ಕ್ರಿಕೆಟ್ ವಿಶ್ವಕಪ್ ಉದ್ಘಾಟನಾ ಪಂದ್ಯ | ನರೇಂದ್ರ ಮೋದಿ ಸ್ಟೇಡಿಯಂ ಖಾಲಿ ಖಾಲಿ: ಫೋಟೋ ವೈರಲ್

Date:

ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದ ವಿಶ್ವಕಪ್‌ ಮಹಾಸಮರಕ್ಕೆ ಇಂದಿನಿಂದ (ಗುರುವಾರ) ಅಧಿಕೃತ ಚಾಲನೆ ಸಿಕ್ಕಿದೆ. ಪ್ರಶಸ್ತಿಗಾಗಿ 10 ತಂಡಗಳು ಸೆಣಸಾಡಲಿವೆ. ಇಂದಿನಿಂದ ನವೆಂಬರ್ 19ರವರೆಗೆ ವಿಶ್ವಕಪ್ ಕದನ ನಡೆಯಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್ ಅದ್ಧೂರಿ ಉದ್ಘಾಟನಾ ಸಮಾರಂಭಕ್ಕೆ ಯೋಜನೆ ಹಾಕಿಕೊಂಡಿದ್ದ ಬಿಸಿಸಿಐ ಕೊನೆ ಗಳಿಗೆಯಲ್ಲಿ ಸಮಾರಂಭ ಕೈಬಿಟ್ಟಿದೆ.

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಆದರೆ ಈ ಪಂದ್ಯಕ್ಕೆ ಅಭಿಮಾನಿಗಳಿಂದ ಅತ್ಯಂತ ನೀರಸವಾದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿಶ್ವದ ಅತಿ ದೊಡ್ಡ ಕ್ರೀಡಾಂಗಣ ಎನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಹೆಸರಿನ ಕ್ರೀಡಾಂಗಣ ಸಂಪೂರ್ಣವಾಗಿ ಖಾಲಿ ಖಾಲಿಯಾಗಿದೆ. ಇದರ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ 1,32,000 ದಷ್ಟು ವೀಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ಇಷ್ಟು ದೊಡ್ಡ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯಕ್ಕೆ ಅಭಿಮಾನಿಗಳು ಅತ್ಯಂತ ನೀರಸವಾದ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ 4 ಸಾವಿರ ಮಂದಿ ಭಾಗಿಯಾಗಿರುವುದಾಗಿ ಟ್ವಿಟ್ಟರ್ ಸೇರಿದಂತೆ ಹಲವು ಸೋಷಿಯಲ್ ಮೀಡಿಯಾಗಳಲ್ಲಿ ಬಳಕೆದಾರರು ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಈ ಬೆಳವಣಿಗೆಯು ಕೇಂದ್ರ ಸರ್ಕಾರ ಹಾಗೂ ಬಿಸಿಸಿಐಯನ್ನು ಮುಜುಗರಕ್ಕೀಡು ಮಾಡಿದೆ.

bjp 18

ಉಚಿತ ಟಿಕೆಟ್ ವಿತರಿಸಿದ್ದ ಬಿಜೆಪಿ ಮುಖಂಡರು

‘ಇಂಡಿಯನ್ ಎಕ್ಸ್‌ಪ್ರೆಸ್’ ಜೊತೆಗೆ ಮಾತನಾಡಿದ್ದ ಬೋಡಕ್‌ದೇವ್ ಪ್ರದೇಶದ ಬಿಜೆಪಿ ಉಪಾಧ್ಯಕ್ಷ ಲಲಿತ್ ವಾಧವನ್, ‘ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿರುವ ಹಿನ್ನೆಲೆಯಲ್ಲಿ ಸುಮಾರು 40 ಸಾವಿರ ಟಿಕೆಟ್‌ಗಳನ್ನು ಗುಜರಾತ್‌ನ ಮಹಿಳೆಯರಿಗೆ ಉಚಿತವಾಗಿ ಹಂಚಿದ್ದೇವೆ. ಜೊತೆಗೆ ಊಟದ ಕೂಪನ್ ಕೂಡ ವಿತರಿಸಿದ್ದೇವೆ. ಅವರೆಲ್ಲರೂ ಉದ್ಘಾಟನಾ ಪಂದ್ಯ ವೀಕ್ಷಿಸಲಿದ್ದಾರೆ. ಸ್ಟೇಡಿಯಂ ಜನರಿಂದ ತುಂಬಿ ತುಳುಕಲಿದೆ’ ಎಂದು ತಿಳಿಸಿದ್ದರು.

ಆದರೆ, ಬಿಜೆಪಿ ವಿತರಿಸಿದ್ದ 40 ಸಾವಿರ ಟಿಕೆಟ್‌ಗಳ ಪೈಕಿ ಅರ್ಧದಷ್ಟೂ ಜನರು ಉದ್ಘಾಟನಾ ಪಂದ್ಯವನ್ನು ವೀಕ್ಷಿಸಲು ಸ್ಟೇಡಿಯಂಗೆ ಬಾರದಿರುವುದು ಈಗ ಗುಜರಾತ್ ಹಾಗೂ ಕೇಂದ್ರದ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿದೆ.

ಈ ರೀತಿಯ ಬೆಳವಣಿಗೆಗೆ ಬಿಸಿಸಿಐ ಕಾರ್ಯದರ್ಶಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರ ಮಗ ಜಯ್ ಶಾ ಅವರೇ ಕಾರಣ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಬಿಸಿಸಿಐನಲ್ಲಿ ಜಯ್ ಶಾ ದುರಾಡಳಿತ ಕ್ರಿಕೆಟ್ ಅನ್ನು ಈ ಸ್ಥಿತಿಗೆ ತಂದು ನಿಲ್ಲಿಸಿದೆ ಎನ್ನುವ ಟೀಕೆಗಳು ವ್ಯಕ್ತವಾಗಿವೆ. ಪ್ರಧಾನಿ ಮೋದಿ ಹಾಗೂ ಬಿಜೆಪಿಯವರು ಕ್ರೀಡೆಯಲ್ಲೂ ಹಸ್ತಕ್ಷೇಪ ಮಾಡಿದರೆ ಈ ರೀತಿಯ ಪರಿಣಾಮ ಉಂಟಾಗದಿರುತ್ತದಾ” ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣ 1,32,000ದಷ್ಟು ಆಸನದ ಸಾಮರ್ಥ್ಯವಿದ್ದರೂ ಕೇವಲ 3 ರಿಂದ 4 ಸಾವಿರ ಜನ ಭಾಗವಹಿಸಿದ್ದಾರೆ. ಅಂದರೆ ಕೇವಲ ಶೇ.3 ರಷ್ಟು ಮಂದಿ ಮಾತ್ರ ಎಂದು ‘ದಿ ಡೈಲಿ ಮೇಲ್’ ವರದಿ ಮಾಡಿದೆ.

ಇಷ್ಟು ದೊಡ್ಡ ಕ್ರೀಡಾಂಗಣದಲ್ಲಿ ಈ ಉದ್ಘಾಟನಾ ಪಂದ್ಯವನ್ನು ಆಯೋಜನೆ ಮಾಡಿ ಮುಜುಗರಕ್ಕೆ ಒಳಗಾಗುವ ಅಗತ್ಯವಿತ್ತಾ ಎನ್ನುವ ಪ್ರಶ್ನೆಗಳು ಈಗ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಎದ್ದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...