ಬೆಂಗಳೂರಿನ ಈ ಪ್ರದೇಶದಲ್ಲಿ ವಾರಕ್ಕೆ 2 ಗಂಟೆ ಮಾತ್ರ ನೀರು; ಹೇಳೋರಿಲ್ಲ-ಕೇಳೋರಿಲ್ಲ

Date:

ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಚಿಕ್ಕ ಬಾಣಸವಾಡಿಯ ಕೊಳಗೇರಿ ಪ್ರದೇಶಗಳಲ್ಲಿ ಈ ಹಿಂದೆ ಪ್ರತಿದಿನ 24 ಗಂಟೆಗಳ ಕಾಲ ನಿರಂತರ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈಗ ವಾರಕ್ಕೆ ಕೇವಲ ಎರಡು ಗಂಟೆ ನೀರು ಸಿಗುತ್ತಿದೆ. ಅಲ್ಲಿನ ನಿವಾಸಿಗಳಿಗೆ ನೀರು ಖರೀದಿಸುವ ಅನಿವಾರ್ಯತೆ ಎದುರಾಗಿದೆ. ಅವರು ದುಡಿಯುವ ಅರ್ಧದಷ್ಟು ಹಣವನ್ನು ಪ್ರತಿದಿನ ನೀರು ಖರೀದಿಸಲು ಖರ್ಚು ಮಾಡುವಂತಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ, ಯಾರಾದರೂ ನಾಯಕರು ಬಂದು ನಮ್ಮ ನೀರಿನ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವು. ಆದರೆ, ನಮ್ಮ ಮತದಾನದ ಹಕ್ಕು ಬೇರೆ ಪ್ರದೇಶದಲ್ಲಿ ಇರುವುದರಿಂದ, ನಮ್ಮನ್ನು ಇಲ್ಲಿ ಆದ್ಯತೆಯ ನಾಗರಿಕರೆಂದು ಪರಿಗಣಿಸಲಾಗುತ್ತಿಲ್ಲಎಂದು ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರೊಬ್ಬರು ಹೇಳಿದರು.

ಆರಂಭದಲ್ಲಿ ಕೆಲವು ಮಕ್ಕಳು ಶಾಲೆಗಳಿಗೆ ಹೋಗುತ್ತಿದ್ದರು. ಆದರೆ, ಈಗ ನಾವು ನಮ್ಮ ದೈನಂದಿನ ಕೆಲಸಗಳಲ್ಲಿ ನಮಗೆ ಸಹಾಯ ಮಾಡಲು, ನೀರನ್ನು ತರುವ ಕೆಲಸ ಮಾಡುತ್ತಿದ್ದಾರೆ. ನೀರಿನ ಗುಣಮಟ್ಟವನ್ನು ಲೆಕ್ಕಿಸದೆ ಕಡಿಮೆ ದುಡ್ಡಿಗೆ ನೀರು ಮಾರಾಟ ಮಾಡುವವರಿಂದ ನಾವು ನೀರನ್ನು ಖರೀದಿಸುತ್ತೇವೆಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿನಗಳಲ್ಲಿ ನನ್ನ ಆಟೋ ವಾಶ್ ವ್ಯಾಪಾರವು ಯಾವುದೇ ಆದಾಯವನ್ನು ಗಳಿಸುತ್ತಿಲ್ಲ. ಹಾಗಾಗಿ, ನನ್ನ ಮಕ್ಕಳ ಶಿಕ್ಷಣ ವೆಚ್ಚವನ್ನು ಭರಿಸಲು ನನಗೆ ಸಾಧ್ಯವಾಗುತ್ತಿಲ್ಲಎಂದು ಅವರು ಹೇಳಿದರು.

ಸುಮಾರು 40-50 ಜನರು ವಾಸಿಸುವ ಡಿಜೆ ಹಳ್ಳಿಯಲ್ಲಿ ವಾರಕ್ಕೆ ಎರಡು ಗಂಟೆ ನೀರು ಸಿಗುತ್ತದೆ. ಒಂದು ಗಂಟೆ ಕುಡಿಯುವ ನೀರಿಗಾಗಿ ಮೀಸಲಿಟ್ಟರೆ, ಇನ್ನೊಂದು ಗಂಟೆ ಪ್ರತ್ಯೇಕ ದಿನಗಳಲ್ಲಿ ಶುದ್ಧೀಕರಿಸಿದ ನೀರಿಗಾಗಿ ಮೀಸಲಿಡಲಾಗಿದೆ ಎನ್ನುತ್ತಾರೆ ಇಲ್ಲಿನ ನಿವಾಸಿ ರೇಷ್ಮಾ.

ನಾವು ನೆಲೆಸಿರುವ ಪ್ರದೇಶ ತುಂಬಾ ಕಿರಿದಾಗಿದೆ. ಹಾಗಾಗಿ, ನೀರಿನ ಟ್ಯಾಂಕರ್ಗಳನ್ನು ಒಳಗೆ ಬರಲು ಸಾಧ್ಯವಿಲ್ಲ. ಹೆಚ್ಚಿನ ಹಣವನ್ನು ನೀರು ಖರೀದಿ ಮಾಡಲು ಸಾಧ್ಯವಿಲ್ಲಎಂದು ಅವರು ಹೇಳಿದರು.

ಪ್ರದೇಶದಲ್ಲಿ ಬಹುತೇಕ ಮಂದಿ ಮಾಂಸದ ಅಂಗಡಿಗಳು, ಪೀಠೋಪಕರಣಗಳ ಅಂಗಡಿ ಹಾಗೂ ಬಣ್ಣದ ಹೊಡೆಯುವ ಕಾರ್ಮಿಕರು ನೆಲೆಸಿದ್ದಾರೆ. ವಲಸೆ ಕಾರ್ಮಿಕರು ತಮ್ಮ ಜೀವನೋಪಾಯಕ್ಕಾಗಿ ದೈನಂದಿನ ಆದಾಯವನ್ನು ಅವಲಂಬಿಸಿದ್ದಾರೆ. ಆಗಾಗ ನೀರು ಪೂರೈಕೆಯಲ್ಲಿ ಆಗುತ್ತಿರುವ ವಿಳಂಬದಿಂದ ನಿತ್ಯದ ದಿನಚರಿಗೆ ತೊಂದರೆಯಾಗುತ್ತಿದ್ದು, ಆದಾಯದ ಮೇಲೆ ನೇರ ಪರಿಣಾಮ ಬೀರುತ್ತಿದೆಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂಗಾರು ಮಳೆ ನಿರ್ವಹಣೆಗೆ ಸಜ್ಜಾಗುತ್ತಿರುವ ಪಾಲಿಕೆ; ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ನಿರತ

ಚಿಕ್ಕ ಬಾಣಸವಾಡಿಯ ನಿವಾಸಿ ರಮೇಶ್, “ನಮ್ಮ ಮನೆಗೆ ದಿನಕ್ಕೆ ಸುಮಾರು 20 ಬಿಂದಿಗೆ ನೀರು ಬೇಕಾಗುತ್ತದೆ. ಇದಕ್ಕೆ ಸಾಕಷ್ಟು ಹಣ ಖರ್ಚು ಮಾಡಬೇಕಾಗಿದೆ. ಸಮೀಪದ ಸಾರ್ವಜನಿಕ ಬೋರ್ವೆಲ್ ಕೂಡ ಬತ್ತಿ ಹೋಗಿದೆ. ಪರ್ಯಾಯ ವ್ಯವಸ್ಥೇ ಇಲ್ಲದ ಕಾರಣ ಕಳಪೆ ಗುಣಮಟ್ಟದ ನೀರು ಸಿಕ್ಕರೂ ಅದನ್ನು ಬಳಕೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ನೀರಿನ ಕೊರತೆಯ ಸಮಸ್ಯೆಯನ್ನು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರ ಗಮನಕ್ಕೆ ತಂದಾಗ, ಅವರು ಸಮಸ್ಯೆಯನ್ನು ತಳ್ಳಿಹಾಕಿದರು. ಈ ಕೊಳಗೇರಿ ಪ್ರದೇಶಗಳಿಂದ ಯಾವುದೇ ದೂರುಗಳು ಬಂದಿಲ್ಲ ಎಂದು ಹೇಳಿದರು.

ನೀರಿನ ಕೊರತೆ ಇರುವ ಪ್ರದೇಶಗಳನ್ನು ಗುರುತಿಸಲು ತಪಾಸಣೆ ಹಾಗೂ ಆಗಾಗ ಸಭೆಗಳನ್ನು ನಡೆಸಲಾಗುತ್ತಿದೆಎಂದು ಹೇಳಿದರು.

ಮೂಲ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...