ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​

Date:

`ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ದೌರ್ಜ್ಯನದ ಆರೋಪಗಳಲ್ಲಿ ಯಾವುದಾದರೂ ಒಂದು ಆರೋಪ ಸಾಬೀತಾದರೂ ನಾನು ನೇಣಿಗೆ ಶರಣಾಗುತ್ತೇನೆ’ ಎಂದು  ಭಾರತೀಯ ಕುಸ್ತಿ ಫೆಡರೇಶನ್ ​(ಡಬ್ಲ್ಯೂಎಫ್ಐ) ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಹೇಳಿದ್ದಾರೆ.

ಉತ್ತರ ಪ್ರದೇಶದ ಬಾರಬಂಕಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬ್ರಿಜ್​ ಭೂಷಣ್, ʻಕುಸ್ತಿಪಟುಗಳು ಸರ್ಕಾರದ ಬಳಿ ನನ್ನನ್ನು ನೇಣುಗಂಬಕ್ಕೆ ಏರಿಸಬೇಕೆಂದು ಪಟ್ಟು ಹಿಡಿಯಲು ಪ್ರಾರಂಭಿಸಿ ಸುಮಾರು ನಾಲ್ಕು ತಿಂಗಳಾಗಿದೆ. ಆದರೆ ಸರ್ಕಾರ ನನ್ನನ್ನು ನೇಣಿಗೇರಿಸುತ್ತಿಲ್ಲ. ಅದಕ್ಕಾಗಿ ಅವರು ತಮ್ಮ ಪದಕಗಳನ್ನು ಪವಿತ್ರ ಗಂಗೆಗೆ ಎಸೆಯಲು ತೀರ್ಮಾನಿಸಿದ್ದರು. ಪದಕಗಳನ್ನು ಗಂಗೆಗೆ ಎಸೆಯುವುದರಿಂದ ಬ್ರಿಜ್‌ ಭೂಷಣ್‌ನನ್ನು ಗಲ್ಲಿಗೇರಿಸಲು ಸಾಧ್ಯವಾಗುವುದಿಲ್ಲ. ಬದಲಾಗಿ ನನ್ನ ಮೇಲಿನ ಆರೋಪಗಳಲ್ಲಿ ಒಂದನ್ನಾದರೂ ಸಾಬೀತುಪಡಿಸಿʼ ಎಂದು ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಸಂಸದನೂ ಆಗಿರುವ ಬ್ರಿಜ್‌ ಭೂಷಣ್‌ ಸಿಂಗ್‌ ಹೇಳಿದ್ದಾರೆ.

 ʻಕುಸ್ತಿಪಟುಗಳು ನನಗೆ ಮಕ್ಕಳಿದ್ದಂತೆ. ನಾನು ಯಾವತ್ತೂ ಅವರನ್ನು ತೆಗಳುವ ಮಾತುಗಳನ್ನಾಡುವುದಿಲ್ಲ. ಏಕೆಂದರೆ ಅವರ ಸಾಧನೆಗಳಲ್ಲಿ ನನ್ನ ರಕ್ತದ, ಬೆವರಿನ ಫಲವೂ ಇದೆ. ಆದರೆ, ನನ್ನ ವಿರುದ್ಧ ಮಾಡಲಾಗಿರುವ ಒಂದೇ ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ ಎಂಬ ನನ್ನ ಹಿಂದಿನ ಮಾತನ್ನು ಮತ್ತೆ ಪುನರಾವರ್ತನೆ ಮಾಡುತ್ತಿದ್ದೇನೆʼ ಎಂದು ಸಿಂಗ್‌  ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʻನನ್ನ ವಿರುದ್ಧದ ದೂರಿನ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿಮ್ಮ ಬಳಿ ಯಾವುದೇ ಪುರಾವೆಗಳಿದ್ದರೂ ಪೊಲೀಸರಿಗೆ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿ. ಆರೋಪದಲಿ ಸತ್ಯವಿದ್ದರೆ ಪೊಲೀಸರು ನನ್ನನ್ನು ಬಂಧಿಸುತ್ತಾರೆ. ಯಾವುದೇ ಶಿಕ್ಷೆಯನ್ನು ಎದುರಿಸಲು ನಾನು ಸಿದ್ದನಿದ್ದೇನೆʼ ಎಂದು ಸಿಂಗ್‌ ಹೇಳಿದ್ದಾರೆ.

ಡಬ್ಲ್ಯೂಎಫ್ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ದೆಹಲಿಯಲ್ಲಿ ಭಾರತೀಯ ಕುಸ್ತಿಪಟುಗಳು ನಡೆಸುತ್ತಿರುವ ಧರಣಿ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದನ್ನು ಪ್ರತಿಭಟಿಸಿ ದೇಶದ ಪ್ರಮುಖ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದಾಗಿ ಘೋಷಿಸಿದ್ದರು. ಆದರೆ ಮಂಗಳವಾರ ಹರಿದ್ವಾರದಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ‘ರೈತ ನಾಯಕ’ ನರೇಶ್ ಟಿಕಾಯಿತ್, ನದಿಯಲ್ಲಿ ಬಿಡುವುದಕ್ಕಾಗಿ ತಂದಿದ್ದ ಪದಕಗಳನ್ನು ತಮ್ಮ ವಶಕ್ಕೆ ಪಡೆದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...