ಕೆಎಸ್‌ಡಿಬಿ ನಿರ್ಮಿಸಿರುವ 36,789 ಮನೆಗಳು ಬಡ ಕುಟುಂಬಗಳಿಗೆ ಹಂಚಿಕೆ

Date:

ರಾಜ್ಯದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ (ಕೆಎಸ್‌ಡಿಬಿ) ನಿರ್ಮಿಸಿರುವ 36,789 ಮನೆಗಳನ್ನು ಬಡ ಕುಟುಂಬಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಪ್ರತಿ ಮನೆಗೆ ₹4.50 ಲಕ್ಷ ನಿಗದಿಯಾಗಿದ್ದು, ಅಷ್ಟು ಮೊತ್ತವನ್ನು ಫಲಾನುಭವಿಗಳು ಪಾವತಿಸಲು ಸಾಧ್ಯವಿಲ್ಲದ ಕಾರಣ, ಫಲಾನುಭವಿಗಳು ಕೇವಲ ₹1 ಲಕ್ಷ ಪಾವತಿಸಿದರೆ ಸಾಕು. ಉಳಿದ ಹಣವನ್ನು ಸರ್ಕಾರವೇ ಪಾವತಿಸುತ್ತದೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಮನೆಗಳ ಹಂಚಿಕೆಯ ಚಾಲನಾ ಕಾರ್ಯಕ್ರಮ ಶನಿವಾರ ನಡೆದಿದೆ. ಬಡ ಕುಟುಂಬಗಳ ಆರ್ಥಿಕ ಸಂಕಷ್ಟವನ್ನು ಅರಿತು, ಫಲಾನುಭವಿಗಳ ಪಾಲಿನ ವಂತಿಗೆ ಮೊತ್ತ ₹6,170 ಕೋಟಿಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಚೇರಿ ವಿವರಿಸಿದೆ.

1,80,253 ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಮೊದಲನೇ ಕಂತು ₹500 ಕೋಟಿ ಬಿಡುಗಡೆ ಆಗಿದ್ದು, ಮೊದಲ ಹಂತದಲ್ಲಿ 36,789 ಮನೆಗಳನ್ನು ಈಗ ಹಂಚಿಕೆ ಮಾಡಲಾಗುತ್ತಿದೆ. ಕೆ.ಆರ್.ಪುರದ ನಗರೇಶ್ವರ ನಾಗೇನಹಳ್ಳಿಯಲ್ಲಿ 1,047 ಮನೆ ನಿರ್ಮಿಸಿದ್ದು, ಆ ಪೈಕಿ, ಶನಿವಾರ 480 ಮನೆ ಹಂಚಿಕೆ ಮಾಡಲಾಗಿದೆ. ಇದೇ ರೀತಿ ರಾಜ್ಯದಾದ್ಯಂತ ನಿರ್ಮಿಸಿರುವ ಮನೆಗಳನ್ನು ಏಕಕಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಂಚಿಕೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ

“ಯೋಜನೆಯಡಿಯಲ್ಲಿ ಫಲಾನುಭವಿಗಳು ತಲಾ ₹4.50 ಲಕ್ಷ ಪಾವತಿಸಬೇಕಿತ್ತಾದರೂ ಇದೀಗ ₹1 ಲಕ್ಷ ಪಾವತಿಸಿದರೆ ಉಳಿದ ಮೊತ್ತ ಸರ್ಕಾರವೇ ಭರಿಸುತ್ತಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಗೆ ₹7.50 ಲಕ್ಷ ವೆಚ್ಚವಾಗಲಿದ್ದು, ₹3 ಲಕ್ಷ ಸಬ್ಸಿಡಿ ಹೊರತು ಪಡಿಸಿದರೆ ಉಳಿದ ಮೊತ್ತ ಫಲಾನುಭವಿ ಕೊಡಬೇಕಿತ್ತು. ಬ್ಯಾಂಕ್ ಸಾಲವೂ ದೊರೆಯದೆ ಅಷ್ಟು ಕುಟುಂಬಗಳು ಸಂಕಷ್ಟ ಎದುರಿಸುತ್ತಿದ್ದವು. ಇದೀಗ ಸರ್ಕಾರದ ತೀರ್ಮಾನದಿಂದ 1,80,253 ಕುಟುಂಬಗಳಿಗೆ ನೆಮ್ಮದಿ ಸಿಕ್ಕಂತಾಗಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್‌ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಶಿವಕುಮಾರ್

ಸಂಕಷ್ಟದಲ್ಲಿದ್ದ ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ತೀರ್ಮಾನ ನಮ್ಮ ಅವಧಿಯಲ್ಲಿ ಕೈಗೊಂಡಿದ್ದು ಸಂತೋಷ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ನಮ್ಮ ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾಳಜಿ, ಹಣಕಾಸು ಇಲಾಖೆ ಅಧಿಕಾರಿಗಳ ಸಹಕಾರದಿಂದ ಬಡವರು ಶಾಶ್ವತ ಸೂರು ಪಡೆದಂತಾಗಿದೆ. ಆ ಮೂಲಕ ಮುಖ್ಯಮಂತ್ರಿಗಳ‌ ಕನಸು ಮತ್ತು‌ ಕಾಳಜಿ ಸಾಕಾರಗೊಳ್ಳುತ್ತಿದೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...