ಫೆ.12 ರಂದು ʼಅಖಿಲ ಭಾರತ ಸಾರ್ವತ್ರಿಕ ಮುಷ್ಕರʼ : ಕೇಂದ್ರ-ರಾಜ್ಯ ಸರ್ಕಾರಗಳಿಗೆ ಕಟ್ಟೆಚ್ಚರ

Date:

“ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಹೊಸದಾಗಿ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು, ಬೀಜ ಮಸೂದೆ, ವಿದ್ಯುಚ್ಛಕ್ತಿ ಮಸೂದೆಯನ್ನು ವಾಪಸ್ ಹಾಗೂ ಮನರೇಗಾವನ್ನು ಮರು ಸ್ಥಾಪಿಸಬೇಕು ಎಂದು ರೈತಸಂಘದ ಅಧ್ಯಕ್ಷ ಹೆಚ್‌ ಆರ್‌ ಬಸವರಾಜಪ್ಪ ಒತ್ತಾಯಿಸಿದರು.

ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಫೆ.12ರಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ – ಜೆಸಿಟಿಯು ಕರ್ನಾಟಕ ಹಾಗೂ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಸ್ವಯಂ ಪ್ರೇರಿತ ʼಅಖಿಲ ಭಾರತ ಸಾರ್ವತ್ರಿಕ ಮುಷ್ಕರʼಕ್ಕೆ ಕರೆ ನೀಡಲಾಯಿತು.

“ಜಾಗತೀಕರಣದ ನಂತರ ಸರ್ಕಾರಗಳು ಬಂಡವಾಳ ಶಾಹಿಗಳ ಪರವಾಗಿ ಕಾನೂನುಗಳನ್ನು ತರುತ್ತಿದ್ದಾರೆ. ಈಗ ಅದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಂದಿದೆ. ಇದನ್ನು ವಾಪಸ್ಸು ಪಡೆಯಬೇಕೆಂದು” ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿ : ಹಾಸನ | ಫೆ. 12ಕ್ಕೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ರಸ್ತೆ ತಡೆ ಮತ್ತು ಪಿಕೆಟಿಂಗ್

ಕಾರ್ಮಿಕ ಮುಂಖಡರಾದ ಎಸ್‌.ವರಲಕ್ಷ್ಮಿ ಮಾತನಾಡಿ “ರಾಜ್ಯ ಸರ್ಕಾರ ಕಾರ್ಮಿಕ ಕೋಡ್‌ಗಳಿಗೆ ನಿಯಮಾವಳಿ ರಚಿಸವಾರದೆಂದೂ ಒತ್ತಾಯಿಸಿದರೂ, ಕಾರ್ಮಿಕ ಸಚಿವರು ಹಾಗೂ ಮುಖ್ಯಮಂತ್ರಿಗಳು 4 ಕಾರ್ಮಿಕ ಕೋಡ್‌ಗಳಿಗೆ ಗೆಜೆಟ್‌ ನೋಟೀಫಿಕೇಷನ್‌ ತರಲು ಹೊರಟಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಬಂಡವಾಳಿಗರ ಹಿತವನ್ನು ಕಾಯುತ್ತಿವೆ” ಎಂದು ಆರೋಪಿಸಿದರು.

ಸಂಯುಕ್ತ ಹೋರಾಟ ಕರ್ನಾಟಕದ ಪ್ರಮುಖರಾದ ನೂರ್‌ ಶ್ರೀಧರ್‌ ಮಾತನಾಡಿ “ದೇಶದಲ್ಲಿ ಕಾರ್ಪೊರೇಟ್‌ ಬಾಂಬಿಗ್‌ ನಡೆಯುತ್ತಿದೆ. ರಾಜ್ಯದ ಮೂರು ಪಕ್ಷಗಳು ಬಡವರ ವಿರೋಧಿ ಕೆಲಸಗಳನ್ನು ಮಾಡುತ್ತಿವೆ. ಜೆಡಿಎಸ್‌ ಈಗಾಗಲೇ ತಮ್ಮನ್ನು ತಾವು ಮಾರಿಕೊಂಡಿದೆ. 4 ಕಾರ್ಮಿಕ ಕೋಡ್‌ಗಳ ಬಗ್ಗೆ ಮೌನವಹಿಸಿರುವ ಕಾಂಗ್ರೆಸ್‌, ಕೇವಲ ನರೇಗಾ ವಿಚಾರವನ್ನು ಮಾತ್ರ ಚರ್ಚೆ ನಡೆಸುತ್ತಿದೆ” ಎಂದು ಆರೋಪಿಸಿದರು.

“ಕಾರ್ಮಿಕ, ರೈತ, ದಲಿತ, ವಿದ್ಯಾರ್ಥಿ, ಯುವಜನ ಹಾಗೂ ಕೂಲಿಕಾರ್ಮಿಕರೆಲ್ಲರೂ ಒಗ್ಗೂಡಿ ಬೃಹತ್ ಮಟ್ಟದ ಬಂದ್‌ ನಡೆಸಲಾಗುತ್ತದೆ. ಅಂದು ದೇಶದಲ್ಲಿರುವ ಎಲ್ಲಾ ಕೈಗಾರಿಕೆಗಳು ಕೆಲಸ ನಿಲ್ಲಿಸುತ್ತವೆ. ಜೊತೆಗೆ ಸಂಘಟಿತ ಹಾಗೂ ಅಸಂಘಟಿತ ನೌಕರರೆಲ್ಲರೂ ಪ್ರತಿಭಟನೆಯನ್ನು ಪಾಲ್ಗೊಳ್ಳುತ್ತಾರೆ. ಆಳುವ ಸರ್ಕಾರಗಳಿಗೆ ಬೀಸಿ ಮುಟ್ಟಿಸದೆ ಹೋದರೆ ಎಚ್ಚರಗೊಳ್ಳುವುದಿಲ್ಲ” ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಡಗಲಪುರ ನಾಗೇಂದ್ರ, ಕೆ ವಿ ಭಟ್, ಟಿ. ಯಶವಂತ್, ಚಂದ್ರಪ್ಪ ಹೊಸಕೆರೆ, ಅಪ್ಪಣ್ಣ, ಕಾಳಪ್ಪ, ಗಂಗಣ್ಣ, ವೀರಸಂಗಯ್ಯ, ಛಾಯಾ, ಜಿ. ಆರ್‌. ಶಿವಶಂಕರ್‌ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...