ದಾವಣಗೆರೆ | ಆಂಗ್ಲ ನಾಮಫಲಕಗಳ ತೆರವುಗೊಳಿಸಿ ಶೇ ೬೦ ಕನ್ನಡ ಬಳಸಿ: ಕರವೇ ರಾಮೇಗೌಡ ಎಚ್ಚರಿಕೆ

Date:

“ಡಿಸೆಂಬರ್ ೨೭ ರಂದು ಕಳೆದ ವರ್ಷ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ನೇತೃತ್ವದಲ್ಲಿ ಹೋರಾಟದ ನಡೆಸಿದ ಫಲವಾಗಿ ರಾಜ್ಯ ಸರ್ಕಾರ ೬೦ ಮತ್ತು ೪೦ ಅನುಪಾತದಲ್ಲಿ ಶೇಕಡ ೬೦ ರಷ್ಟು ಕನ್ನಡದಲ್ಲಿ ನಾಮಫಲಕಗಳನ್ನು ಹಾಕಬೇಕೆಂದು ಸರ್ಕಾರ ಆದೇಶ ಮಾಡಿದೆ. ಕೆಲವು ಕಾಲ ಆದೇಶ ಪಾಲಿಸುವಂತೆ ನಾಟಕ ಮಾಡಿದ ಕೆಲವು ಸಂಸ್ಥೆ, ವ್ಯಾಪಾರಿಗಳು ಮತ್ತು ಹೊಸ ಉದ್ದಿಮೆದಾರರು ಪುನಃ ಕನ್ನಡ ಕಡೆಗಣನೆ ಮಾಡಿ ಆಂಗ್ಲಫಲಕ ಹೆಚ್ಚಾಗಿ ಬಳಕೆ ಮಾಡಿದ್ದಾರೆ. ಮತ್ತೆ ತಲೆಯೆತ್ತಿದ ಆಂಗ್ಲ ನಾಮಫಲಕಗಳ ತೆರವುಗೊಳಿಸಿ, ಶೇ ೬೦ ಕನ್ನಡ ಬಳಸಬೇಕು. ಇಲ್ಲದಿದ್ದರೆ (ಕರವೇ) ಕರ್ನಾಟಕ ರಕ್ಷಣಾ ವೇದಿಕೆಯಿಂದಲೇ ನಾಮಫಲಕ ತೆರವು ಅಥವಾ ಕಿತ್ತು ಹಾಕುವ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ಎಚ್ಚರಿಸಿದರು.

1002741277

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಕರ್ನಾಟಕ ರಕ್ಷಣಾ ವೇದಿಕೆ ಹಲವಾರು ವರ್ಷಗಳಿಂದ ಆಂಗ್ಲ ನಾಮಫಲಕಗಳ ಮತ್ತು ಪರಭಾಷೆಗಳ ಫಲಕಗಳ ವಿರುದ್ಧ ಹೋರಾಟ ನಡೆಸುತ್ತಾ ಬಂದಿದೆ. ಇದರ ಜೊತೆಗೆ ಕಳೆದ ವರ್ಷ ನಡೆಸಿದ ಹೋರಾಟದಿಂದ ಸರ್ಕಾರ ಕನ್ನಡಪರ ಆದೇಶ ಹೊರಡಿಸಿದೆ. ಅದರಂತೆ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು ಆದೇಶ ನೀಡಿದ್ದರೂ ಸಹ ಕೆಲವು ಅಂಗಡಿಯ ನಾಮಫಲಕಗಳು, ಜಾಹೀರಾತು ಫಲಕಗಳು, ಬ್ಯಾಂಕು ಮತ್ತು ವಿಮಾ ಕಂಪನಿಗಳು ಆಂಗ್ಲ ನಾಮಫಲಕವನ್ನು ಹಾಕಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯು ಖಂಡಿಸುತ್ತದೆ” ಎಂದು ಕಿಡಿಕಾರಿದರು.

“ಮಹಾನಗರ ಪಾಲಿಕೆ ಆಯುಕ್ತರು ಕೂಡಲೇ ನಗರದಲ್ಲಿರುವ ಜಾಹೀರಾತು ಫಲಕಗಳು ಮತ್ತು ಅಂಗಡಿ, ಬ್ಯಾಂಕಿನ ನಾಮಫಲಕಗಳು ತೆರವುಗೊಳಿಸಿ ಶೇಕಡ ೬೦ ರಷ್ಟು ಕನ್ನಡದಲ್ಲಿ ನಾಮಫಲಕಗಳನ್ನು ಹಾಕಿಸಬೇಕು. ಇಲ್ಲವಾದರೆ ಶೀಘ್ರದಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ಅಂತಹ ನಾಮಫಲಕಗಳನ್ನು ಕಿತ್ತು ಹಾಕಲು ಹೋರಾಟ ಹಮ್ಮಿಕೊಳ್ಳಲಾಗುವುದು” ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002740016

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...