮಾತನಾಡಿರುವ ಶಾಸ್ತ್ರಿ, ʻಆಟಗಾರರು ರಾಷ್ಟ್ರೀಯ ತಂಡ  ಅಥವಾ ಐಪಿಎಲ್‌ ನಡುವೆ ತಮ್ಮ ʻಆದ್ಯತೆʼಯನ್ನು ನಿರ್ಧರಿಸಬೇಕಿದೆʼ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಟೀಮ್‌ ಇಂಡಿಯಾದ ಆಟಗಾರರನ್ನು ತರಾಟೆಗೆ ತೆಗೆದುಕೊಂಡಿರುವ ರವಿ ಶಾಸ್ತ್ರಿ ʻ ರಾಷ್ಟ್ರೀಯ ತಂಡ  ಅಥವಾ ಐಪಿಎಲ್‌ ನಡುವೆ ಆಟಗಾರರು ತಮ್ಮ ʻಆದ್ಯತೆʼಯನ್ನು ನಿರ್ಧರಿಸಬೇಕಿದೆ. ಭಾರತೀಯ ಆಟಗಾರರ ಐಪಿಎಲ್ ಒಪ್ಪಂದದಲ್ಲಿ ಬಿಸಿಸಿಐ ಕೆಲವೊಂದು ಷರತ್ತುಗಳನ್ನು ಹಾಕುವ ಅಗತ್ಯವಿದೆʼ ಎಂದು ಟೀಮ್‌ ಇಂಡಿಯಾದ ಮಾಜಿ ಕೋಚ್‌ ಮತ್ತು ವೀಕ್ಷಕ ವಿವರಣೆಗಾರರಾಗಿರುವ ರವಿ ಶಾಸ್ತ್ರಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʻಫ್ರಾಂಚೈಸಿ ಕ್ರಿಕೆಟ್‌ಅನ್ನು ಆದ್ಯತೆಯಾಗಿ ಕಾಣುವ ಆಟಗಾರರು ʻವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯʼ ಸೇರಿದಂತೆ ಅತಿ ಮಹತ್ವದ ಐಸಿಸಿ ಟೂರ್ನಿಗಳನ್ನು ಮರೆತುಬಿಡಬೇಕು. ಮತ್ತೊಂದೆಡೆ, ರಾಷ್ಟ್ರೀಯ ತಂಡದ ಹಿತದೃಷ್ಟಿಯಿಂದ ಐಪಿಎಲ್‌ನಿಂದ ಹೊರಗುಳಿಯಲು ಆಟಗಾರರು ನಿರ್ಧರಿಸಿದರೆ ಅದಕ್ಕೆ ಬಿಸಿಸಿಐ ಅವಕಾಶ ನೀಡಬೇಕು ಎಂದು ಶಾಸ್ತ್ರಿ ಸಲಹೆ ನೀಡಿದ್ದಾರೆ.

ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 223/6

4 ವಿಕೆಟ್ ನಷ್ಟದಲ್ಲಿ 123 ರನ್ ಗಳಿಂದ ಮೂರನೇ ದಿನದಾಟ ಆರಂಭಿಸಿದ್ದ ಆಸ್ಟ್ರೇಲಿಯಾ ತಂಡ, ಶನಿವಾರ, ಭೊಜನ ವಿರಾಮದ ವೇಳೆಗೆ 6 ವಿಕೆಟ್‌ ನಷ್ಟದಲ್ಲಿ 223 ರನ್‌ಗಳಿಸಿದೆ. ಆ ಮೂಲಕ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಒಟ್ಟು 396 ರನ್‌ಗಳ ಮುನ್ನಡೆ ಸಾಧಿಸಿದೆ.

50 ರನ್‌ಗಳಿಸಿರುವ ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ ಮತ್ತು 24 ರನ್‌ಗಳೊಂದಿಗೆ ಮಿಚೆಲ್‌ ಸ್ಟಾರ್ಕ್‌ ಕ್ರೀಸ್‌ನಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...