ಕರ್ನಾಟಕದಲ್ಲಿ ₹3,920 ಕೋಟಿ ವೆಚ್ಚದ 127 ರೈಲ್ವೆ ಮೇಲ್ಸೇತುವೆ ಯೋಜನೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

Date:

ರೈಲ್ವೆ ಸಂಚಾರದ ಸುರಕ್ಷತೆ ಮತ್ತು ರಸ್ತೆಗಳ ಸುಗಮ ಸಂಚಾರದ ದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಒಟ್ಟು ₹3,920 ಕೋಟಿ ವೆಚ್ಚದಲ್ಲಿ 127 ರಸ್ತೆ ಮೇಲ್ಸೇತುವೆ ಹಾಗೂ ರಸ್ತೆ ಕೆಳ ಸೇತುವೆಗಳ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಈ ಕುರಿತು ಬಳ್ಳಾರಿ ಸಂಸದ ಇ. ತುಕಾರಾಂ ಅವರು ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದರು. ರಾಜ್ಯದಲ್ಲಿ ಮಂಜೂರಾಗಿರುವ ಒಟ್ಟು 127 ಕಾಮಗಾರಿಗಳ ಪೈಕಿ ಏಳು ಪ್ರಮುಖ ಯೋಜನೆಗಳು ಬಳ್ಳಾರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತವೆ ಎಂದು ಸಚಿವರು ಹೇಳಿದ್ದಾರೆ.

ದೇಶಾದ್ಯಂತ 2025ರ ನವೆಂಬರ್ 1ರವರೆಗೆ ₹1,11,583 ಕೋಟಿ ವೆಚ್ಚದಲ್ಲಿ ಒಟ್ಟು 4,689 ಮೇಲ್ಸೇತುವೆ ಮತ್ತು ಕೆಳಸೇತುವೆಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದಲ್ಲಿನ ಯೋಜನೆಗಳು ಪ್ರಸ್ತುತ ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಸಚಿವರು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಮಗಾರಿಗಳ ಪ್ರಗತಿಯ ವಿವರ
2014 ರಿಂದ 2025ರ ಅಕ್ಟೋಬರ್ ವರೆಗಿನ ಅವಧಿಯಲ್ಲಿ ದಾಖಲೆಯ 13,653 ಸೇತುವೆಗಳನ್ನು ನಿರ್ಮಿಸಲಾಗಿದ್ದು, ಇದರಲ್ಲಿ ಕರ್ನಾಟಕದ 703 ಕಾಮಗಾರಿಗಳು ಸೇರಿವೆ ಎಂದು ಅಂಕಿ-ಅಂಶ ನೀಡಿದರು.

ಬಳ್ಳಾರಿ ಕ್ಷೇತ್ರದ 7 ಪ್ರಮುಖ ಯೋಜನೆಗಳು:
ಸಂಸದ ತುಕಾರಾಂ ಅವರ ಕ್ಷೇತ್ರವಾದ ಬಳ್ಳಾರಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ವಿವರ ಈ ಕೆಳಗಿನಂತಿದೆ:

ಮೋತಿ ವೃತ್ತದ ಸೇತುವೆ (ಬಳ್ಳಾರಿ ಯಾರ್ಡ್): ಬಳ್ಳಾರಿ ಕಂಟೋನ್ಮೆಂಟ್ ಮತ್ತು ನಿಲ್ದಾಣಗಳ ನಡುವೆ ಇರುವ (ಸೇತುವೆ ಸಂಖ್ಯೆ 262A) ಮೇಲ್ಸೇತುವೆಯನ್ನು ಅಗಲೀಕರಣಗೊಳಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಇದಕ್ಕೆ ಸಂಬಂಧಿಸಿದ ಪರಿಕಲ್ಪನಾ ಯೋಜನೆಯನ್ನು ರೈಲ್ವೆ ಪರಿಶೀಲಿಸಿದ್ದು, ಅಂದಾಜು ಶುಲ್ಕ ಭರಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ. ಸರ್ಕಾರದ ಪ್ರತಿಕ್ರಿಯೆಗೆ ಕಾಯಲಾಗುತ್ತಿದೆ.

ಹಗರಿಬೊಮ್ಮನಹಳ್ಳಿ: ಇಲ್ಲಿನ ಎಲ್‌ಸಿ ಸಂಖ್ಯೆ 37 ರ ಬದಲಿಗೆ ₹45.24 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ವಿನ್ಯಾಸ (GAD) ಸಿದ್ಧಪಡಿಸಲಾಗುತ್ತಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವರ್ತಮಾನದ ತಲ್ಲಣಗಳಿಗೆ ನಾರಾಯಣ ಗುರು – ಗಾಂಧಿಯೇ ಉತ್ತರ

ತೋರಣಗಲ್ಲು- ರಣಜಿತ್‌ಪುರ: ಜೋಡಿಮಾರ್ಗ ಯೋಜನೆಯ ಭಾಗವಾಗಿ ಬನ್ನಿಹಟ್ಟಿ ಬಳಿ ಮೇಲ್ಸೇತುವೆ ಮಂಜೂರಾಗಿದೆ.

ಪಾಪಿನಾಯಕನ ಹಳ್ಳಿ: ಇಲ್ಲಿನ ಎಲ್‌ಸಿ ನಂ. 90ರ ಬದಲಿಗೆ ಮೇಲ್ಸೇತುವೆ ನಿರ್ಮಿಸಲು ಸಮಗ್ರ ಯೋಜನಾ ವರದಿ (DPR) ಸಿದ್ಧಪಡಿಸುವ ಕಾರ್ಯ ಆರಂಭವಾಗಿದೆ.

ಹೊಸಪೇಟೆ- ವ್ಯಾಸ ಕಾಲೋನಿ: ಎಲ್‌ಸಿ ಸಂಖ್ಯೆ 5ರ ಬದಲಿಗೆ ಮೇಲ್ಸೇತುವೆ ನಿರ್ಮಾಣ ತಾಂತ್ರಿಕವಾಗಿ ಸಾಧ್ಯವೆಂದು ವರದಿ ಬಂದಿದ್ದು, ರಾಜ್ಯ ಸರ್ಕಾರದೊಂದಿಗೆ ಜಂಟಿ ಪರಿಶೀಲನೆ ನಡೆಸಲಾಗಿದೆ. ಇದೇ ಮಾರ್ಗದ ಎಲ್‌ಸಿ ಸಂಖ್ಯೆ 10 ರ ಕಾಮಗಾರಿಗೆ ವರದಿ ಸಿದ್ಧವಾಗುತ್ತಿದೆ.

ವ್ಯಾಸ ಕಾಲೋನಿ- ಸ್ವಾಮಿಹಳ್ಳಿ: ಇಲ್ಲಿನ ಸೇತುವೆ ಸಂಖ್ಯೆ 39 ಜಲಮಾರ್ಗ ಸೇತುವೆಯಾಗಿದ್ದು, ನೀರಿನ ಹರಿವಿಗೆ ಸಾಕಾಗುವಷ್ಟು ಅಗಲವಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ತ್ವರಿತಗತಿಯಲ್ಲಿ ಕಾಮಗಾರಿ

ಯೋಜನೆಗಳ ವಿಳಂಬ ತಪ್ಪಿಸಲು ರೈಲ್ವೆ ಇಲಾಖೆ ಹೊಸ ಕ್ರಮಗಳನ್ನು ಕೈಗೊಂಡಿದೆ. ವಿನ್ಯಾಸ ಅನುಮೋದನೆಯ ಸಮಯ ಉಳಿಸಲು ಪ್ರಮಾಣೀಕೃತ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೆ, ರಾಜ್ಯ ಸರ್ಕಾರಗಳು ಒಪ್ಪಿದರೆ ಭೂಸ್ವಾಧೀನ ಮತ್ತು ನಿರ್ಮಾಣ ಎರಡನ್ನೂ ಒಂದೇ ಏಜೆನ್ಸಿಯ ಮೂಲಕ ನಿರ್ವಹಿಸಿ ಕಾಮಗಾರಿ ವೇಗಗೊಳಿಸಲು ರೈಲ್ವೆ ಸಿದ್ಧವಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...