ಚೆಸ್‌ನಲ್ಲಿ ಮಿಂಚುತ್ತಿರುವ ತಮಿಳುನಾಡಿನ ಯುವಕ ಪ್ರಜ್ಞಾನಂದ ಬಗ್ಗೆ ನಿಮಗೆಷ್ಟು ಗೊತ್ತು?

Date:

ಅಝರ್ ಬೈಜಾನ್‌ನ ಬಾಕುವಿನಲ್ಲಿ ನಡೆಯುತ್ತಿರುವ ಫಿಡೇ ವಿಶ್ವಕಪ್ ಚೆಸ್ ಪಂದ್ಯಾವಳಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಫೈನಲ್ ಪ್ರವೇಶಿಸಿದ್ದಾರೆ.

ಫಿಡೆ ಚೆಸ್‌ ವಿಶ್ವಕಪ್‌ನಲ್ಲಿ ಎರಡು ದಶಕಗಳ ಬಳಿಕ ಸೆಮಿಫೈನಲ್‌ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಆರ್‌.ಪ್ರಜ್ಞಾನಂದ ಪಾತ್ರರಾಗಿದ್ದಾರೆ.

ಕ್ಯಾಂಡಿಡೇಟ್ಸ್ ಪಂದ್ಯಾವಳಿಯಲ್ಲಿ ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಬಳಿಕ ಸೆಮಿಫೈನಲ್​ಗೆ​ ಪ್ರವೇಶಿಸಿದ ಮೊದಲ ಭಾರತೀಯ ಚೆಸ್ ಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ 18 ವರ್ಷದ ಆರ್. ಪ್ರಜ್ಞಾನಂದ ಇದೀಗ ಫೈನಲ್​ಗೆ ಪ್ರವೇಶಿಸಿದ ಹಿರಿಮೆಗೂ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೂಲಕ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಗಿದ್ದಾರೆ. ಪ್ರಜ್ಞಾನಂದ ಅವರ ಈ ಸಾಧನೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಪ್ರಮುಖರು ಅಭಿನಂದನೆ ಸಲ್ಲಿಸಿದ್ದಾರೆ.

ದೇಶದ ಹಿರಿಯ ರಾಜಕೀಯ ಮುಖಂಡರ ಸಹಿತ ಹಲವು ಮಂದಿ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಶಸ್ತಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.

ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಜ್ಞಾನಂದ ಅವರು ಐದು ಬಾರಿ ಪ್ರಶಸ್ತಿ ವಿಜೇತ ವಿಶ್ವ ನಂಬರ್ 1 ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ಎದುರಿಸಲಿದ್ದಾರೆ. ಪ್ರಶಸ್ತಿ ಗೆದ್ದರೆ ಇತಿಹಾಸ ನಿರ್ಮಿಸಲಿದ್ದಾರೆ.

ಚೆಸ್​ ವಿಶ್ವಕಪ್ ಫೈನಲ್ ಪಂದ್ಯವು ಅಝರ್ ಬೈಜಾನ್‌ನ ಸ್ಥಳೀಯ ಕಾಲಮಾನದ ಪ್ರಕಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಆರಂಭವಾಗಲಿದೆ.

ಯಾರು ಈ ಪ್ರಜ್ಞಾನಂದ?
ಮೂಲತಃ ತಮಿಳುನಾಡಿನ ಚೆನ್ನೈ ಮೂಲದವರಾದ ಐದು ಬಾರಿ ವಿಶ್ವ ಚಾಂಪಿಯನ್ ಆರ್. ಪ್ರಜ್ಞಾನಂದ, ಆಗಸ್ಟ್ 10, 2005ರಲ್ಲಿ ಜನಿಸಿದರು.

ಈತನ ತಂದೆ ರಮೇಶ್ ಬಾಬು ಹಾಗೂ ತಾಯಿ ನಾಗಲಕ್ಷ್ಮಿ. ರಮೇಶ್ ಬಾಬು ಅವರು ತಮಿಳುನಾಡು ಅಪೆಕ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ತಾಯಿ ಗೃಹಿಣಿ. ಈತನ ಅಕ್ಕನ ಹೆಸರು ವೈಶಾಲಿ.

ಸದ್ಯ ಪ್ರಜ್ಞಾನಂದ ಅವರ ಕೋಚ್ ರಮೇಶ್ ಆರ್.​ಬಿ. ಇವರು ಕೂಡ 2007ರಲ್ಲಿ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್ ಗೆದ್ದ ಚೆನ್ನೈನ ಭಾರತೀಯ ಚೆಸ್ ಗ್ರ್ಯಾಂಡ್‌ ಮಾಸ್ಟರ್.

ಬಾಲ್ಯದಲ್ಲಿ ಪ್ರಜ್ಞಾನಂದ ಅವರು ತನ್ನ ಸಹೋದರಿ ವೈಶಾಲಿ ಜೊತೆಗೆ ಟಿವಿ ಕಾರ್ಟೂನ್​ ಅನ್ನು ಹೆಚ್ಚಾಗಿ ವೀಕ್ಷಿಸುತ್ತಿದ್ದರಂತೆ. ಇದರಿಂದ ಚಿಂತೆಗೀಡಾಗಿದ್ದ ಪೋಷಕರು ಚೆಸ್ ಬೋರ್ಡ್‌ ಅನ್ನು ಖರೀದಿಸಿ, ತಂದುಕೊಟ್ಟಿದ್ದರು. ಆ ಬಳಿಕ ಈತನಿಗೆ ಚೆಸ್‌ನಲ್ಲಿ ಆಸಕ್ತಿ ಹುಟ್ಟಿಕೊಂಡಿತ್ತು.

ಪ್ರಜ್ಞಾನಂದ, 2016ರಲ್ಲಿ 10 ವರ್ಷ, 10 ತಿಂಗಳುಗಳು ಮತ್ತು 19 ದಿನಗಳ ವಯಸ್ಸಿನಲ್ಲಿ ಕಿರಿಯ ಅಂತಾರಾಷ್ಟ್ರೀಯ ಮಾಸ್ಟರ್ ಆಗುವ ಮೂಲಕ ವಿಶ್ವಮಟ್ಟದಲ್ಲಿ ದಾಖಲೆಯನ್ನು ನಿರ್ಮಿಸಿದ ಕೀರ್ತಿ ಹೊಂದಿದ್ದಾನೆ.

ಆರ್ ಪ್ರಜ್ಞಾನಂದ ಅವರಿಗೆ ಈಗ ಕೇವಲ 18 ವರ್ಷ. ಪ್ರಜ್ಞಾನಂದ 2013ರಲ್ಲಿ ವಿಶ್ವ ಯೂತ್ ಚೆಸ್ ಚಾಂಪಿಯನ್‌ಶಿಪ್ ಅಂಡರ್-8ನಲ್ಲಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. 7 ನೇ ವಯಸ್ಸಿನಲ್ಲಿ ಫಿಡೆ ಮಾಸ್ಟರ್ ಮತ್ತು 2015ರಲ್ಲಿ 10 ವರ್ಷದೊಳಗಿನ ಪ್ರಶಸ್ತಿಯನ್ನು ಗಳಿಸಿದ್ದಾರೆ.

ಪ್ರಜ್ಞಾನಂದ ಅವರಿಗೆ ರಾಮ್ಕೊ ಸಿಮೆಂಟ್ ಕಂಪನಿ ಮತ್ತು ಇಂಡಿಯನ್ ಆಯಿಲ್ ಸಂಸ್ಥೆ ಪ್ರಾಯೋಜಕರಾಗಿದ್ದಾರೆ.

ಫೈನಲ್ ಪಂದ್ಯದ ನೇರಪ್ರಸಾರ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...