ನಟ ದರ್ಶನ್ ಬಂಧನ | ವಿಚಾರಣೆ ಬಳಿಕ ಮುಂದಿನ ಕ್ರಮ; ಪೊಲೀಸ್ ಆಯುಕ್ತ ಬಿ. ದಯಾನಂದ್

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, “ಸದ್ಯ ದರ್ಶನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಜೂನ್ 9 ರಂದು (ಭಾನುವಾರ) ಕಾಮಾಕ್ಷಿಪಾಳ್ಯದಲ್ಲಿ ಅಪರಿಚಿತ ಶವವೊಂದು ಸಿಕ್ಕಿತ್ತು. ಮೃತದೇಹದ ಮೇಲೆ ಗಾಯಗಳು ಇದ್ದವು. ಇದನ್ನು ಗಮನಿಸಿ ಕಾಮಾಕ್ಷಿಪಾಳ್ಯದ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಇತರ ತಾಂತ್ರಿಕ ಆಧಾರದ ಮೇಲೆ ಕೆಲವರನ್ನು ಬಂಧಿಸಲಾಯಿತು. ನಂತರ ಅವರ ವಿಚಾರಣೆ ಬಳಿಕ ಇದು ಚಿತ್ರದುರ್ಗದ ರೇಣುಕಾಸ್ವಾಮಿ ಎಂದು ತಿಳಿದು ಬಂದಿದೆ. ಇದರ ಹಿಂದೆ ಚಿತ್ರ ನಟ ದರ್ಶನ್ ಇರುವುದು ತಿಳಿದು ಬಂದಿದೆ. ಈ ಹಿನ್ನೆಲೆ, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೂನ್ 9ರಂದು ಕೊಲೆಯಾಗಿದೆ. ರೇಣುಕಾ ಸ್ವಾಮಿ ದರ್ಶನ್ ಅವರ ಪತ್ನಿಗೆ ಅವಾಚ್ಯ ಸಂದೇಶಗಳನ್ನು ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನ ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಬಂಧಿತ ಆರೋಪಿಗಳಿಂದ ವಿಚಾರಣೆ ನಡೆಸಲಾಗುತ್ತಿದೆ. ನಂತರ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ರೇಣುಕಾಸ್ವಾಮಿಗೆ 33 ವರ್ಷ. ಹೆಚ್ಚಿನ ತನಿಖೆ ನಡೆದ ಬಳಿಕವಷ್ಟೇ ನಾವು ಹೆಚ್ಚಿನ ಮಾಹಿತಿ ನೀಡಲು ಸಾಧ್ಯ” ಎಂದು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಬೆಳಗ್ಗೆ 8.30ಕ್ಕೆ ಬೆಂಗಳೂರು ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ನಟ ದರ್ಶನ್ ಅವರನ್ನು ಮೈಸೂರಿನ ರ್ಯಾಡಿಸನ್ ಹೋಟೆಲ್​ನಲ್ಲಿ ಬಂಧಿಸಲಾಗಿದೆ. ದರ್ಶನ್ ಬಂಧನದ ಬೆನ್ನಲ್ಲೇ ಆರ್.ಆರ್‌.ನಗರದಲ್ಲಿ ದರ್ಶನ್ ಆಪ್ತೆ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಕೊಲೆ ಪ್ರಕರಣ; ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಮೃತ ವ್ಯಕ್ತಿ ರೇಣುಕಾಸ್ವಾಮಿ ಮೂಲತಃ ಚಿತ್ರದುರ್ಗದವನು. ಈತ ಬೆಸ್ಕಾಂ ನಿವೃತ್ತ ನೌಕರನ ಮಗ. ಅಪೋಲೋ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದನು. ಈತ ಕೂಡ ನಟ ದರ್ಶನ್ ಅಭಿಮಾನಿ.

ಈತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ರಾಘವೇಂದ್ರ, ವಿನಯ್ ಎಂಬುವವರನ್ನು ಸಹ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...