ನೈರುತ್ಯ ರೈಲ್ವೆ ಆದಾಯದಲ್ಲಿ 10% ಹೆಚ್ಚಳ

Date:

“ನೈರುತ್ಯ ರೈಲ್ವೆ ಆದಾಯದಲ್ಲಿ ಅತ್ಯುತ್ತಮ ಬೆಳವಣಿಗೆಯನ್ನು ದಾಖಲಿಸಿದೆ. 2023ರ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ ಶೇ.10.44ರಷ್ಟು ಹೆಚ್ಚಳದೊಂದಿಗೆ ಬರೋಬ್ಬರಿ ₹4288.27 ಕೋಟಿ ಆದಾಯ ಗಳಿಸಿದೆ. ಕಳೆದ ವರ್ಷದ ಅವಧಿಯಲ್ಲಿ 3882.93 ಕೋಟಿ ರೂ. ಸಂಗ್ರಹವಾಗಿತ್ತು” ಎಂದು ರೈಲ್ವೆ ಇಲಾಖೆ ಹೇಳಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನೈರುತ್ಯ ರೈಲ್ವೆ ಇಲಾಖೆ, “ನೈರುತ್ಯ ರೈಲ್ವೆಯ ಮೂಲ ಪ್ರಯಾಣಿಕರ ಆದಾಯವು 2023ರ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ ₹1801.68 ಕೋಟಿ ಇದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.15.20ರಷ್ಟು ಹೆಚ್ಚಾಗಿದೆ” ಎಂದು ಮಾಹಿತಿ ನೀಡಿದೆ.

“ನೈರುತ್ಯ ರೈಲ್ವೆಯು 2023ರ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ 27.49 ಮೆಟ್ರಿಕ್ ಟನ್ ಸರಕುಗಳನ್ನು ಲೋಡ್ ಮಾಡುವ ಮೂಲಕ ಶೇ.11.66ರಷ್ಟು ಹೆಚ್ಚಳದೊಂದಿಗೆ 2741.40 ಕೋಟಿ ಮೂಲ ಸರಕು ಆದಾಯವನ್ನು ಗಳಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ₹2,455.14 ಕೋಟಿ ಗಳಿಸಿತ್ತು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಾಜಿ ಸಿಎಂ ಬೊಮ್ಮಾಯಿ ಸಂಬಂಧಿಯಿಂದ ಕಿದ್ವಾಯಿ ಸಂಸ್ಥೆಯಲ್ಲಿ ನೂರಾರು ಕೋಟಿ ಅಕ್ರಮ

“ವಿಭಾಗಗಳ ಬ್ಯುಸಿನೆಸ್ ಡೆವಲ್‌ಪ್‌ಮೆಂಟ್‌ ಯೂನಿಟ್ಸ್‌ಗಳ ಅವಿರತ ಪ್ರಯತ್ನ ಸಮರ್ಪಕವಾದ ಅಸೆಟ್ಸ್ ಮ್ಯಾನೇಜ್ಮೆಂಟ್ ವ್ಯವಸ್ಥೆಯ ಮೂಲಕ ಸಮಯೋಚಿತ ವ್ಯಾಗನ ಪೂರೈಕೆ ಹಾಗೂ ಕಾರ್ಯಾಚರಣೆ ಮತ್ತು ನಿರ್ವಹಣಾ ಸಿಬ್ಬಂದಿಯ ಅಪಾರ ಪ್ರಯತ್ನದ ಫಲವಾಗಿ ಸರಕು ಸಾಗಣೆಯಲ್ಲಿ ಬೆಳವಣಿಗೆ ಗಣಿನೀಯ ಪ್ರಗತಿ ಸಾಧ್ಯವಾಗಿದೆ. ನೈರುತ್ಯ ರೈಲ್ವೆ ಮಾರ್ಗಗಳ ದ್ವಿಪಥಿಕರಣ ಹಾಗೂ ವಿದ್ಯುದ್ದೀಕರಣವು ಸರಕು ರೈಲುಗಳ ಸಾಗಣೆ ಸಮಯವನ್ನು ಕಡಿಮೆ ಮಾಡಲು, ರೈಲುಗಳ ವರ್ಧಿತ ಚಲನಶೀಲತೆ ಮತ್ತು ವಿಶ್ವಾಸಾರ್ಹತೆಗೆ ಕಾರಣವಾಗಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...