ಅನುಮತಿ ಪಡೆಯದ ಜಾಗದಲ್ಲಿ ಕೊಳವೆಬಾವಿ ಕೊರೆದರೆ ಕ್ರಮ: ಬೆಂಗಳೂರು ಜಲಮಂಡಳಿ

Date:

  • ಸಾರ್ವಜನಿಕ ಕೊಳವೆಬಾವಿಗಳ ಕೊರೆಯಿಸುವುದಕ್ಕೆ ಅನುಮತಿ ಪ್ರಥಮ ಆದ್ಯತೆ
  • ಕೊಳವೆಬಾವಿ ಕೊರೆಯಿಸುವುದಕ್ಕೆ ಅನುಮತಿ ಅರ್ಜಿ ಸಲ್ಲಿಸಲು ಮಾ.15ರಿಂದ ಅವಕಾಶ

“ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊಳವೆಬಾವಿಗಳನ್ನು ಕೊರೆಯವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊಳವೆಬಾವಿಗಳನ್ನು ಕೊರೆಯತಕ್ಕದ್ದು. ಒಂದು ವೇಳೆ ಅನುಮತಿ ಪಡೆಯದೇ ಇರುವ ಸ್ಥಳಗಳಲ್ಲಿ ಕೊಳವೆ ಬಾವಿಗಳನ್ನು ಕೊರೆದಲ್ಲಿ ಅಂತಹ ಕೊಳವೆಬಾವಿ ಕೊರೆಯುವರ ವಿರುದ್ಧ ಕ್ರಮಕೈಗೊಳ್ಳಲಾಗುವುದು” ಎಂದು ಬೆಂಗಳೂರು ‌ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲೂಎಸ್‌ಎಸ್‌ಬಿ) ಎಚ್ಚರಿಕೆ ನೀಡಿದೆ.

“ಅಂತರ್ಜಲವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡು ಆದೇಶ ಹೊರಡಿಸಿರುವ ಮಂಡಳಿಯು ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 17 ರ ಅಧಿಕಾರದನ್ವಯ ನಿಯಮಾನುಸಾರ ರಿಗ್ ಪಡೆಯಲು ನೀಡಿರುವ ಅನುಮತಿಯನ್ನು ಕೂಡಲೇ ರದ್ದುಪಡಿಸಲು ಕ್ರಮವಹಿಸುವುದು ಮತ್ತು ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.

“ಹಾಗೆಯೇ, ಇನ್ನು ಮುಂದೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನೆ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 11ರನ್ವಯ ಎಲ್ಲಾದರು ಸಂಬಂಧಪಟ್ಟ ಪ್ರಾಧಿಕಾರಿಯಿಂದ ಅನುಮತಿ ಪಡೆಯದೇ ಕೊಳವೆ ಬಾವಿಗಳನ್ನು ಕೊರೆದಲ್ಲಿ ಕೊಳವೆಬಾವಿಯನ್ನು ಕೊರೆಸುವ ಮಾಲೀಕರ ವಿರುದ್ಧ ನಿಯಮ ಉಲ್ಲಂಘನೆ ಮಾಡಿರುವುದ್ದಾಗಿ ದೂರು ಹಾಗೂ ಅಂತವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರೂಗಿಸಲಾಗುವುದು” ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಆದೇಶವು ಇದೇ ಮಾ.15 ರಿಂದ ಜಾರಿಗೆ ಬರಲಿದೆ. ಮಾ.15 ರಿಂದ ಬೆಂಗಳೂರು ಜಲಮಂಡಳಿ ಜಾಲತಾಣದಲ್ಲಿ ಕೊಳವೆಬಾವಿ ಕೊರೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ತಾವು ಅನುಮತಿ ಕೇಳಿದಲ್ಲಿ ಸಾರ್ವಜನಿಕ ಕೊಳವೆ ಬಾವಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು ಹಾಗೂ ಖಾಸಗಿ ಕೊಳವೆಬಾವಿಗಳಿಗೆ ಅಂತರ್ಜಲ ಮಟ್ಟ, ಅವಶ್ಯಕತೆ ಹಾಗೂ ತಜ್ಞರ ವರದಿ ಆಧಾರಿಸಿ ಸಂಬಂಧಪಟ್ಟವರಿಂದ ಸ್ಥಳ ಪರಿಶೀಲಿಸಿ ನಂತರ ನಿಯಮಾನುಸಾರ ಸೂಕ್ತ ಪ್ರಾಧಿಕಾರದಿಂದ ಅನುಮತಿ ನೀಡಲಾಗುವುದು” ಎಂದು ಅವರು ತಿಳಿಸಿದ್ದಾರೆ.

“ಬೆಂಗಳೂರು ಮಹಾನಗರದಲ್ಲಿ ಮಳೆ ನೀರಿನ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ನಗರದಲ್ಲಿನ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಅಂತರ್ಜಲ ನೀರಿನ ಮಟ್ಟ ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ ವೈಯಕ್ತಿಕ ಅಥವಾ ಇನ್ನಿತರೆ ಬಳಕೆಗೆ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 11ರಂತೆ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಳವೆಬಾವಿ ಕೊರೆಯಿಸುವುದಕ್ಕೆ ಅನುಮತಿ ಅರ್ಜಿ ಸಲ್ಲಿಸಲು ಮಾ.15ರಿಂದ ಅವಕಾಶ

“ಅವೈಜ್ಞಾನಿಕವಾಗಿ ಕೊಳವೆ ಬಾವಿಗಳನ್ನು ಕೊರೆಯುತ್ತಿರುವುದು ಹಾಗೂ ನಿಯಮಾನುಸಾರ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿ ಪಡೆಯದೇ ಇರುವುದರಿಂದ ಬೆಂಗಳೂರು ನಗರದ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ. ಈ ಹಿನ್ನಲೆ, ಅಂತರ್ಜಲವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...