ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಾಹೀರಾತು ಬಿತ್ತರಿಸಿ: ರಾಜಕೀಯ ಪಕ್ಷಗಳಿಗೆ ಸೂಚನೆ

Date:

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ನಾನಾ ಮಾಧ್ಯಮಗಳಲ್ಲಿ ಬಿತ್ತರಿಸುವ ಜಾಹೀರಾತುಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ರಾಜಕೀಯ ಪಕ್ಷದವರಿಗೆ ಜಿಲ್ಲಾ ಎಂಸಿಎಂಸಿ ನೋಡಲ್ ಅಧಿಕಾರಿ ಪ್ರೀತಿ ಗೆಹ್ಲೋಟ್ ರವರು ರಾಜಕೀಯ ಪಕ್ಷದ ಪ್ರತಿನಿಧಿಗಳಿಗೆ ತಿಳಿಸಿದರು.

ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿ ಸಂಬಂಧ ಪಾಲಿಕೆ ಕೇಂದ್ರ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪ್ರತಿನಿಧಿಗಳ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಬೆಂಗಳೂರು ಜಿಲ್ಲೆ ವ್ಯಾಪ್ತಿಗೆ ನಾನಾ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಮತ್ತು ಅಭ್ಯರ್ಥಿಗಳ ಪರ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಧ್ವನಿ/ದೃಶ್ಯ (ಆಡಿಯೋ / ವೀಡಿಯೋ) ಜಾಹೀರಾತುಗಳನ್ನು ಪ್ರಕಟಿಸುವ ಮೊದಲು ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿಯ ಪೂರ್ವ ಪ್ರಮಾಣೀಕರಣ ಹೊಂದಿರಬೇಕು” ಎಂದು ತಿಳಿಸಿದರು.

“ಯಾವುದೇ ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷ / ಅಭ್ಯರ್ಥಿಯು ಜಾಹೀರಾತು ಪ್ರಸಾರವಾಗುವ 3 ದಿನಗಳ ಮುನ್ನ ಹಾಗೂ ನೋಂದಾಯಿತ, ಮಾನ್ಯವಲ್ಲದ ರಾಜಕೀಯ ಪಕ್ಷ ಜಾಹೀರಾತಿಗೆ ಪೂರ್ವ ಪ್ರಮಾಣೀಕರಣ ಅರ್ಜಿಯನ್ನು 7 ದಿನಗಳ ಮುಂಚಿತವಾಗಿ ಸಲ್ಲಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಯ ಪಕ್ಷಗಳು ಜಾಹೀರಾತು ಪೂರ್ವ ಪ್ರಮಾಣೀಕರಣಕ್ಕಾಗಿ ಜಿಲ್ಲಾ ಎಂಸಿಎಂಸಿ ಸಮಿತಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೇ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಅವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳಲ್ಲಿ ವಿಂಗಡಿಸಿ ಆಯಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಅಭ್ಯರ್ಥಿ ಅಥವಾ ಪಕ್ಷ ನಿಗದಿತ ಚುನಾವಣಾಧಿಕಾರಿಗೆ ಜಾಹೀರಾತು ಪೂರ್ವ ಪ್ರಮಾಣೀಕರಣಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ” ಎಂದು ತಿಳಿಸಿದರು.

“ಯಾವುದೇ ಧ್ವನಿ / ದೃಶ್ಯ ಮಾಧ್ಯಮದ ರಾಜಕೀಯ ಜಾಹೀರಾತು /ಪ್ರಚಾರ ವಿಷಯದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವಂತಹ ಅಂಶಗಳು ಇರಬಾರದು. ಉಲ್ಲಂಘನೆಯಾದ ಸಂದರ್ಭದಲ್ಲಿ ಸಂಬಂಧಿಸಿದ ಚುನಾವಣಾಧಿಕಾರಿಗಳು ಅಂತಹ ಅಭ್ಯರ್ಥಿಗೆ ವಿವರಣೆ ಕೇಳುವ ನೋಟಿಸ್ ಜಾರಿ ಮಾಡುತ್ತಾರೆ” ಎಂದರು.

“ಜಿಲ್ಲಾ ಮಾಧ್ಯಮ ಮೇಲುಸ್ತುವಾರಿ ತಂಡಗಳು ನಿರಂತರ ಎಲ್ಲ ರೀತಿಯ ಮಾಧ್ಯಮ ಪ್ರಸಾರದ ಮೇಲೆ ನಿಗಾ ವಹಿಸುತ್ತಿದ್ದು, ಸಂಶಯಾಸ್ಪದ ಪಾವತಿ ಸುದ್ದಿ ಕಂಡುಬಂದಲ್ಲಿ ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಏಪ್ರಿಲ್‌ 1ರಿಂದ ಹೋಟೇಲ್‌ಗಳಿಗೆ ರಿಯಾಯತಿ ದರದಲ್ಲಿ ಸಂಸ್ಕರಿಸಿದ ನೀರು ಸರಬರಾಜು : ಜಲಮಂಡಳಿ ಅಧ್ಯಕ್ಷ

“ಮಾದರಿ ನೀತಿ ಸಂಹಿತೆ ಅನ್ವಯ ಪ್ರಚಾರ ಕಾರ್ಯಗಳನ್ನು ನಡೆಸುವ ಮೂಲಕ ಚುನಾವಣೆ ಪ್ರಕ್ರಿಯೆ ಸುಗಮವಾಗಿ ನಡೆಸಲು ರಾಜಕೀಯ ಪಕ್ಷಗಳು ಸಹಕರಿಸಬೇಕು” ಎಂದು ಕೋರಿದರು.

ಈ ಸಭೆಯಲ್ಲಿ ಜಿಲ್ಲಾ ಎಂಸಿಎಂಸಿ ಸದಸ್ಯ ಕಾರ್ಯದರ್ಶಿ ರೂಪಾ ಸಿ, ಎಂಸಿಎಂಸಿ ಸದಸ್ಯರಾದ ಆನಂದ್, ವಿಜಯ್ ಕುಮಾರ್ ಹರಿದಾಸ್, ಸುರೇಶ್ ಎಲ್, ರಾಜಕೀಯ ಪ್ರತಿನಿಧಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...