ಐಪಿಎಲ್ 2025 | 30 ಲಕ್ಷಕ್ಕೆ ಹರಾಜಾದ ಆಟಗಾರನ ವಿನೂತನ ದಾಖಲೆ; ಗೆದ್ದ ಖುಷಿಯಲ್ಲಿ ರೋಹಿತ್ ಇಲ್ಲ

Date:

ಹದಿನೆಂಟನೇ ಆವೃತ್ತಿಯ ಐಪಿಎಲ್‌ನಲ್ಲಿ 27, 25, 20 ಕೋಟಿ ರೂ.ಗಳಿಗೆ ಹರಾಜಾದವರೆಲ್ಲ ರನ್‌ ಗಳಿಸಲು ಹಾಗೂ ವಿಕೆಟ್‌ ಕೀಳಲು ಪರದಾಡುತ್ತಿರುವ ಸಂದರ್ಭದಲ್ಲಿ ಕೇವಲ 30 ಲಕ್ಷಕ್ಕೆ ಬಿಕರಿಯಾದ ಆಟಗಾರನೊಬ್ಬ ತನ್ನ ಪಾದಾರ್ಪಣೆ ಪಂದ್ಯದಲ್ಲೇ ವಿನೂತನ ದಾಖಲೆ ಮಾಡಿದ್ದಾನೆ. ಮುಂಬೈ ಇಂಡಿಯನ್ಸ್‌ ತಂಡದ ಎಡಗೈ ವೇಗಿ ಅಶ್ವನಿ ಕುಮಾರ್ ತನ್ನ ಮೊದಲ ಪಂದ್ಯದಲ್ಲಿ ಕೆಕೆಆರ್‌ನ ಘಟಾನುಘಟಿ ನಾಲ್ವರು ಬ್ಯಾಟರ್‌ಗಳನ್ನು ಔಟ್‌ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. 

4 ವಿಕೆಟ್​ ಪಡೆಯುವ ಮೂಲಕ ಅಶ್ವನಿ ಕುಮಾರ್ ​ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್​ ಎನಿಸಿಕೊಂಡಿದ್ದಾರೆ. ಅಲ್ಲದೆ ಐಪಿಎಲ್​ ಪಾದಾರ್ಪಣೆ ಪಂದ್ಯದಲ್ಲೇ ಅತಿ ಹೆಚ್ಚು ವಿಕೆಟ್​ ಪಡೆದ ಒಟ್ಟಾರೆ ಎರಡನೇ ಬೌಲರ್​ ಕೂಡ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಅಲ್ಜಾರಿ ಜೋಸೆಫ್ ಮೊದಲ ಸ್ಥಾನದಲ್ಲಿದ್ದಾರೆ. ಇವರು ಐಪಿಎಲ್​ ಪಾದಾರ್ಪಣೆ ಪಂದ್ಯದಲ್ಲಿ 6 ವಿಕೆಟ್​ಗಳನ್ನು ಪಡೆದಿದ್ದರು.

ಕಳೆದ ವರ್ಷ ಜೆಡ್ಡಾದಲ್ಲಿ ನಡೆದ ಐಪಿಎಲ್​ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್​ ತಂಡ ಅಶ್ವನಿ ಕುಮಾರ್​ ಅವರನ್ನು 30 ಲಕ್ಷಕ್ಕೆ ಖರೀದಿ ಮಾಡಿತ್ತು. ಅದಕ್ಕೆ ತಕ್ಕಂತೆ ಚೊಚ್ಚಲ ಪಂದ್ಯದಲ್ಲೇ ಎಡಗೈ ವೇಗಿ ಅಶ್ವನಿ ಕುಮಾರ್​ ಮಿಂಚಿನ ಬೌಲಿಂಗ್​ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬೈ ಪರ ಬೌಲಿಂಗ್​ ಮಾಡಿದ ಯುವ ವೇಗಿ ಅಶ್ವನಿ ಕುಮಾರ್​ ಕೆಕೆಆರ್​ ತಂಡದ ನಾಲ್ವರು ಬಲಿಷ್ಠ ಆಟಗಾರರ ವಿಕೆಟ್​ ಉರುಳಿಸುವಲ್ಲಿ ಯಶಸ್ವಿಯಾದರು. ಮೂರು ಓವರ್​ ಬೌಲ್​ ಮಾಡಿದ ಅಶ್ವಿನಿ 24 ರನ್​ ನೀಡಿ ಅಜಿಂಕ್ಯಾ ರಹಾನೆ, ರಿಂಕು ಸಿಂಗ್​​, ಮನಿಶ್​ ಪಾಂಡೆ, ರಸೆಲ್​ ವಿಕೆಟ್​ಗಳನ್ನು ಉರುಳಿಸಿದರು. ಇದರೊಂದಿಗೆ ಐಪಿಎಲ್​ನಲ್ಲಿ ದೊಡ್ಡ ದಾಖಲೆ ಬರೆದರು.

ಈ ಆಟಗಾರನನ್ನು ಡೆತ್(ಕೊನೆಯ) ಓವರ್‌ಗಳಲ್ಲಿ ಪರಿಣಿತ ಎಂದು ಪರಿಗಣಿಸಲಾಗುತ್ತದೆ. 2022ರಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಪಂಜಾಬ್ ಪರ ಅಶ್ವನಿ ಪಾದಾರ್ಪಣೆ ಮಾಡಿದರು. ಇಲ್ಲಿಯವರೆಗೂ 4 ಟಿ20 ಪಂದ್ಯಗಳಲ್ಲಿ 3 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ತಂಡದ ಗೆಲುವಿಗಾಗಿ ಶತಕ ಬಿಟ್ಟುಕೊಟ್ಟ ಶ್ರೇಯಸ್‌ ಅಯ್ಯರ್; ಗಮನ ಸೆಳೆದ ಕನ್ನಡಿಗ

ಅಶ್ವನಿ ಕುಮಾರ್ 29 ಆಗಸ್ಟ್ 2001 ರಂದು ಮೊಹಾಲಿಯ ಸಣ್ಣ ಹಳ್ಳಿಯಾದ ಝಂಝೇರಿಯಲ್ಲಿ ಜನಿಸಿದರು. ಈ ಆಟಗಾರ ತುಂಬಾ ಚಿಕ್ಕ ವಯಸ್ಸಿನಲ್ಲಿಯೇ ಮೈದಾನದಲ್ಲಿ ಕಸರತ್ತು ಮಾಡಿದ್ದಾರೆ. ಮಧ್ಯಮ ವರ್ಗದ ಕುಟುಂಬದಿಂದ ಬಂದ ಅಶ್ವನಿ ಕುಮಾರ್ ಹೆಸರು ಗಳಿಸಿದ್ದು ಟಿ20 ಕಪ್‌ ಶೇರ್-ಎ-ಪಂಜಾಬ್ ಟೂರ್ನಮೆಂಟ್‌ನಲ್ಲಿ. ಆರು ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಕಬಳಿಸಿ ಎಲ್ಲರ ಗಮನ ಸೆಳೆದರು. ಅಲ್ಲದೆ ಐಪಿಎಲ್‌ನ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಪಡೆದ 10ನೇ ಆಟಗಾರ ಎನಿಸಿಕೊಂಡರು.

ಇಂದು ಐಪಿಎಲ್‌ನಲ್ಲಿ ಅಶ್ವನಿ ಒಂದೇ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದು ಮಿಂಚಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲಿ 3/37 ಮತ್ತು ಟಿ20 ಕ್ರಿಕೆಟ್‌ನಲ್ಲಿ 1/19 ಅವರ ಹಿಂದಿನ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿತ್ತು.

ಅಶ್ವನಿ ಕುಮಾರ್ ಅವರ ವಿಶೇಷತೆ ಎಂದರೆ ಅವರ ವಿಭಿನ್ನ ಶೈಲಿಯ ಬೌಲಿಂಗ್. ವೇಗ ಬದಲಾವಣೆಯ ಹೊರತಾಗಿ, ಈ ಆಟಗಾರ ಬೌನ್ಸರ್‌ಗಳು ಮತ್ತು ಯಾರ್ಕರ್‌ಗಳನ್ನು ಎಸೆಯುವುದರಲ್ಲಿಯೂ ಪರಿಣಿತರು. ಇದಲ್ಲದೆ, ಅವರು ಕೆಳ ಕ್ರಮಾಂಕದಲ್ಲಿ ಉತ್ತಮವಾಗಿ ಬ್ಯಾಟಿಂಗ್‌ ಕೂಡ ಮಾಡಬಲ್ಲರು. ಈ ಆಟಗಾರ ಒತ್ತಡದಲ್ಲಿ ಉತ್ತಮ ಪ್ರದರ್ಶನ ನೀಡುವುದಕ್ಕೆ ಹೆಸರುವಾಸಿ. ಇದೇ ಕಾರಣಕ್ಕೆ ಮುಂಬೈ ಇಂಡಿಯನ್ಸ್ ಈ ಆಟಗಾರನ ಮೇಲೆ ಹೆಚ್ಚು ನೆಚ್ಚಿಕೊಂಡಿದೆ.

ಕೆಕೆಆರ್‌ ಸೋಲಿಗೆ ಕಾರಣಗಳು

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಮುಂಬೈ ಇಂಡಿಯನ್ಸ್ ಎದುರು 8 ವಿಕೆಟ್‌ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿದೆ. ಈ ಪಂದ್ಯದಲ್ಲಿ ಕೋಲ್ಕತ್ತಾ ಸೋಲಿಗೆ ಪ್ರಮುಖ ಕಾರಣಗಳಿವೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಕ್ವಿಂಟನ್ ಡಿ ಕಾಕ್ ಮತ್ತು ಸುನಿಲ್ ನರೈನ್ ಇನಿಂಗ್ಸ್ ತೆರೆಯುವ ಅವಕಾಶ ಪಡೆದರು. ಆದರೆ ಈ ಇಬ್ಬರೂ ಬ್ಯಾಟರ್‌ಗಳು ಮೊದಲ ಎರಡು ಓವರ್‌ಗಳಲ್ಲಿ ಪೆವಿಲಿಯನ್‌ಗೆ ಮರಳಿದರು. ಮೊದಲ ಓವರ್‌ನಲ್ಲಿ ಸುನಿಲ್ ನರೈನ್ ಶೂನ್ಯಕ್ಕೆ ಔಟಾದರೆ, ಕ್ವಿಂಟನ್‌ ಡಿ ಕಾಕ್ ಕೇವಲ 1 ರನ್ ಗಳಿಸಿ ಎರಡನೇ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ಕಳಪೆ ಆರಂಭದಿಂದಾಗಿ ಕೆಕೆಆರ್ ಇನಿಂಗ್ಸ್ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರ ಭಾರವನ್ನು ತಂಡ ಹೊರಬೇಕಾಯಿತು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರಂಭದಲ್ಲೇ ಹಿನ್ನಡೆ ಅನುಭವಿಸಿದ ಕಾರಣ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿತ್ತು. ಇಂತಹ ಸಂದರ್ಭದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಕೂಡ ತಮ್ಮ ಜವಾಬ್ದಾರಿಯನ್ನು ಮರೆತರು. ಮಧ್ಯಮ ಕ್ರಮಾಂಕದ ಬ್ಯಾಟರ್‍‌ಗಳು ಜವಾಬ್ದಾರಿಯುತ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಬೇಕಿತ್ತು.

ಆದರೆ ವೆಂಕಟೇಶ್ ಅಯ್ಯರ್ ಮತ್ತು ರಿಂಕು ಸಿಂಗ್ ಉತ್ತಮ ಇನಿಂಗ್ಸ್ ಕಟ್ಟುವಲ್ಲಿ ವಿಫಲವಾದರು. ಕೆಕೆಆರ್ ತಂಡದ ವಿಕೆಟ್‌ಗಳು ಒಂದೊಂದಾಗಿ ಬೀಳುತ್ತಲೇ ಇದ್ದವು. ಪರಿಣಾಮ ಕೆಕೆಆರ್ ನಿಗದಿತ 20 ಓವರ್‍‌ಗಳನ್ನು ಪೂರ್ಣವಾಗಿ ಆಡಲು ಸಾಧ್ಯವಾಗಲಿಲ್ಲ.

ಪಂದ್ಯವಾಡದೆ ದಾಖಲೆಯಿಂದ ತಪ್ಪಿಸಿಕೊಂಡ ರೋಹಿತ್

ಮುಂಬೈ ಹಾಗೂ ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ. ರೋಹಿತ್‌ ಕೆಕೆಆರ್‌ ವಿರುದ್ಧ ಐಪಿಎಲ್‌ನಲ್ಲಿ 954 ರನ್‌ ಸಿಡಿಸಿದ್ದಾರೆ. ಈ ಟೀಂ ವಿರುದ್ಧ ಅವರ ಸ್ಟ್ರೈಕ್‌ ರೇಟ್‌ 128.05 ಇದೆ. ಸೋಮವಾರದ ಪಂದ್ಯದಲ್ಲಿ ರೋಹಿತ್ 46 ರನ್‌ ಬಾರಿಸಿದ್ದರೆ ಕೆಕೆಆರ್ ವಿರುದ್ಧ 1 ಸಾವಿರ ರನ್‌ ಪೂರ್ಣಗೊಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಬಹುದಿತ್ತು. ಆದರೆ ಈ ದಾಖಲೆಯನ್ನು ಹಿಟ್ ಮ್ಯಾನ್‌ ತಪ್ಪಿಸಿಕೊಂಡರು. ಮಹತ್ವದ ದಾಖಲೆಯನ್ನು ಮುರಿಯಲು ಕೆಕೆಆರ್‌ ಮುಂದಿನ ಪಂದ್ಯದವರೆಗೂ ರೋಹಿತ್ ಕಾಯಬೇಕಿದೆ. ಮುಂದೆ ಕೆಕೆಆರ್‌ ಜೊತೆ ಲೀಗ್‌ ಪಂದ್ಯಗಳು ಇಲ್ಲದಿರುವ ಕಾರಣ ಎರಡೂ ತಂಡಗಳು ಮೇಲುಗೈ ಸಾಧಿಸಿದ ನಂತರ ಕ್ವಾಲಿಫೈಯರ್‌ ಹಂತದ ಪಂದ್ಯಗಳವರೆಗೂ ತಾಳಿಕೊಳ್ಳಬೇಕಿದೆ. ಇಲ್ಲದಿದ್ದರೆ ಮುಂದಿನ ವರ್ಷದ ಆವೃತ್ತಿಯಲ್ಲಿ ಈ ಸಾಧನೆಯ ಬಗ್ಗೆ ಗಮನಹರಿಸಬೇಕಿದೆ.

ಮುಂಬೈ ಹಾಗೂ ಕೆಕೆಆರ್‌ ನಡುವೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು

ರೋಹಿತ್ ಶರ್ಮಾ –  954

ಸೂರ್ಯಕುಮಾರ್ ಯಾದವ್ – 590

ವೆಂಕಟೇಶ್ ಅಯ್ಯರ್ – 362

ಗೌತಮ್ ಗಂಭೀರ್ -349

ಮನೀಶ್ ಪಾಂಡೆ -329

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...