ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಪಾಸ್

Date:

ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ ಕಾವೇರಿ ಆದೇಶ ಹೊರಡಿಸಿದ್ದು, “ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಅನುಕೂಲ ಮಾಡಿಕೊಡುವಂತೆ” ಸೂಚಿಸಿದ್ದಾರೆ.

2023–24ನೇ ಸಾಲಿನ ಫಲಿತಾಂಶವನ್ನು ರಾಜ್ಯದ ಎಲ್ಲ ಶಾಲೆಗಳಲ್ಲಿ ಏಪ್ರಿಲ್‌ 8ರಂದು ಪ್ರಕಟಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು. ಆದರೆ, ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದ್ದರಿಂದ ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಫಲಿತಾಂಶವನ್ನು ಪ್ರಕಟಿಸಲು ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು, ಅಂತಿಮ ತೀರ್ಪು ಬಾಕಿ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದು, ಮೇ 29 ರಿಂದ 2024- 25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ತರಗತಿಗೆ ಪ್ರವೇಶ, ದಾಖಲಾತಿ, ಪ್ರವೇಶ ಶುಲ್ಕ ಪಾವತಿ ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆಗೆ ಪ್ರಮಾಣ ಪತ್ರ, ಪ್ರಗತಿ ಪತ್ರ, ವ್ಯಾಸಂಗ ಪ್ರಮಾಣ ಪತ್ರ ವಿತರಿಸಲು ಶಾಲೆಗಳಿಗೆ ಸಾಧ್ಯವಾಗಿರಲಿಲ್ಲ.

ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸೂಚಿಸಿದ್ದಾರೆ.

ನ್ಯಾಯಾಲಯದ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆಹಿಡಿದಿರುವ ಹಿನ್ನೆಲೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA- 1, FA-2, FA-3, FA-4 2 SA-1 ಮೌಲ್ಯಾಂಕನ ಆಧಾರದ ಮೇಲೆ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವುಂತೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೇ 21 ರಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ

2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ಏ.11 ರಿಂದ ಮೇ 28ರವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ. ಆದರೆ, ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿವೆ. ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈಗಾಗಲೇ ನಿಗದಿಯಾದಂತೆ ಶೈಕ್ಷಣಿಕ ರಜೆಯನ್ನು ಮುಂದುವರಿಸುವಂತೆ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಅವಧಿಯನ್ನು ಕಡಿತಗೊಳಿಸಿ ಶಾಲೆ ಆರಂಭಿಸಿರುವ ಕ್ರಮ ಸರಿಯಾಗಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ನಿಗದಿಯಂತೆಯೇ ಮೇ 29ರಿಂದಲೇ ಆರಂಭಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.‌

ಮಕ್ಕಳಿಗೆ ಶೈಕ್ಷಣಿಕ ವರ್ಷದಲ್ಲಿ ಶಾಲಾ ಚಟುವಟಿಕೆಗಳನ್ನು ಸೇರಿದಂತೆ ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅದರಂತೆ ಶಾಲೆಗಳನ್ನು ಪ್ರಾರಂಭಿಸಿ ಮುಂದುವರೆಸಲು ಕ್ರಮವಹಿಸುವಂತೆ ರಾಜ್ಯದ ಎಲ್ಲ ಉಪನಿರ್ದೇಶಕರುಗಳಿಗೆ ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...