ಎಲ್ಲ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾ

Date:

ಟೀಂ ಇಂಡಿಯಾದ ಬ್ಯಾಟರ್‌ ಹಾಗೂ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 18 ವರ್ಷಗಳ ಸುದೀರ್ಘ ಕ್ರಿಕೆಟ್ ಬದುಕಿನಿಂದ ಸಾಹಾ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ 18 ವರ್ಷಗಳ ವೃತ್ತಿಜೀವನದಲ್ಲಿ ವೃದ್ಧಿಮಾನ್ ಸಾಹಾ 15 ವರ್ಷಗಳ ಕಾಲ ಬಂಗಾಳ ಪರವಾಗಿ ಮತ್ತು 2 ವರ್ಷಗಳ ಕಾಲ ತ್ರಿಪುರಾ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ. ಈ ವೇಳೆ 142 ಪಂದ್ಯಗಳನ್ನಾಡಿರುವ ಅವರು 14 ಶತಕಗಳೊಂದಿಗೆ ಒಟ್ಟು 7169 ರನ್ ಕಲೆಹಾಕಿದ್ದಾರೆ.

ಇನ್ನು 2010 ರಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ವೃದ್ಧಿಮಾನ್ ಸಾಹ 40 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ 56 ಇನಿಂಗ್ಸ್ ಆಡಿರುವ ಅವರು 3 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1353 ರನ್ ಪೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಭಾರತದ ಪರ 9 ಏಕದಿನ ಪಂದ್ಯಗಳಲ್ಲೂ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿರುವ ಸಾಹ ಕೇವಲ 41 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ 2014 ರ ಬಳಿಕ ಅವರಿಗೆ ಭಾರತ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಬುಮ್ರಾ ಭಾಜನ: ಮೊದಲ ಭಾರತೀಯ ಬೌಲರ್‌ ಎಂಬ ಹಿರಿಮೆ

ಇನ್ನು 2021ರವರೆಗೆ ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ವೃದ್ಧಿಮಾನ್ ಸಾಹ ಅತ್ಯುತ್ತಮ ವಿಕೆಟ್ ಕೀಪಿಂಗ್ ಮೂಲಕ ಗಮನ ಸೆಳೆದಿದ್ದರು. ಇದೀಗ ತಮ್ಮ 40ನೇ ವಯಸ್ಸಿನಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಸಹಾ ತಮ್ಮ ಕೊನೆಯ ಪಂದ್ಯದಲ್ಲಿ ವಿಶೇಷವಾದುದನ್ನು ಮಾಡಲು ಸಾಧ್ಯವಾಗಲಿಲ್ಲ. ಸಹಾಗೆ ಮೊದಲ ಇನಿಂಗ್ಸ್‌ನಲ್ಲಿ ಸಿಕ್ಸರ್ ಸಿಡಿಸಲು ಸಾಧ್ಯವಾಗಲಿಲ್ಲ. ಅಲ್ಲದೆ, ಪಂದ್ಯವನ್ನು ಇನಿಂಗ್ಸ್‌ನಿಂದ ಗೆದ್ದುಕೊಂಡ ಬಂಗಾಳಕ್ಕೆ ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವೂ ಸಿಗಲಿಲ್ಲ. ಬಂಗಾಳ ತಂಡ ಪಂಜಾಬ್ ತಂಡವನ್ನು 1 ಇನಿಂಗ್ಸ್ ಮತ್ತು 13 ರನ್‌ಗಳಿಂದ ಸೋಲಿಸಿತು.

“ಈಗ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುವ ಸಮಯ. ಕುಟುಂಬ ಮತ್ತು ಸ್ನೇಹಿತರಿಗೆ ನಮ್ಮನ್ನು ಮೀಸಲಿಡುವ ಸಮಯ. ಕ್ರಿಕೆಟ್‌ ಆಡುವ ಸಮಯದಲ್ಲಿ ಸಾಧ್ಯವಾಗದ ಆ ಕ್ಷಣಗಳನ್ನು ಬದುಕಲು ಮತ್ತು ಅನುಭವಿಸಲು ನಾನು ಬಯಸುತ್ತೇನೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...