ಟಿ20 | ಮತ್ತೆ ಎಡವಿದ ಭಾರತ; ಎರಡನೇ ಪಂದ್ಯದಲ್ಲೂ ವಿಂಡೀಸ್‌ಗೆ ರೋಚಕ ಗೆಲುವು

Date:

ಬೌಲರ್‌ಗಳಾದ ಅಕೆಲ್ ಹೊಸೈನ್(16), ಅಲ್ಜಾರಿ ಜೋಸೆಫ್(10) ಅವರ ತಾಳ್ಮೆಯ ಬ್ಯಾಟಿಂಗ್‌ ಹಾಗೂ ನಿಕೋಲಸ್ ಪೂರನ್ (67) ಭರ್ಜರಿ ಅರ್ಧ ಶತಕದ ನೆರವಿನಿಂದ ವೆಸ್ಟ್‌ ಇಂಡೀಸ್‌ ತಂಡ ಭಾರತದ ವಿರುದ್ಧ ಸತತ ಎರಡನೇ ಗೆಲುವು ದಾಖಲಿಸಿತು.

ಟೀಂ ಇಂಡಿಯಾ ನೀಡಿದ 153 ರನ್ ಸಾಧಾರಣ ಗುರಿಯನ್ನು ಬೆನ್ನಟ್ಟಿದ ವೆಸ್ಟ್‌ ಇಂಡೀಸ್‌ 18.5 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಜಯ ಪಡೆಯಿತು. ಇದರೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ಅತಿಥೇಯ ತಂಡ 2-0 ಮುನ್ನಡೆ ಸಾಧಿಸಿದೆ.

ಆರಂಭದಲ್ಲೇ ವೆಸ್ಟ್ ಇಂಡೀಸ್‌ಗೆ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಪ್ರಮುಖ ಮೂರು ವಿಕೆಟ್ ಕಬಳಿಸಿ ಆಘಾತ ನೀಡಿದರು. ಪ್ರಮುಖ ಬ್ಯಾಟರ್‌ಗಳಾದ ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ ಹಾಗೂ ಜಾನ್ಸನ್ ಚಾರ್ಲ್ಸ್ ಬೇಗನೆ ವಿಕೆಟ್ ಒಪ್ಪಿಸಿದರು. ಆದರೆ ನಿಕೋಲಸ್ ಪೂರನ್ ಹಾಗೂ ನಾಯಕ ರೋವ್ಮನ್ ಪೊವೆಲ್ ಆಟದಿಂದ ವೆಸ್ಟ್ ಇಂಡೀಸ್ ಚೇತರಿಸಿಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊವೆಲ್ 21 ರನ್ ಬಾರಿಸಿ ನಿರ್ಗಮಿಸಿದರು. ಆದರೆ ನಿಕೋಲಸ್ ಪೂರನ್ ಸ್ಫೋಟಕ ಬ್ಯಾಟಿಂಗ್ ವಿಂಡೀಸ್ ತಂಡದ ಆತ್ಮವಿಶ್ವಾಸ ಹೆಚ್ಚಿಸಿತು. ಪೂರನ್ ಹಾಫ್ ಅರ್ಧ ಶತಕ ಸಿಡಿಸಿ ಮಿಂಚಿದರು. 40 ಎಸೆತದಲ್ಲಿ 4 ಸಿಕ್ಸರ್, 6 ಬೌಂಡರಿಗಳೊಂದಿಗೆ 67 ರನ್ ಸಿಡಿಸಿ ಪೂರನ್ ನಿರ್ಗಮಿಸಿದರು.

ಪೂರನ್ ಆಟದಿಂದ ವಿಂಡೀಸ್ ಸುಲಭ ಗೆಲುವಿನತ್ತ ದಾಪುಗಾಲಿಟ್ಟಿತು. ಆದರೆ ಮುಖೇಶ್ ಕುಮಾರ್ ಬೌಲಿಂಗ್‌ನಲ್ಲಿ ಪೂರನ್ ವಿಕೆಟ್ ಪತನದ ಬಳಿಕ ಟೀಂ ಇಂಡಿಯಾ ನಿಧಾನವಾಗಿ ಪಂದ್ಯದ ಮೇಲೆ ಹಿಡಿತ ಸಾಧಿಸಲು ಆರಂಭಿಸಿತು.

ಈ ಸುದ್ದಿ ಓದಿದ್ದೀರಾ? ಟಿ20: ಭಾರತದ ವಿರುದ್ಧ ರೋಚಕ ಗೆಲುವು ಸಾಧಿಸಿದ ವೆಸ್ಟ್ ಇಂಡೀಸ್

ರೋಮಾರಿಯೋ ಶೆಫರ್ಡ್ ರನ್‌ಔಟ್‌ ಆದರೆ, ಜೇಸನ್ ಹೋಲ್ಡರ್ ಶೂನ್ಯಕ್ಕೆ ನಿರ್ಗಮಿಸಿದರು. ಶಿಮ್ರೊನ್ ಹೆಟ್ಮೆಯರ್ 22 ರನ್ ಔಟಾದರು. ಈ ಮೂಲಕ ವಿಂಡೀಸ್ ಗೆಲುವಿಗೆ ಅಂತಿಮ 24 ಎಸೆತದಲ್ಲಿ 24 ರನ್ ಅವಶ್ಯಕತೆ ಇತ್ತು. ಇತ್ತ ಭಾರತ ಪ್ರಮುಖ 8 ವಿಕೆಟ್ ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಭಾರತದ ಗೆಲುವಿಗೆ ಕೇವಲ 2 ವಿಕೆಟ್ ಅವಶ್ಯಕತೆ ಇತ್ತು.

ಅಕೆಲ್ ಹುಸೈನ್ ಹಾಗೂ ಅಲ್ಜಾರಿ ಜೊಸೆಫ್ ತಾಳ್ಮೆಯ ಹೋರಾಟದಿಂದ ಪಂದ್ಯ ವಿಂಡೀಸ್ ಕಡೆ ವಾಲಿತು. 18.5 ನೇ ಓವರ್‌ನಲ್ಲಿ ಅಕೀಲ್ ಹುಸೈನ್ ಬೌಂಡರಿ ಸಿಡಿಸುವ ಮೂಲಕ ವೆಸ್ಟ್ ಇಂಡೀಸ್ 2 ವಿಕೆಟ್ ರೋಚಕ ಗೆಲುವು ಪಡೆಯಿತು.

ಭಾರತದ ಬ್ಯಾಟಿಂಗ್‌ ಮತ್ತೆ ವಿಫಲ

ಟಾಸ್‌ ಗೆದ್ದ ಭಾರತ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲು ವಿಫಲಗೊಂಡಿತು. ತಿಲಕ್ ವರ್ಮಾ ಸಿಡಿಸಿದ ಅರ್ಧಶಕ ನೆರವಿನಿಂದ 152 ರನ್‌ಗಳ ಸಾಧಾರಣ ಮೊತ್ತ ಗಳಿಸಿತು. ಇಶಾನ್ ಕಿಶನ್ 27 ರನ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಅವರ 24 ರನ್ ಹೊರತುಪಡಿಸಿದರೆ, ಉಳಿದ ಬ್ಯಾಟ್ಸಮನ್‌ಗಳು ಮತ್ತೆ ವೈಫಲ್ಯ ಕಂಡರು.

ಶುಭಮನ್‌ ಗಿಲ್ ಕೇವಲ 7 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 1 ರನ್‌ಗೆ ನಿರ್ಗಮಿಸಿದರು. ಸಂಜು ಸ್ಯಾಮ್ಸನ್ 7 ರನ್‌ನೊಂದಿಗೆ ಪೆವಿಲಿಯನ್ ಸೇರಿಕೊಂಡರು. ಅಂತಿಮವಾಗಿ ಭಾರತ 7 ವಿಕೆಟ್ ನಷ್ಟಕ್ಕೆ 152 ರನ್ ಪೇರಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...