ಬೆಳಗಾವಿ | ʼಗೃಹಲಕ್ಷ್ಮಿʼ ಯೋಜನೆ ಹಣ ಕೂಡಿಟ್ಟು ಎತ್ತು ಖರೀದಿಸಿದ ರೈತ ಮಹಿಳೆ

Date:

ಬೆಳಗಾವಿ ಜಿಲ್ಲೆಯ ಬಡ ರೈತ ಕುಟುಂಬವೊಂದು ಕೃಷಿ ಚಟುವಟಿಕೆಗೆ ಅನುಕೂಲವಾಗಲಿ ಎಂದು ಗೃಹಲಕ್ಷ್ಮೀ ಹಣ ಕೂಡಿಟ್ಟು ಎತ್ತು ಖರೀದಿಸಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತವಗ ಗ್ರಾಮದ ಬಸವ್ವ ಶಿವಪ್ಪ ಬುಳ್ಳಿ ದಂಪತಿ ಎತ್ತು ಖರೀದಿಸಿದ್ದಾರೆ. 22 ಸಾವಿರ ರೂ. ಹಣದಿಂದ ಒಂದು ಎತ್ತನ್ನು ಖರೀದಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮೀ ಹಣವನ್ನು ಜನರು ನಾನಾ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿವೆ. ಇತ್ತೀಚೆಗೆ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಖರೀದಿಸಿದ್ದು, ಮಹಿಳೆಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿದ ಬಗ್ಗೆ ಸುದ್ದಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಬಸವ್ವ ಅವರ ಮನೆಯಲ್ಲಿ ಒಂದೇ ಎತ್ತು ಇತ್ತು. ಇದರಿಂದ ಕೃಷಿ ಚಟುವಟಿಕೆಗೆ ಸಮಸ್ಯೆಯಾಗಿತ್ತು. ಮತ್ತೊಂದು ಎತ್ತು ಖರೀದಿಸಬೇಕು ಎಂದರೆ ಹಣದ ಅಭಾವವಿತ್ತು. ಹಾಗಾಗಿ, 11 ತಿಂಗಳ ಗೃಹಲಕ್ಷ್ಮೀ ಹಣವನ್ನು ಸೇರಿಸಿದ ಬಸವ್ವ ಒಂದು ಎತ್ತು ಖರೀದಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ

ಮಕ್ಕಳಿಲ್ಲದ ಬಸವ್ವ, ಶಿವಪ್ಪ ದಂಪತಿ ಎತ್ತುಗಳನ್ನೇ ಮಕ್ಕಳಂತೆ ಸಾಕುತ್ತಿದ್ದಾರೆ. ಬಸವ್ವ ಮನೆಗೆ ಗೋಕಾಕ್ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಮಹಾಂತೇಶ್ ಕಡಾಡಿ ಭೇಟಿ ನೀಡಿ, ದಂಪತಿಗೆ ವೈಯಕ್ತಿಕವಾಗಿ ನೆರವು ನೀಡಿದರು. ಬೇಸಾಯವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ದಂಪತಿಗೆ ಅನುಕೂಲವಾಗಿದೆ. ಯೋಜನೆ ಜಾರಿಗೊಳಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಬಸವ್ವ ಕೃತಜ್ಞತೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...