ಅಪರೂಪದ ಅದ್ಭುತ ಕ್ರಿಕೆಟಿಗ ಧೋನಿ ನಿವೃತ್ತಿ ಘೋಷಿಸಲಿದ್ದಾರೆಯೇ?

Date:

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಎಂದಾಕ್ಷಣ ಎಲ್ಲರೂ ಹೇಳುವ ಮಾತು- ಸೌಮ್ಯ ಸ್ವಭಾವದ, ಅಪಾರ ತಾಳ್ಮೆಯ, ಸಿಕ್ಕಾಪಟ್ಟೆ ಶಿಸ್ತಿನ, ವಿವಾದಗಳಿಲ್ಲದ, ವಿಪರೀತಕ್ಕೆ ಹೋಗದ ಅಪ್ರತಿಮ ಕ್ರಿಕೆಟಿಗ. ಐಪಿಎಲ್ ನಲ್ಲಿ ಚೆನ್ನೈ ತಂಡ ಗೆಲ್ಲಿಸಿ ಕ್ರಿಕೆಟ್ ಆಟಕ್ಕೆ ವಿದಾಯ ಹೇಳುತ್ತಿದ್ದಾರೆಯೇ?

ಕ್ರಿಕೆಟ್ ಇವತ್ತು ಕೇವಲ ಆಟವಾಗಿ ಉಳಿದಿಲ್ಲ. ಕೋಟ್ಯಂತರ ರೂಪಾಯಿಗಳ ವಹಿವಾಟುಳ್ಳ ಬೃಹತ್ ಉದ್ಯಮವಾಗಿ ಬೆಳೆದು ನಿಂತಿದೆ. ಕ್ರಿಕೆಟ್ ಆಟಗಾರ ರನ್ ಹೊಳೆ ಹರಿಸುವ, ವಿಕೆಟ್ ಉರುಳಿಸುವ ಮೈದಾನದ ಮೆಷಿನ್ ಆಗಿದ್ದಾನೆ. ಹಣದ ದಾಹಕ್ಕೆ, ಖ್ಯಾತಿಯ ಗೀಳಿಗೆ ಒಳಗಾಗಿದ್ದಾನೆ. ಸಂಯಮವೇ ಸಂಸ್ಕೃತಿ ಎಂಬುದನ್ನು ಮರೆತ ಪ್ರೇಕ್ಷಕರು ಹುಚ್ಚು ಅಭಿಮಾನಿಗಳಾಗಿ, ದೇಶಪ್ರೇಮಿಗಳಾಗಿ ರೂಪಾಂತರಗೊಂಡಿದ್ದಾರೆ. ಗೆದ್ದರೆ ಹೊಗಳುವ, ಸೋತರೆ ಕೆರಳುವ ಜನ, ಅದು ಆಟ, ಅಲ್ಲಿ ಸೋಲು-ಗೆಲುವು ಸಾಮಾನ್ಯ ಎನ್ನುವುದನ್ನೇ ಮರೆತಿದ್ದಾರೆ. ಇಂತಹ ಒತ್ತಡದಲ್ಲಿ ಆಡಬೇಕಾದ ಆಟಗಾರ, ಆಟದ ಸೊಗಸನ್ನು, ಕಲಾತ್ಮಕತೆಯನ್ನು ಕಡೆಗಣಿಸಿ, ತಂತ್ರಗಾರಿಕೆಗೆ ತಲೆಬಾಗಿದ್ದಾನೆ. ಪ್ರೇಕ್ಷಕರು, ಆಯ್ಕೆದಾರರು, ಜಾಹೀರಾತುದಾರರು, ಬೆಟ್ಟಿಂಗ್ ಕಟ್ಟುವವರ ಒತ್ತಡಕ್ಕೆ ಒಳಗಾಗಿ ಜೀವವನ್ನು ಒತ್ತೆಯಿಟ್ಟು ಆಡುತ್ತಿದ್ದಾನೆ.

ಇಷ್ಟೆಲ್ಲ ಹಳವಂಡಗಳನ್ನು ಒಳಗೊಂಡ ಅಬ್ಬರದ ಐಪಿಎಲ್ ಜಾತ್ರೆ ಮುಗಿದಿದೆ. ಬಾರ್, ಕ್ಲಬ್, ಪಬ್‌ಗಳಲ್ಲಿ ಸದ್ಯಕ್ಕೆ ಸದ್ದಡಗಿದೆ. ಹಾಗೆಯೇ ಈ ಬಾರಿಯ ಐಪಿಎಲ್‌ನಲ್ಲಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದ್ದ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ- ಗುಜರಾತಿನ ಅಮಿತ್ ಶಾ ಪುತ್ರ ಬಿಸಿಸಿಐನ ಕಾರ್ಯದರ್ಶಿ ಜಯ್ ಶಾನ ಕೃಪಾಶೀರ್ವಾದವಿದ್ದ ತಂಡ- ಫೈನಲ್‌ನಲ್ಲಿ ಉತ್ತಮವಾಗಿ ಆಡಿದರೂ, ಅನುಭವಿ ಆಟಗಾರ ಧೋನಿ ತಂಡದ ಆಟದ ಮುಂದೆ ತಲೆಬಾಗಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಎಲ್ಲರ ಚಿತ್ತ ರಾಂಚಿಯ 42ರ ಹರೆಯದ ಮಹೇಂದ್ರ ಸಿಂಗ್ ಧೋನಿಯತ್ತಲೇ ಇತ್ತು. ಇದೇ ಅವರ ಕೊನೆ ಐಪಿಎಲ್ ಆಟವಾಗಲಿದೆ, ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಹಾಗಾಗಿ ಐಪಿಎಲ್‌ನಿಂದ ನಿರ್ಗಮಿಸುವ ಮುನ್ನ, ತನ್ನ ತಂಡಕ್ಕೆ ಜಯ ತಂದುಕೊಡಬೇಕೆಂಬ ಮಹದಾಸೆ ಮಹೇಂದ್ರ ಸಿಂಗ್ ಧೋನಿಗಿದ್ದಂತೆ ಕಾಣುತ್ತಿತ್ತು. ಅದಕ್ಕಾಗಿ ಅವರು ತಮ್ಮ ವಯಸ್ಸನ್ನು ಬದಿಗಿಟ್ಟು ಹರೆಯದ ಹುಡುಗರೊಂದಿಗೆ ಹುಡುಗರಾಗಿ ಆಡಿ ತಂಡವನ್ನು ಫೈನಲ್‌ವರೆಗೆ ತಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ 215 ರನ್ ಗಳ ಗುರಿ ನೀಡಿತ್ತು. ಸಾಯಿ ಸುದರ್ಶನ್ ಅತ್ಯುತ್ತಮವಾಗಿ ಆಡಿ, ತಂಡವನ್ನು ಸುಭದ್ರ ಸ್ಥಿತಿಯಲ್ಲಿ ನಿಲ್ಲಿಸಿದ್ದರು. ಆದರೆ ಅಪಾರ ಅನುಭವಗಳ ಧೋನಿ, ತನ್ನ ತಂಡದ ಆಟಗಾರರಿಗೆ ತಿಳಿವಳಿಕೆ ತುಂಬಿದರು ಮತ್ತು ನಂಬಿದರು. ಅವರು ಧೋನಿಗಾಗಿ ಆಡಿದರು ಮತ್ತು ಗೆದ್ದು ಧೋನಿಗೆ ಸಮರ್ಪಿಸಿದರು. ಕೊನೆಯ ಓವರ್‍‌ನ ಎರಡು ಎಸೆತಗಳಲ್ಲಿ ಅಜಯ್ ಜಡೇಜಾ ಎಂಬ ಆಲ್ ರೌಂಡರ್, ಒಂದು ಸಿಕ್ಸರ್ ಮತ್ತು ಒಂದು ಫೋರ್ ಬಾರಿಸುವ ಮೂಲಕ ತಂಡಕ್ಕೆ ಜಯ ತಂದಿತ್ತರು. ‍ಆ ಮೂಲಕ ಗುಜರಾತ್-ಚೆನ್ನೈ ನಡುವಿನ ಆ ಫೈನಲ್ ಪಂದ್ಯ ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ಬಹುಕಾಲ ಉಳಿಯುವಂತೆ ಮಾಡಿದರು.

ಇದನ್ನು ಓದಿದ್ದೀರಾ?: ಹಿಜಾಬು ಮತ್ತು ಕುಸ್ತಿ ಅಖಾಡದಲ್ಲಿ ಮನುವಾದಿ ಮಸಲತ್ತು

ಧೋನಿ ಎಂಬ ಆಟಗಾರನೇ ಬೇರೆ. ಅವರ ಆಟವೂ ಬೇರೆ. ಕೀಪಿಂಗ್‌ನಲ್ಲಿ ಅವರನ್ನು ಮೀರಿಸುವ ಮತ್ತೊಬ್ಬ ಆಟಗಾರನಿಲ್ಲ. ಅವರ ಸ್ಟಂಪ್ ಟೈಮಿಂಗ್ ಅಂತೂ ಅದ್ಭುತ. ಇನ್ನು ಬ್ಯಾಟಿಂಗ್ ಶೈಲಿ- ಅದರಲ್ಲೂ ಅವರ ಹೆಲಿಕಾಪ್ಟರ್ ಶಾಟ್ ಅಂತೂ ಸೂಪರ್‍ಬ್‌. ಧೋನಿಯವರ ಕೀಪಿಂಗ್ ಶೈಲಿಯಲ್ಲಿ ಸೈಯದ್ ಕಿರ್ಮಾನಿ, ಜೆಫ್ ಡುಜೋನ್, ಆಡಂ ಗಿಲ್‌ಕ್ರಿಸ್ಟ್- ಮೂವರ ಮಿಶ್ರಣವಿದೆ. ಆದರೆ ಸ್ಟಂಪಿಂಗ್ ನಲ್ಲಿ, ಆ ಟೈಮಿಂಗ್ ನಲ್ಲಿ ಧೋನಿಗೆ ಧೋನಿಯೇ ಸಾಟಿ. ಐಪಿಎಲ್‌ ಫೈನಲ್‌ನಲ್ಲೂ ಸ್ಟಂಪಿಂಗ್ ಕೈಚಳಕ ತೋರಿದ ಮಹಿ, ಗುಜರಾತ್ ಟೈಟನ್ಸ್ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್‌ರನ್ನು ಕಣ್ಮುಚ್ಚಿ ಬಿಡುವುದರೊಳಗೆ ಸ್ಪಂಪ್ ಮಾಡಿ, ಪೆವಿಲಿಯನ್‌ಗೆ ಕಳಿಸಿದ್ದರು. ಇದು ಅವರ ಐಪಿಎಲ್‌ನ 300ನೇ ಸ್ಟಂಪಿಂಗ್ ಆಗಿ ದಾಖಲೆ ಬರೆದಿದೆ. ಅವರ ಒಂದೊಂದು ಸ್ಟಂಪಿಂಗ್ ಕೂಡ ದಾಖಲೆಗೆ ಅರ್ಹವಾದ, ಕ್ರಿಕೆಟ್ ಪ್ರೇಮಿಗಳ ಖುಷಿಗೆ ಕಾರಣವಾದ, ಅಧ್ಯಯನಕ್ಕೆ ಯೋಗ್ಯವಾದವು.

ಧೋನಿ ಎಲ್ಲರಂತಲ್ಲ. ತಮ್ಮ ಆಟದಿಂದ ತಂಡ ಗೆದ್ದರೂ ಅಗತ್ಯಕ್ಕಿಂತ ಹೆಚ್ಚು ಮಾತನಾಡಿದ್ದಿಲ್ಲ. ಮೆರೆದಾಡಿದ್ದಂತೂ ಇಲ್ಲವೇ ಇಲ್ಲ. ಅವರ ಸಂಯಮ ಮತ್ತು ತಣ್ಣನೆ ವ್ಯಕ್ತಿತ್ವ ಮಿಕ್ಕವರಿಗೆ ಮಾದರಿಯಾಗುವಂಥದ್ದು. ಧೋನಿಗೆ ಕ್ರಿಕೆಟ್ ಲೋಕದ ಪ್ರತಿಷ್ಠಿತ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಭಾರತ ಸರಕಾರ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ. ಸಿಗಬಾರದಷ್ಟು ದುಡ್ಡು ಸಿಕ್ಕಿದೆ. ಆದರೆ ಧೋನಿ ಅವೆಲ್ಲವನ್ನು ಬದಿಗಿಟ್ಟವರು; ಪ್ರಚಾರಕ್ಕೆ, ಪ್ರಶಸ್ತಿಗಳಿಗೆ, ಸನ್ಮಾನಗಳಿಗೆ ಆಸೆಪಡದವರು.

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಎಂದಾಕ್ಷಣ ಎಲ್ಲರೂ ಹೇಳುವ ಮಾತು- ಸೌಮ್ಯ ಸ್ವಭಾವದ, ಅಪಾರ ತಾಳ್ಮೆಯ, ಸಿಕ್ಕಾಪಟ್ಟೆ ಶಿಸ್ತಿನ, ವಿವಾದಗಳಿಲ್ಲದ, ವಿಪರೀತಕ್ಕೆ ಹೋಗದ ಅಪ್ರತಿಮ ಕ್ರಿಕೆಟಿಗ. ಆತ್ಮೀಯತೆಗೂ, ಕಲಾತ್ಮಕ ಶೈಲಿಯ ಹೊಡೆತಕ್ಕೂ ಹೆಸರಾದ, ತಂಡಕ್ಕಾಗಿ ತುಡಿಯುವ, ದೇಶಕ್ಕಾಗಿ ಆಡುವ, ಜವಾಬ್ದಾರಿಯನ್ನೆಂದೂ ಮರೆಯದ ಆಟಗಾರ. ಗೆದ್ದಾಗ ಮೆರೆಯದ, ಸೋತಾಗ ಸೊರಗದ ಸ್ಥಿತಪ್ರಜ್ಞ. ಮೈದಾನದಿಂದ ಹೊರಗೆ, ಸಾಮಾಜಿಕ ಬದುಕಿನಲ್ಲೂ ಅದೇ ಸಂಯಮದ ನಡೆ-ನುಡಿಗೆ ಹೆಸರಾದವರು. ತಾನೊಬ್ಬ ಸ್ಟಾರ್ ಎಂಬ ಅಹಂನಿಂದ ಆಚೆಗೆ ನಿಂತವರು.

ಹಾಗಾಗಿ ಧೋನಿ ಆಟ ಮತ್ತು ಅವರು ಮೈಗೂಡಿಸಿಕೊಂಡ ವ್ಯಕ್ತಿತ್ವವೇ ಅವರನ್ನು ಇಷ್ಟು ಎತ್ತರಕ್ಕೆ ತಂದು ನಿಲ್ಲಿಸಿದೆ. ಅವರು ಆಡಲಿ, ಆಡದಿರಲಿ- ಅವರು ಎಂದೆಂದಿಗೂ ಕ್ರಿಕೆಟ್ ಲೋಕದ ಧ್ರುವತಾರೆಯಾಗಿ ಮಿನುಗಲಿದ್ದಾರೆ.

Basavaraju Megalkeri
+ posts

ಲೇಖಕ, ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಬಸವರಾಜು ಮೇಗಲಕೇರಿ
ಬಸವರಾಜು ಮೇಗಲಕೇರಿ
ಲೇಖಕ, ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...