ಪರಿಣಾಮಕಾರಿ ಬರ ನಿರ್ವಹಣೆಗೆ ಅಧಿಕಾರಿಗಳಿಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ

Date:

ಪರಿಣಾಮಕಾರಿ ಬರ ನಿರ್ವಹಣೆಗೆ ಕೃಷಿ ಹಾಗೂ ಜಲಾನಯನ ಇಲಾಖೆ ಅಧಿಕಾರಿಗಳು ಹೆಚ್ಚಿನ
ಕಾಳಜಿ ವಹಿಸಿ ಕೆಲಸ ನಿರ್ವಹಣೆ ಮಾಡಬೇಕು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ.

ವಿಕಾಸ ಸೌಧದ ಕೊಠಡಿ ಸಂಖ್ಯೆ 422ರಲ್ಲಿಂದು ಕೃಷಿ ಹಾಗೂ ಜಲಾನಯನ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು
ಅಧಿಕಾರಿಗಳಿಗೆ ‌ಹಲವು ಸಲಹೆ ಸೂಚನೆ ನೀಡಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಮುಂದುವರೆದಿದೆ. ಅಧಿಕಾರಿಗಳು ನಿರಂತರವಾಗಿ ರೈತರೊಂದಿಗೆ ಸಂಪರ್ಕದಲ್ಲಿದ್ದು ಆತ್ಮವಿಶ್ವಾಸ ತುಂಬಬೇಕು. ಸಲಹೆ, ಮಾರ್ಗದರ್ಶನ ನೀಡುತ್ತಾ, ಅರಿವು ಮೂಡಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲ ಗ್ರಾಮಗಳಲ್ಲಿ ನಿಖರ ಬೆಳೆ ಸಮೀಕ್ಷೆ ನಡೆಸಬೇಕು. ಸದ್ಯದ ಪರಿಸ್ಥಿತಿಯಲ್ಲಿ ಪರ್ಯಾಯ ಬೆಳೆ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಿ ರೈತರಿಗೆ ಮಾಹಿತಿ ನೀಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ರೈತರ ಹಿತ ಸಂರಕ್ಷಣೆ ಮೊದಲ ಆದ್ಯತೆಯಾಗಬೇಕು. ಅಧಿಕಾರಿಗಳು ಸುಲಭವಾಗಿ ರೈತರಿಗೆ ಸಿಗುವಂತಿರಬೇಕು ಎಂದು ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದರು.

ವಿಮೆ ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಮೇಲ್ವಿಚಾರಣೆ ನಡೆಸಿ, ಎಲ್ಲ ಅರ್ಹರಿಗೆ ಸೌಲಭ್ಯ ತಲುಪಬೇಕು ಎಂದ ಸಚಿವರು ಹಿಂಗಾರು ಬೆಳೆಗಳ ವಿಮೆ ನೋಂದಣಿ ಬಗ್ಗೆ ವ್ಯಾಪಕ‌ ಜಾಗೃತಿ ಮೂಡಿಸಿ ಹೆಚ್ಚಿನ ನೊಂದಣಿ ಮಾಡಿಸಲು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮ್ಯಾಕ್ಸ್‌ವೆಲ್‌ ಬೌಲಿಂಗ್‌ ಮೋಡಿಗೆ ಶರಣಾದ ಭಾರತ; 2-1 ಗೆಲುವಿನೊಂದಿಗೆ ಟೀಂ ಇಂಡಿಯಾಗೆ ಸರಣಿ ಕೈವಶ

ಬಜೆಟ್ ನಲ್ಲಿ ಘೋಷಣೆಯಾದ ಎಲ್ಲಾ ಕಾರ್ಯಕ್ರಮ ,ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು.
ಅನುದಾನ ಬಿಡುಗಡೆಗೆ ಅನುಗುಣವಾಗಿ ಎಲ್ಲಾ ‌ಜಿಲ್ಲೆಗಳಲ್ಲಿ ಶೇ 100% ಆರ್ಥಿಕ ಭೌತಿಕ ಗುರಿ ಸಾಧನೆಯಾಗಬೇಕು ಎಂದು ಸಚಿವರು ತಿಳಿಸಿದರು.

ಉದ್ಯೋಗ ಖಾತರಿ ಯೋಜನೆ ಸದ್ಬಳಕೆ ಮಾಡಿ ಜಲ‌ ಸಂರಕ್ಷಣೆ ಚಟುವಟಿಕೆಗಳಿಗೆ ಆಧ್ಯತೆ ನೀಡಿಕ ಎಂದು ಸಚಿವರು ತಿಳಿಸಿದರು.

ಹಿಂಗಾರಿನಲ್ಲಿ ಸಾಧ್ಯವಿರುವ ಒಣ ಬೇಸಾಯದ ಬಗ್ಗೆ ಕೃಷಿ ವಿಶ್ವ ವಿದ್ಯಾಲಯಗಳ ವಿಜ್ಞಾನಿಗಳಿಂದ ಮಾಹಿತಿ ಪಡೆದು ಅದನ್ನು ರೈತರಿಗೆ ವರ್ಗಾಯಿಸಿ, ಮುಂದಿನ ದಿನಗಳಲ್ಲಿ ಸಮಗ್ರ ಕೃಷಿ (ಮಿಶ್ರ ಬೇಸಾಯ) ಹಾಗೂ ಸಿರಿಧಾನ್ಯ ಬೆಳೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ರೈತರ ನಷ್ಟ ತಪ್ಪಿಸಿ ನಿಶ್ಚಿತ ಆದಾಯ ಖಾತರಿ ಮಾಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ಎಂದು ಸಚಿವರು ಸಲಹೆ ನೀಡಿದರು.

ಕಳಪೆ‌ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ, ಕೃಷಿ ಯಾಂತ್ರೀಕರಣ, ಯಂತ್ರಧಾರೆ, ಸಬ್ಸಿಡಿ ಯೋಜನೆಯಲ್ಲಿ ಯಾವುದೇ ದುರ್ಬಳಕೆಯಾಗದಂತೆ ನಿಗಾವಹಿಸಬೇಕು. ನಿರ್ಲಕ್ಷ್ಯ ತೋರಿದಲ್ಲಿ ಅಯಾಯ ಜಿಲ್ಲೆಗಳ ಜಂಟಿ ನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ನವೋದ್ಯಮ ಪ್ರೋತ್ಸಾಹ ಯೋಜನೆ ಅನುಷ್ಠಾನ, ನಂದಿನಿ ಮಾದರಿಯಲ್ಲಿ ಕೃಷಿ ಉತ್ಪನ್ನಗಳ ಬ್ರಾಂಡಿಗ್,
ಕೇಂದ್ರ ಪುರಸ್ಕೃತ ಜಲಾನಯನ ಅಭಿವೃದ್ಧಿ ಮತ್ತು ಜಲ ಸಂರಕ್ಷಣಾ ಯೋಜನೆಗಳ ಪರಿಣಾಮಕಾರಿ ಬಳಕೆ ಕುರಿತು ಕೃಷಿ ಸಚಿವರು ಸೂಚನೆ ‌ನೀಡಿದರು.

ಕೃಷಿ ಇಲಾಖೆ ಆಯುಕ್ತರಾದ ವೈ ಎಸ್. ಪಾಟೀಲ್, ನಿರ್ದೇಶಕರಾದ ಜಿ ಟಿ ಪುತ್ರ, ಜಲಾನಯನ ಇಲಾಖೆ ಆಯುಕ್ತರಾದ ಗಿರೀಶ್, ನಿರ್ದೇಶಕರಾದ ಶ್ರೀನಿವಾಸ್ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...