ಮಳೆ ನೀರು ಒಳಚರಂಡಿಗೆ ಹರಿಬಿಡುತ್ತಿರುವ ಜನರ ವಿರುದ್ಧ ಕ್ರಮ; ಜಲಮಂಡಳಿ ಅಧ್ಯಕ್ಷ

Date:

ಮಳೆ ನೀರು ಕೋಯ್ಲು ಪದ್ದತಿಯ ಅಳವಡಿಕೆಯ ಮೂಲಕ ಆ ನೀರಿನ ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಆದರೆ, ಹಲವಾರು ಕಡೆಗಳಲ್ಲಿ ಈ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವ ಮೂಲಕ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಲಾಗುತ್ತಿದೆ. ಮಳೆ ನೀರು ಇಂಗಿಸುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಹರಿಯಬಿಡುತ್ತಿರುವ ಜನರ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ವಿ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೇ 27ರಂದು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿದ ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌, “ಬೆಂಗಳೂರಿನಲ್ಲಿ ಬೀಳುವ ಮಳೆಯನ್ನ ಸಮರ್ಪಕವಾಗಿ ಬಳಕೆ ಮಾಡುವುದರಿಂದ ನಗರದ ಅಂತರ್ಜಲ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸಬಹುದಾಗಿದೆ. ಕೆಲವಡೆ ಮಳೆ ನೀರು ಕೊಯ್ಲು ಪದ್ದತಿಯ ಮೂಲಕ ಸಂಗ್ರಹಿಸಲಾದ ನೀರನ್ನು ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ” ಎಂದರು.

“ಇದರಿಂದ ಮಳೆ ನೀರು ಒಳಚರಂಡಿಗೆ ಸೇರ್ಪಡೆಗೊಂಡು ಪೋಲಾಗುವುದಲ್ಲದೇ, ಒಳಚರಂಡಿ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ. ಇದನ್ನ ತಡೆಗಟ್ಟುವುದು ಹಾಗೂ ಜನರು ಮಳೆ ನೀರನ್ನು ಸಮರ್ಪಕವಾಗಿ ಹಿಡಿದು ಅದನ್ನು ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ದೇಶಿಸಿದ್ದರು. ಈ ಹಿನ್ನಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೇವಾ ಕೇಂದ್ರಗಳ ವ್ಯಾಪ್ತಿಯಲ್ಲಿ ನೇರವಾಗಿ ಒಳಚರಂಡಿಗೆ ಮಳೆ ನೀರನ್ನು ಹರಿಸುತ್ತಿರುವ ಬಗ್ಗೆ ಸರ್ವೆ ಮಾಡಬೇಕು. ನೇರವಾಗಿ ಒಳಚರಂಡಿಗೆ ಸೇರುತ್ತಿರುವ ನೀರನ್ನ ತಡೆಗಟ್ಟಬೇಕು ಹಾಗೂ ಹೀಗೆ ಮಾಡುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.

“ಮಳೆ ನೀರು ಕೋಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳಲು ಸಾಧ್ಯವಿರುವ ಆದರೆ ಇದುವರೆಗೂ ಅಳವಡಿಸಿಕೊಳ್ಳದೇ ಇರುವಂತಹ ಕಟ್ಟಡಗಳ ಜಲಮಂಡಳಿಯ ವತಿಯಿಂದ ಬಗ್ಗೆ ಸಮೀಕ್ಷೆಯನ್ನು ನಡೆಸಲಾಗುವುದು. ಈ ಮೂಲಕ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳದೇ ಇರುವ ಹಾಗೂ ಅಳವಡಿಸಿಕೊಳ್ಳುವ ಮೂಲಕ ಆಗುತ್ತಿರುವ ಅನುಕೂಲತೆಗಳ ಬಗ್ಗೆ ಮಾಹಿತಿಯನ್ನು ಕ್ರೋಡೀಕರಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾಲ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸೂಚನೆ ನೀಡಿದ ಡಿಸಿಎಂ

“ನಗರದಲ್ಲಿ ಬೀಳುತ್ತಿರುವ ಮಳೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡುವ ಮೂಲಕ ನಗರದ ನೀರಿನ ಅಭಾವವನ್ನು ನಿರ್ವಹಿಸಲು ಸಾಧ್ಯವಿದೆ. ಈ ಬಗ್ಗೆ ಉಪಮುಖ್ಯಮಂತ್ರಿಗಳು ನೀಡಿರುವ ನಿರ್ದೇಶನದಂತೆ ಮುಂಜಾಗ್ರತಾ ಕ್ರಮಗಳಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ನೀರಿನ ಕೊರತೆಯನ್ನು ನಿರ್ವಹಿಸಿದ ರೀತಿಯಲ್ಲಿಯೇ ಮಳೆಗಾಲವನ್ನು ನಿರ್ವಹಿಸಲು ಇದು ಬಹಳ ಮುಖ್ಯ ಕ್ರಮವಾಗಿದೆ” ಎಂದು ಜಲಮಂಡಳಿ ಅಧ್ಯಕ್ಷ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...