18,177.44 ಕೋಟಿ ರೂ. ಪರಿಹಾರ ಬಿಡುಗಡೆಗೆ ಮೋದಿ ಅವರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ಚರ್ಚಿಸಿದರು.

ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮೋದಿ ಅವರಲ್ಲಿ ಸಿದ್ದರಾಮಯ್ಯ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

“ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.

“ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ” ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಕೋರಿದ್ದಾರೆ.

ಸಿದ್ದರಾಮಯ್ಯ ಅವರ ಜೊತೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...