ಚಿಕ್ಕಬಳ್ಳಾಪುರ | 3 ಕೋಟಿ ಮೌಲ್ಯದ ಮೊಬೈಲ್‌ಗಳ ಕಳವು; 7 ಜನ ಆರೋಪಿಗಳ ಬಂಧನ

Date:

ಸುಮಾರು 3 ಕೋಟಿ ಮೌಲ್ಯದ ಮೊಬೈಲ್‌ ಫೋನ್‌ಗಳನ್ನು ನೋಯ್ಡಾದಿಂದ ಬೆಂಗಳೂರಿಗೆ ಕಂಟೇನರ್‌ ಮೂಲಕ ತಂದಿದ್ದ ಲಾರಿಯನ್ನು ನಡುರಸ್ತೆಯಲ್ಲೇ ಬಿಟ್ಟು, ಅದರಲ್ಲಿದ್ದ ಮೊಬೈಲ್‌ ಫೋನ್‌ಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕ ಮತ್ತು ಇತರೆ 6 ಮಂದಿ ಆರೋಪಿಗಳನ್ನು ಸೆನ್‌ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹರಿಯಾಣ ಮೂಲದ ರಾಹುಲ್‌ ಅಲಿ, ಇಮ್ರಾನ್‌, ಮೊಹಮದ್‌ ಮುಸ್ತಾಫ ಅಲಿಯಾಸ್‌ ಭುರ್ರ, ಅನೂಪ್‌ ರಾಯ್‌, ಅಭಿಜಿತ್‌ ಪೌಲ್‌, ಸಕೃಲ್ಲಾ, ಯೂಸಫ್‌ ಖಾನ್‌ ಬಂಧಿತ ಆರೋಪಿಗಳು.

IMG 20250428 WA0007 1

ಘಟನೆ ಹಿನ್ನೆಲೆ : 2024ರ ನವೆಂವರ್‌ 22ರಂದು ನೋಯ್ಡಾದಿಂದ ಬೆಂಗಳೂರಿಗೆ ಕಂಟೇನರ್‌ ವಾಹನದಲ್ಲಿ ಸೇಫ್‌ ಸೀಡ್‌ ಕ್ಯಾರಿಯರ್ಸ್‌ ಪ್ರೈ.ಲಿ ಮಾಲೀಕರು ರೆಡ್ಮಿ ಮೊಬೈಲ್ 170 ಬಾಕ್ಸ್‌ಗಳು(3400 ಮೊಬೈಲ್‌ ಫೋನ್)‌, ಪೊಕೊ ಮೊಬೈಲ್‌ 163 ಬಾಕ್ಸ್‌ಗಳನ್ನು(3260 ಮೊಬೈಲ್‌ ಫೋನ್‌ಗಳು) ತಂದಿದ್ದು, ಕಂಟೇನರ್‌ ಲಾರಿ ಚಾಲಕ ಹಾಗೂ ಆತನ ಸಹಚರರು ಕಂಟೇನರ್‌ನಲ್ಲಿದ್ದ ಮೊಬೈಲ್‌ ಫೋನ್‌ಗಳನ್ನು ಕಳವು ಮಾಡಿಕೊಂಡು ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿ ಗೊಲ್ಲರಹಳ್ಳಿ ಗ್ರಾಮದ ಬಳಿಯ ಹೆಚ್‌ಪಿ ಡಾಬಾ ಬಳಿ ಕಂಟೇನರ್‌ ವಾಹನವನ್ನು ಬಿಟ್ಟು ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಸೇಫ್‌ ಸೇಡ್‌ ಕ್ಯಾರಿಯರ್ಸ್‌ ಪ್ರೈ.ಲಿ ಮಾಲೀಕರು ಪೆರೇಸಂದ್ರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೂಡಲೇ ಎಚ್ಚೆತ್ತ ಇನ್ಸ್ಪೆಕ್ಟರ್‌ ನಯಾಜ್‌ ಅವರು ಪ್ರಕರಣದ ಎ1 ಆರೋಪಿ ರಾಹುಲ್‌ ಎಂಬಾತನನ್ನು ಬಂಧಿಸಿದ್ದರು. ಬಳಿಕ ಜನವರಿಯಲ್ಲಿ ಕೇಸನ್ನು ಚಿಕ್ಕಬಳ್ಳಾಪುರ ಸೆನ್‌ ಠಾಣೆಗೆ ವರ್ಗಾಯಿಸಲಾಗಿತ್ತು. ತನಿಖೆ ಮುಂದುವರಿಸಿದ ಸೆನ್‌ ಠಾಣೆ ರವಿಕುಮಾರ್‌ ಹಾಗೂ ಸೂರ್ಯ ಪ್ರಕಾಶ್‌ ಉಳಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಒಟ್ಟು 56 ಮೊಬೈಲ್‌ಗಳು ಹಾಗೂ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಕಳವು ಮಾಡಿರುವ ಮೊಬೈಲ್‌ಗಳನ್ನು ದೇಶದ ಎಲ್ಲಾ ರಾಜ್ಯಗಳಿಗೂ ಬಿಡಿ ಬಿಡಿಯಾಗಿ ಮಾರಾಟ ಮಾಡಿದ್ದು, ಒಟ್ಟು 4084 ಮೊಬೈಲ್‌ಗಳ ಐಎಂಇಐ ನಂಬರ್‌ಗಳನ್ನು ಡಿಒಟಿ ಮೂಲಕ ಬ್ಲಾಕ್‌ ಮಾಡಲಾಗಿದೆ ಎಂದು ಎಸ್ಪಿ ಕುಶಾಲ್‌ ಚೌಕ್ಸೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...