ಬೆಂಗಳೂರು | 446 ಅಕ್ರಮ ಒಳಚರಂಡಿ ಸಂಪರ್ಕ ಗುರುತಿಸಿದ ಬಿಡಬ್ಲೂಎಸ್‌ಎಸ್‌ಬಿ

Date:

ಕೇವಲ ಒಂದು ವಾರದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲುಎಸ್‌ಎಸ್‌ಬಿ) ಬೆಂಗಳೂರಿನಲ್ಲಿ 446 ಅಕ್ರಮ ಒಳಚರಂಡಿ ಸಂಪರ್ಕಗಳನ್ನು ಗುರುತಿಸಿದೆ.

ಕಳೆದ ವಾರದಿಂದ ಸುಮಾರು 528 ಮನೆಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಪರಿಶೀಲಿಸಿದ ಅಧಿಕಾರಿಗಳು, 446 ಕಟ್ಟಡಗಳು ಬಿಡಬ್ಲೂಎಸ್‌ಎಸ್‌ಬಿ ನಿರ್ವಹಿಸುತ್ತಿರುವ ಚರಂಡಿಗಳಿಗೆ ಅಕ್ರಮವಾಗಿ ಕೊಳಚೆ ನೀರನ್ನು ಬಿಡುತ್ತಿರುವುದು ಕಂಡುಹಿಡಿದಿದ್ದಾರೆ. ಈ ಪೈಕಿ, 221 ಸಂಪರ್ಕಗಳನ್ನು ಅಧಿಕಾರಿಗಳು ನಿಗದಿತ ಶುಲ್ಕ ವಸೂಲಿ ಮಾಡಿ ಸಕ್ರಮಗೊಳಿಸಿದ್ದಾರೆ. ಉಳಿದ 390 ಗ್ರಾಹಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ಮಾತನಾಡಿ, “ಅಗತ್ಯ ಅನುಮತಿ ಪಡೆಯದೆ ಬಿಡಬ್ಲೂಎಸ್‌ಎಸ್‌ಬಿಯ ಲೈನ್‌ಗಳಿಗೆ ಕೊಳಚೆ ನೀರನ್ನು ಬಿಡುವುದು ಆರೋಗ್ಯದ ಅಪಾಯಗಳಿಗೆ ಕಾರಣವಾಗಬಹುದು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಅಕ್ರಮ ಸಂಪರ್ಕಗಳು ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತವೆ. ರೋಗಗಳು ಹರಡುವುದನ್ನು ತಡೆಗಟ್ಟುವುದು ಮತ್ತು ನಗರದಲ್ಲಿ ಸ್ವಚ್ಛತೆ ಕಾಪಾಡುವುದು ನಮ್ಮ ಸಮೀಕ್ಷೆಯ ಉದ್ದೇಶವಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟ್ಯಾನರಿ ರಸ್ತೆಯಲ್ಲಿ ಹೊಸ ಕೆಳಸೇತುವೆ ನಿರ್ಮಾಣ: ಟ್ರಾಫಿಕ್ ಸಮಸ್ಯೆಗೆ ಕಡಿವಾಣ

ಇಂತಹ ಅಕ್ರಮ ಸಂಪರ್ಕಗಳನ್ನು ಗುರುತಿಸಲು ಸಮೀಕ್ಷೆ ನಡೆಸುವಂತೆ ಈ ತಿಂಗಳ ಆರಂಭದಲ್ಲಿ ಮಂಡಳಿ ಅಧ್ಯಕ್ಷರು ತಮ್ಮ ಅಧಿಕಾರಿಗಳಿಗೆ ಸೂಚಿಸಿದ್ದರು. ಈಗ, ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಸಾಧ್ಯವಾದಷ್ಟು ಸಂಪರ್ಕಗಳನ್ನು ಕ್ರಮಬದ್ಧಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬಿಡಬ್ಲೂಎಸ್‌ಎಸ್‌ಬಿ ಗ್ರಾಹಕರು ತಮ್ಮ ಅಕ್ರಮ ಒಳಚರಂಡಿ ಸಂಪರ್ಕಗಳನ್ನು ಸಕ್ರಮಗೊಳಿಸಲು ಮೇ 7 ರವರೆಗೆ ಕಾಲಾವಕಾಶವನ್ನು ನೀಡಿದೆ. ಇದರ ನಂತರ, ಬಿಡಬ್ಲೂಎಸ್‌ಎಸ್‌ಬಿ ನೋಟಿಸ್‌ಗಳನ್ನು ನೀಡುತ್ತದೆ. ಈ ಕ್ರಮವನ್ನು ಅನುಸರಿಸಲು ವಿಫಲವಾದ ಗ್ರಾಹಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದು ಮಂಡಳಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...