ವಂಚನೆ, ಜೀವ ಬೆದರಿಕೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆ‌ರ್

Date:

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೇಂದ್ರ ಸಚಿವ ವಿ ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಗೆ ವಂಚಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಅರುಣ್ ಮತ್ತು ಇತರ ಇಬ್ಬರ ವಿರುದ್ಧ ತೃಪ್ತಿ ಹೆಗಡೆ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಅವರ ದೂರಿನ ವಿಚಾರಣೆ ನಡೆಸಿದ ನಗರದ 37ನೇ ಎಸಿಎಂಎಂ ನ್ಯಾಯಾಲಯ ತನಿಖೆ ನಡೆಸುವಂತೆ ಆದೇಶಿಸಿತ್ತು.

ಅದರನ್ವಯ ಅರುಣ್ ಸೋಮಣ್ಣ, ಜೀವನ್ ಕುಮಾರ್ ಹಾಗೂ ಪ್ರಮೋದ್ ರಾವ್ ಎಂಬುವರ ವಿರುದ್ಧ ಐಪಿಸಿ ಸೆಕ್ಷನ್ 506, 34, 504, 387, 420, 477A, 323, 327,347 ಹಾಗೂ 354 (ದೈಹಿಕ ಹಿಂಸೆ, ಅವಮಾನ, ಜೀವಭಯ, ವಂಚನೆ, ಅಪಹರಣ) ಅಡಿಯಲ್ಲಿ ಸಂಜಯ್ ನಗರ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ತೃಪ್ತಿ ಹಾಗೂ ಮಧ್ವರಾಜ್ ಎಂಬುವರು ಸುಮಾರು 23 ವರ್ಷಗಳಿಂದ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದಾರೆ. 2013ರಲ್ಲಿ ಸರ್ಕಾರಿ ಕಾರ್ಯಕ್ರಮ ಆಯೋಜನೆ ಮಾಡಿದಾಗ ಇವರಿಗೆ ಅರುಣ್ ಸೋಮಣ್ಣ ಅವರ ಪರಿಚಯವಾಗಿತ್ತು.

ಬಳಿಕ, 2017ರಲ್ಲಿ ಅರುಣ್ ಸೋಮಣ್ಣ ಅವರ ಪುತ್ರಿಯ ಹುಟ್ಟುಹಬ್ಬದ ಕಾರ್ಯಕ್ರಮ ಆಯೋಜನೆ ಮಾಡುವ ಜವಾಬ್ದಾರಿಯನ್ನು ಮಧ್ವರಾಜ್ ಒಡೆತನದ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೇ ನಿರ್ವಹಿಸಿತ್ತು.

ಆ ಬಳಿಕ ಅರುಣ್ ಸೋಮಣ್ಣ ಮತ್ತು ಮಧ್ವರಾಜ್  ಅವರ ಜತೆಗೆ ಉತ್ತಮ ಬಾಂಧವ್ಯ ಇತ್ತು.  ಹೀಗಾಗಿ, 2019ರಲ್ಲಿ  ಅರುಣ್ ಮತ್ತು ಮಧ್ವರಾಜ್ ಜಂಟಿಯಾಗಿ ನೈಬರ್‌ ಹುಡ್ ಎಂಬ ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯನ್ನು ಪಾರ್ಟನ‌ರ್ ಶಿಪ್ ಡೀಡ್ ಮೇಲೆ ಆರಂಭಿಸಿದ್ದರು. ಕಂಪನಿಯ ಹೂಡಿಕೆ, ಪಾವತಿ ಹಾಗೂ ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿ ಅರುಣ್ ವಹಿಸಿಕೊಂಡಿದ್ದರು.

ಕೆಲ ತಿಂಗಳಲ್ಲಿ ಕಂಪನಿಯ ವ್ಯವಹಾರದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆ ಮಧ್ವರಾಜ್‌ಗೆ ಕಂಪನಿಗೆ ರಾಜೀನಾಮೆಗೆ ಒತ್ತಾಯಿಸಿ  ಕಿರುಕುಳ, ಕುಟುಂಬಕ್ಕೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಸುರಂಗ ಕೊರೆಯುವ ಟಿಬಿಎಂ ಯಂತ್ರಗಳಿಗೆ ಅಡ್ಡ ಬಂದ ಬಂಡೆ; ಪಿಂಕ್ ಲೈನ್ ಕಾಮಗಾರಿ ವಿಳಂಬ

ಕಂಪನಿಯಲ್ಲಿ ಲಾಸ್ ಆಗಿದ್ದ ಹಣವನ್ನು ನೀಡುವಂತೆ ಬೆದರಿಸಿ, ಹಲ್ಲೆ ಮಾಡಿಸಿ ಮಧ್ವರಾಜ್ ದಂಪತಿಯಿಂದ ವಸೂಲಿ ಮಾಡಿರುವ ಆರೋಪವೂ ಇದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಸಂಜಯ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸದ್ಯ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಆರೋಪಿತರ ವಿರುದ್ಧ ಜಾಮೀನು ರಹಿತ ಸೆಕ್ಷನ್​ಗಳಿರುವುದರಿಂದ ಸಚಿವ ಸೋಮಣ್ಣ ಅವರ ಪುತ್ರನಿಗೆ ಬಂಧನದ ಭೀತಿ ಎದುರಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...