ತೆಲಂಗಾಣ ಪತ್ರಿಕೆಗಳಲ್ಲಿ ಜಾಹೀರಾತು; ರಾಜ್ಯದ ಬೊಕ್ಕಸ ದುರ್ಬಳಕೆ: ಆರ್‌ ಅಶೋಕ ಕಿಡಿ

Date:

  • ‘ರಾಜ್ಯದ ಬೊಕ್ಕಸ ಬರಿದು ಮಾಡಿ, ಹೆಮ್ಮಾರಿಯಾದ ಕಾಂಗ್ರೆಸ್ ಸರ್ಕಾರ’
  • ‘ಅಭಿವೃದ್ಧಿಗೆ ಹಣವಿಲ್ಲದೆ ಜನರ ಮುಂದೆ ಮೊಸಳೆ ಕಣ್ಣೀರು ಹಾಕುತ್ತಿದೆ’

ರಾಜ್ಯದ ಬೊಕ್ಕಸ ಬರಿದು ಮಾಡಿ ಕನ್ನಡಿಗರ ಪಾಲಿಗೆ ಹೆಮ್ಮಾರಿಯಾಗಿರುವ ಕಾಂಗ್ರೆಸ್ ಸರ್ಕಾರ ಪಕ್ಕದೂರಿಗೆ ಉಪಕಾರಿಯಾಗುವ ಪೋಸ್ ಕೊಡಲು ಹೊರಟಿರುವುದು ಕರ್ನಾಟಕದ ದುರಂತವೇ ಸರಿ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ.

ಈ ಕುರಿತು ಮೈಕ್ರೋ ಬ್ಲಾಗಿಂಗ್‌ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಒಂದು ಕಡೆ ರಾಜ್ಯದ ಅಭಿವೃದ್ಧಿಗೆ ಹಣವಿಲ್ಲದೆ ಜನರ ಮುಂದೆ ಮೊಸಳೆ ಕಣ್ಣೀರು ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ, ಮತ್ತೊಂದೆಡೆ ತೆಲಂಗಾಣ ರಾಜ್ಯದ ದಿನಪತ್ರಿಕೆಗಳಲ್ಲಿ ಜಾಹೀರಾತು ಕೊಡಲು ರಾಜ್ಯದ ಬೊಕ್ಕಸ ದುರ್ಬಳಕೆ ಮಾಡಿಕೊಂಡು ಚುನಾವಣಾ ಆಯೋಗದಿಂದ ಛೀಮಾರಿ ಹಾಕಿಸಿಕೊಂಡಿದೆ” ಎಂದಿದ್ದಾರೆ.

“ಗ್ಯಾರಂಟಿಗಳನ್ನು ಜಾರಿ ಮಾಡಲಾಗದೆ ದಿನಕ್ಕೊಂದು ಕುಂಟು ನೆಪ, ನೂರೆಂಟು ಕಂಡೀಷನ್ ಹಾಕಿ ಕನ್ನಡಿಗರಿಗೆ ಮೋಸ ಮಾಡಿರುವ ಕಾಂಗ್ರೆಸ್ ಪಕ್ಷ, ಎಲ್ಲಾ 5 ಗ್ಯಾರೆಂಟಿಗಳನ್ನೂ ಚಾಚೂ ತಪ್ಪದೆ ಜಾರಿ ಮಾಡಿಬಿಟ್ಟಿದ್ದೇವೆ ಎಂದು ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಜಾಹೀರಾತು ನೀಡುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದೆ” ಎಂದು ಹರಿಹಾಯ್ದಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...