ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತದ ಗೆಲುವಿಗೆ 444 ರನ್‌ಗಳ ಕಠಿಣ ಗುರಿ

Date:

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯದಲ್ಲಿ ಭಾರತ ಗೆಲುವಿಗೆ ಆಸ್ಟ್ರೇಲಿಯಾ, 444 ರನ್‌ಗಳ ಕಠಿಣ ಗುರಿಯನ್ನು ಮುಂದಿಟ್ಟಿದೆ.

ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶನಿವಾರ, 8 ವಿಕೆಟ್‌ ನಷ್ಟದಲ್ಲಿ 270 ರನ್‌ಗಳಿಸಿದ್ದ ವೇಳೆ ಆಸೀಸ್‌, ಇನ್ನಿಂಗ್ಸ್‌ ಡಿಕ್ಲೇರ್‌ ಘೋಷಿಸಿದೆ. ಇದರೊಂದಿಗೆ ಕಮ್ಮಿನ್ಸ್‌ ಪಡೆ ಒಟ್ಟು 443 ರನ್‌ಗಳ ಮುನ್ನಡೆ ಸಾಧಿಸಿದ್ದು, ಒಂದೂವರೆ ದಿನಗಳ ಆಟ ಇನ್ನೂ ಬಾಕಿಯಿದೆ. ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವನ್ನು ತಡೆಯಲು ಟೀಮ್‌ ಇಂಡಿಯಾ ಬ್ಯಾಟರ್‌ಗಳು ದೊಡ್ಡ ಸಾಹಸವನ್ನೇ ಮಾಡಬೇಕಾಗಿದೆ.   

4 ವಿಕೆಟ್ ನಷ್ಟದಲ್ಲಿ 123 ರನ್ ಗಳಿಂದ ಮೂರನೇ ದಿನದಾಟ ಆರಂಭಿಸಿದ್ದ ಆಸ್ಟ್ರೇಲಿಯಾ ತಂಡ, ಶನಿವಾರ, ಭೊಜನ ವಿರಾಮದ ವೇಳೆಗೆ 6 ವಿಕೆಟ್‌ ನಷ್ಟದಲ್ಲಿ 223 ರನ್‌ಗಳಿಸಿತ್ತು. ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ ಅರ್ಧ ಶತಕ (66*) ಗಳಿಸಿದರೆ, 57 ಎಸೆತಗಳನ್ನು ಎದುರಿಸಿದ ವೇಗಿ ಮಿಚೆಲ್‌ ಸ್ಟಾರ್ಕ್‌ 41 ರನ್‌ಗಳಿಸುವ ಮೂಲಕ ತಂಡದ ಲೀಡ್‌ ಹೆಚ್ಚಿಸಲು ನೆರವಾದರು. ಬಳಿಕ ಬಂದ ನಾಯಕ ಪ್ಯಾಟ್‌ ಕಮ್ಮಿನ್ಸ್‌ (5 ರನ್‌) ತಮ್ಮ ವಿಕೆಟ್‌ ನಷ್ಟವಾಗುತ್ತಲೇ ಇನ್ನಿಂಗ್ಸ್‌ ಡಿಕ್ಲೇರ್‌ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ರವೀಂದ್ರ ಜಡೇಜಾ 58 ರನ್‌ ನೀಡಿ ಮೂರು ವಿಕೆಟ್‌ ಪಡೆದರೆ,  ಉಮೇಶ್ ಯಾದವ್ ಮತ್ತು ಮುಹಮ್ಮದ್ ಸಿರಾಜ್ ತಲಾ ಎರಡು ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಗಳಿಸಿದ್ದ 469ರನ್‌ಗಳಿಗೆ ಉತ್ತರವಾಗಿ ಟೀಮ್‌ ಇಂಡಿಯಾ 296 ರನ್‌ಗಳಿಗೆ ಸರ್ವಪತನ ಕಂಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಸಂಪೂರ್ಣ ವೈಫಲ್ಯ ಕಂಡರೂ ಸಹ, ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯಾ ರಹಾನೆ (89), ರವೀಂದ್ರ ಜಡೇಜಾ (48) ಹಾಗೂ ಶಾರ್ದೂಲ್‌ ಠಾಕೂರ್‌ 51 ರನ್‌ ಗಳಿಸುವ ಮೂಲಕ ಫಾಲೋಅನ್‌ ತಪ್ಪಿಸುವಲ್ಲಿ ನೆರವಾಗಿದ್ದರು.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌

ಆಸ್ಟ್ರೇಲಿಯಾ; ಮೊದಲ ಇನ್ನಿಂಗ್ಸ್‌ 469. ದ್ವಿತೀಯ ಇನ್ನಿಂಗ್ಸ್‌ 270/8 ಡಿಕ್ಲೇರ್‌

ಭಾರತ; ಮೊದಲ ಇನ್ನಿಂಗ್ಸ್‌ 296

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...