ಮೈಸೂರಿನ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ

Date:

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದೊಡ್ಡ ಬಹುಮತದೊಂದಿಗೆ ಜಯಭೇರಿ ಸಾಧಿಸಿದ ಬೆನ್ನಲ್ಲೇ ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಮ್ಮ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಅಡ್ಡಂಡ ಕಾರ್ಯಪ್ಪ ಮೈಸೂರಿನ ರಂಗಾಯಣದ ನಿರ್ದೇಶಕರಾದ ಮೇಲೆ ಸದಾ ಒಂದಿಲ್ಲ ಒಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಲೇ ಬಂದಿದ್ದರು. ವಿಶೇಷವಾಗಿ ಕಾಂಗ್ರೆಸ್‌ ಮತ್ತು ಒಂದು ಕೋಮು ವಿರುದ್ಧ ವಿವಾದಗಳನ್ನು ಸೃಷ್ಟಿಸಿದ್ದರು.

‘ಟಿಪ್ಪು ನಿಜಕನಸುಗಳುʼ ನಾಟಕ ರಚಿಸಿ ಒಂದು ಕೋಮುವನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿ ವಿವಾದ ಸೃಷ್ಟಿಸಿದ್ದರು. ನಂತರ ‘ಸಿದ್ದರಾಮಯ್ಯ ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಮುಂದಾದಾಗ ತೀವ್ರ ಟೀಕೆಗೆ ಗುರಿಯಾಗಿದ್ದರು. ಚುನಾವಣೆ ಮುನ್ನ ಉರಿಗೌಡ ಮತ್ತು ನಂಜೇಗೌಡ ಪಾತ್ರಗಳನ್ನು ಹರಿಯಬಿಟ್ಟು ಒಕ್ಕಲಿಗ ಮತ್ತು ಮುಸ್ಲಿಂರನ್ನು ಎತ್ತಿಕಟ್ಟುವ ಪ್ರಯತ್ನಕ್ಕೆ ಕೈಹಾಕಿರುವ ಆರೋಪ ಎದುರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಕ್ಕಲಿಗ ಸಮುದಾಯದ ನಿರ್ಮಲಾನಂದನಾಥ ಸ್ವಾಮೀಜಿ ಸುದ್ದಿಗೋಷ್ಠಿ ನಡೆಸಿ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಮೇಲೆ ಸ್ವಾಮೀಜಿ ಅವರ ಕ್ಷಮೆ ಕೋರಿದ್ದರು.

ಇತ್ತೀಚೆಗೆ ಮಡಿಕೇರಿಯಲ್ಲಿ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡಿದ ಆರೋಪದ ಮೇರೆಗೆ ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿತ್ತು.

ಅದಕ್ಕೂ ಮುನ್ನ ಟಿ ಶೆಟ್ಟಿಗೇರಿ ಗ್ರಾಮದಲ್ಲಿ ಮೇ 4ರಂದು ಬಿಜೆಪಿ ಪ್ರಚಾರ ಸಭೆಯಲ್ಲಿ ಕಾರ್ಯಪ್ಪ ಅವರು ಕೊಡವ ಮತ್ತು ಕನ್ನಡ ಭಾಷೆಯಲ್ಲಿ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕದಡಿ, ಶತ್ರುತ್ವ ಉಂಟು ಮಾಡುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡುವ ಮಾತುಗಳನ್ನಾಡಿದ್ದರು ಎಂದು ಆರೋಪಿಸಿ ಸ್ಥಳದಲ್ಲಿದ್ದ ಕ್ಷಿಪ್ರ ಪರಿಶೀಲನಾ ತಂಡದ ಅಧಿಕಾರಿ ಕುಮಾರಸ್ವಾಮಿ ದೂರು ನೀಡಿದ್ದರು.

ಹಾಗೆಯೇ ‘ಫೇಸ್‌ಬುಕ್ ಖಾತೆಯಲ್ಲಿ ಮತೀಯ ಸಂಘರ್ಷ ಉಂಟು ಮಾಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಏಪ್ರಿಲ್ 26ರಂದು ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...