ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ

Date:

ಜಾಹೀರಾತು ನಿಯಮ ತಿದ್ದುಪಡಿ ಮಾಡಿ ಹೊಸ ಜಾಹೀರಾತು ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ತಿದ್ದುಪಡಿ ನೀತಿ ಕರಡನ್ನು ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗಾಗಿ ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, “ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು. ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜಾಹೀರಾತು ನೀತಿ ಬಾಕಿ ಉಳಿದಿತ್ತು. ಪ್ರಸ್ತುತ ಸಂಘ, ಸಂಸ್ಥೆಗಳ ಜೊತೆ ಚರ್ಚೆ ನಡೆಸಲಾಗಿದೆ” ಎಂದು ತಿಳಿಸಿದ್ದಾರೆ.

“60 ಅಡಿಗಿಂತ ಹೆಚ್ಚು ಅಗಲ ಇರುವ ರಸ್ತೆಗಳಲ್ಲಿ ‘ಗ್ರೂಪ್ ಪ್ಯಾಕೇಜ್’ ತಯಾರಿಸಿ ಅವಕಾಶ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಜಾಹಿರಾತು ನೀಡಲು ಅವಕಾಶ ನೀಡಲಾಗುವುದು. ಬಿಬಿಎಂಪಿಗೆ ತೆರಿಗೆ ನೀಡಿ ಖಾಸಗಿ ಕಟ್ಟಡಗಳು ಬಾಡಿಗೆ ನೀಡಬಹುದು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಟ್ಟಡಗಳ ವಿಸ್ತೀರ್ಣ, ಎತ್ತರಕ್ಕೆ ತಕ್ಕಂತೆ ಯೂನಿಫಾರ್ಮಿಟಿ ತರಲಾಗುವುದು. ಮನಬಂದಂತೆ ಜಾಹೀರಾತು ಹಾಕಲು ಅವಕಾಶವಿಲ್ಲ. ಫಲಕಗಳನ್ನು ಮಾಡಲು ಯಾವ ಗುಣಮಟ್ಟದ ವಸ್ತು ಬಳಸಬೇಕು ಎಂದು ನಂತರ ತಿಳಿಸಲಾಗುವುದು. ಸರ್ಕಾರದಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಹಿಂದಿನ ಸರ್ಕಾರ ಒಂದಷ್ಟು ಅವಕಾಶ ನೀಡಿದ್ದು ಕಾನೂನು ಪ್ರಕಾರವಾಗಿ ಇದ್ದರೆ ರಕ್ಷಣೆ ಮಾಡಲಾಗುವುದು. ಏನೂ ಮಾಡದೆ ಇದ್ದವರನ್ನು ಕಾನೂನಿನ ಪ್ರಕಾರ ವಜಾ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

“60 ಅಡಿಗಿಂತ ರಸ್ತೆ ಕಡಿಮೆ ಇದ್ದು, ಕಮರ್ಷಿಯಲ್ ವಲಯ ಎಂದು ಗುರುತಿಸಿದ್ದರೆ, ಅಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ನೀಡಲಾಗುವುದು. ಜನಸಾಂದ್ರತೆ ಹಾಗೂ ವಹಿವಾಟು ಹೆಚ್ಚಿರುವ ಕಡೆ ಅವಕಾಶ ನೀಡಲಾಗುವುದು. ಸರ್ಕಾರಕ್ಕೆ ಹಣ ಬಾಕಿ ಉಳಿಸಿಕೊಂಡಿರುವ, ದಾವೆ ಹೂಡಿರುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ನಾವು ಹೇಗೆ ಚುನಾವಣೆಗೆ ನಿಲ್ಲುವಾಗ ಯಾವುದೇ ಬಾಕಿಗಳನ್ನು ಉಳಿಸಿಕೊಳ್ಳದೆ ಇರುತ್ತೇವೆಯೆ, ಅದೇ ರೀತಿ ಇಲ್ಲಿ ಭಾಗವಹಿಸುವವರು ಎಲ್ಲ ಬಾಕಿಗಳನ್ನು ಕಟ್ಟಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್

“ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ನಾವು ಏನು ಮಾಡಲು ಆಗುವುದಿಲ್ಲ. ಅಲ್ಲಿ ತೀರ್ಮಾನವಾದ ನಂತರ ಬಗೆಹರಿಸಬಹುದು. ಜತೆಗೆ ನ್ಯಾಯಾಲಯವು ಒಂದಷ್ಟು ಸೂಚನೆಗಳನ್ನು ನೀಡಿತ್ತು. ಅದನ್ನು ಗಣನೆಗೆ ತೆಗೆದುಕೊಂಡು ನಿಯಮಗಳನ್ನು ರೂಪಿಸಲಾಗಿದೆ. ಮೆಟ್ರೋ ಒಳಗೆ ಆ ನಿಗಮ ನೋಡಿಕೊಳ್ಳುತ್ತದೆ. ಹೊರಗಡೆ ಪಾಲಿಕೆ ಮತ್ತು ಮೆಟ್ರೋ ಸಹಭಾಗಿತ್ವದಲ್ಲಿ ಪ್ರತ್ಯೇಕ ಪ್ಯಾಕೇಜ್ ಘೋಷಣೆ ಮಾಡಲಾಗುವುದು” ಎಂದು ಹೇಳಿದ್ದಾರೆ.

“ಸುಮಾರು 600 ಕೋಟಿ ಜಾಹೀರಾತು ಹಣ ಬಾಕಿ ಇದೆ. ಎಲ್ಲವನ್ನು ವಸೂಲಿ ಮಾಡಲಾಗುವುದು, ಬಾಕಿ ಉಳಿಸಿಕೊಂಡಿರುವವರಿಗೆ ಭಾಗವಹಿಸಲು ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...