ಟೆಸ್ಟ್‌ ಚಾಂಪಿ​ಯ​ನ್‌​ಶಿ​ಪ್‌ ಫೈನಲ್‌ | ಅಭ್ಯಾಸದ ವೇಳೆ ರೋಹಿತ್‌ ಶರ್ಮಾ ಕೈ ಬೆರಳಿಗೆ ಗಾಯ

Date:

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ರೋಹಿತ್‌ ಶರ್ಮಾ ಸಾರಥ್ಯದ ಟೀಮ್‌ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಬುಧವಾರದಿಂದ ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ಆರಂಭವಾಗುವ ʻಫೈನಲ್‌ ಪೈಟ್‌ʼನಲ್ಲಿ ಮುಖಾಮುಖಿಯಾಗಲಿವೆ.

ಡಬ್ಲ್ಯೂಟಿಸಿ ಫೈನಲ್‌ ಪಂದ್ಯ ಪ್ರಾರಂಭವಾಗಲು ಒಂದೇ ದಿನ ಬಾಕಿ ಉಳಿದಿದೆ. ಆದರೆ ಈ ವೇಳೆ ಅಭ್ಯಾಸದಲ್ಲಿ ತೊಡಗಿದ್ದ ನಾಯಕ ರೋಹಿತ್‌ ಶರ್ಮಾ ಕೈ ಬೆರಳಿಗೆ ಗಾಯವಾಗಿ ಮೈದಾನ ತೊರೆದಿದ್ದಾರೆ. ಇದು ಟೀಮ್‌ ಇಂಡಿಯಾ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಂಗಳವಾರ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ರೋಹಿತ್ ಶರ್ಮಾ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದೆ. ಕೂಡಲೇ ತಂಡದ ಫಿಸಿಯೋ ರೋಹಿತ್‌ ಅವರಿಗೆ ಚಿಕಿತ್ಸೆ ನೀಡಿದ್ದಾರೆ. ವಿಶ್ರಾಂತಿ ಪಡೆದ ಬಳಿಕ ನೆಟ್ಸ್‌ಗೆ ವಾಪಸ್ಸಾದ ರೋಹಿತ್‌ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಜೊತೆ ಕೆಲಕಾಲ ಚರ್ಚೆ ನಡೆಸಿದ ನಂತರ ಅಭ್ಯಾಸ ಮಾಡದೇ ಇರಲು ನಿರ್ಧಿರಿಸಿ ಮೈದಾನದಿಂದ ಹೊರನಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಹಿತ್ ಶರ್ಮಾ ಗಾಯವು ಗಂಭೀರವಾಗಿದೆಯೇ ಎಂಬುದರ ಕುರಿತು ಬಿಸಿಸಿಐ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಸೇರಿದಂತೆ ಪ್ರಮುಖ ಆಟಗಾರರು  ಇಂದಿನ ʻಐಚ್ಛಿಕ ಅಭ್ಯಾಸʼಕ್ಕೆ ಹಾಜರಾಗಿರಲಿಲ್ಲ.

ಗಾಯದ ಕಾರಣ ಪ್ರಮುಖರು ಗೈರು

ಸತತ ಎರಡನೇ ಬಾರಿಗೆ ಡಬ್ಲ್ಯೂಟಿಸಿ ಫೈನಲ್‌ ಪ್ರವೇಶಿಸಿರುವ ಭಾರತ, ಈ ಬಾರಿ ಬಲಿಷ್ಠ ಆಸ್ಟ್ರೇಲಿಯಾ ತಂಡದ ಸವಾಲನ್ನು ಎದುರಿಸಬೇಕಾಗಿದೆ. ಈಗಾಗಲೇ ಗಾಯದ ಸಮಸ್ಯೆ ಭಾರತ ತಂಡವನ್ನು ಕಾಡುತ್ತಿದೆ. ತಂಡದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಆರಂಭಿಕ ಬ್ಯಾಟರ್ ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಿಕೆಟ್‌ ಕೀಪರ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದಾಗಿ ಮಹತ್ವದ ಫೈನಲ್‌ ಪಂದ್ಯದಿಂದ ಹೊರಗುಳಿದಿದ್ದಾರೆ. ‌ಅತ್ತ ಆಸ್ಟ್ರೇಲಿಯಾ ತಂಡದ ಪ್ರಧಾನವೇಗಿ ಜೋಶ್ ಹೇಜಲ್‌ವುಡ್ ಸಹ ಗಾಯದ ಕಾರಣ ಫೈನಲ್ ಪಂದ್ಯದಿಂದ ಹೊರಗುಳಿದಿದ್ದಾರೆ.

WTC

2013ರ ಬಳಿಕ ಟೀಮ್‌ ಇಂಡಿಯಾ, ಐಸಿಸಿ ಆಯೋಜಿಸುವ ಯಾವುದೇ ಕೂಟದಲ್ಲೂ ಪ್ರಶಸ್ತಿ ಗೆದ್ದಿಲ್ಲ. 2021ರಲ್ಲಿ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪ್ರವೇಶಿಸಿತ್ತಾದರೂ ಸಹ,  ನ್ಯೂಜಿಲೆಂಡ್ ಯಂಡಕ್ಕೆ ಶರಣಾಗಿತ್ತು.

ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ಪ್ರತಿಷ್ಠಿತ ʻವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ʼ ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದೆ.

ಭಾರತ ತಂಡ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್‌, ಚೇತೇಶ್ವರ್‌ ಪೂಜಾರ, ವಿರಾಟ್‌ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್‌.ಭರತ್‌, ಆರ್‌.ಅಶ್ವಿನ್‌, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್‌, ಶಾರ್ದೂಲ್‌ ಠಾಕೂರ್‌, ಮುಹಮದ್‌ ಶಮಿ, ಮುಹಮದ್‌ ಸಿರಾಜ್‌, ಉಮೇಶ್‌ ಯಾದವ್‌, ಜಯದೇವ್‌ ಉನಾದ್ಕತ್‌, ಇಶಾನ್‌ ಕಿಶನ್‌.

ಮೀಸಲು ಆಟಗಾರರು: ಯಶಸ್ವಿ ಜೈಸ್ವಾಲ್‌, ಮುಕೇಶ್‌ ಕುಮಾರ್‌, ಸೂರ್ಯಕುಮಾರ್‌ ಯಾದವ್‌.

ಆಸ್ಟ್ರೇಲಿಯಾ ತಂಡ:

ಪ್ಯಾಟ್ ಕಮಿನ್ಸ್‌(ನಾಯಕ), ಡೇವಿಡ್ ವಾರ್ನರ್‌, ಉಸ್ಮಾನ್ ಖವಾಜ, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್‌, ಮಾರ್ನಸ್ ಲಬುಶೇನ್‌, ಸ್ಟೀವ್ ಸ್ಮಿತ್‌, ಟ್ರಾವಿಸ್ ಹೆಡ್‌, ಕ್ಯಾಮರೋನ್ ಗ್ರೀನ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕೇರ್ರಿ, ಜೋಶ್ ಇಂಗ್ಲಿಸ್‌, ಮಿಚೆಲ್ ಸ್ಟಾರ್ಕ್, ಸ್ಕಾಟ್‌ ಬೋಲೆಂಡ್‌, ನೇಥನ್ ಲಯನ್‌, ಟೋಡ್ ಮರ್ಫಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...