ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ, ಸಾರ್ವಜನಿಕರ ದಿಕ್ಕು ತಪ್ಪಿಸುವ ತಂತ್ರ: ಆರ್‌ ಅಶೋಕ್‌

Date:

ಕಾಂಗ್ರೆಸ್‌ ಸರ್ಕಾರವು ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಪೆಟ್ರೋಲ್, ಡೀಸೆಲ್, ಹಾಲಿನ ಬೆಲೆ ಏರಿಕೆ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಇವುಗಳಿಂದ ವಿಧಾನಸಭಾ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ ಎನ್ನುವ ಭಯದಿಂದ ಈ ಹೊಸ ನಾಟಕ ಶುರು ಮಾಡಿದೆ” ಎಂದು ಕಿಡಿಕಾರಿದ್ದಾರೆ.

“ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರೇ, ಮುಂಬರುವ ಅಧಿವೇಶನದಲ್ಲಿ ನಿಮ್ಮ ಸರ್ಕಾರದ ಎಲ್ಲ ವೈಫಲ್ಯಗಳನ್ನ, ಭ್ರಷ್ಟಾಚಾರಗಳನ್ನ, ಎಡವಟ್ಟುಗಳನ್ನ, ಜನವಿರೋಧಿ ನೀತಿಗಳನ್ನ ಸದನದಲ್ಲಿ ಪ್ರಸ್ತಾಪ ಮಾಡಲಿದ್ದೇವೆ. ನಿಮ್ಮ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ಜನ ಸಾಮಾನ್ಯರ ಪರವಾಗಿ ಸದನದಲ್ಲಿ ದನಿ ಎತ್ತುತ್ತೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದನದ ದಿಕ್ಕು ತಪ್ಪಿಸುವ ನಿಮ್ಮ ಯಾವ ಕುತಂತ್ರಗಳು ನಡೆಯುವುದಿಲ್ಲ. ಸದನದಲ್ಲಿ ಉತ್ತರಿಸಲು ತಾಯರಾಗಿ” ಎಂದು ಸವಾಲು ಹಾಕಿದ್ದಾರೆ.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹೊಸ ಗಾದೆ!

“ಮಳ್ಳ ಮಳ್ಳ ಮುಡಾ ಹಗರಣದಲ್ಲಿ ನಿನ್ನ ಪಾಲೆಷ್ಟು ಅಂದರೆ, ತನ್ನ ಪತ್ನಿಯ ತವರು ಮನೆಯಿಂದ ಬಂದ ಭೂಮಿಯಷ್ಟು ಅಂದನಂತೆ. ಮಳ್ಳ ಸಿದ್ದರಾಮಯ್ಯ ನವರೇ, ಮುಡಾದಲ್ಲಿ 50: 50ರ ಅನುಪಾತದಲ್ಲಿ ಹಂಚಿಕೆಯಾಗಿರುವ ನಿವೇಶನವನ್ನು ರದ್ದುಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮೈಸೂರಿನ ಜಿಲ್ಲಾಧಿಕಾರಿಗಳು ಕಳೆದ ಒಂದು ವರ್ಷದಿಂದ ನಿರಂತರವಾಗಿ 15 ಬಾರಿ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದರೂ ನಿಮ್ಮ ‘ಆಪ್ತ’ ಸಚಿವರು ಏಕೆ ಕ್ರಮ ಕೈಗೊಳ್ಳಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ಅಸಲಿಗೆ ಸಚಿವ ಸಂಪುಟದ ಅನುಮೋದನೆ ಇಲ್ಲದೆ 50:50ರ ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಲು ಅನುಮತಿ ನೀಡಿದ್ದಾದರೂ ಯಾರು? ಯಾರಿಗೆ ಲಾಭ ಮಾಡಿಕೊಡಲು ಈ ಕ್ರಮ? ಈ ಹಿಂದೆ ಭೂಸ್ವಾಧೀನವಾಗಿರುವ ಪ್ರಕರಣಗಳಲ್ಲಿ ಈಗ ಪರಿಹಾರ ವಿತರಣೆ, ಬದಲಿ ನಿವೇಶನ, ತುಂಡು ಜಾಗ ಮಂಜೂರತಿಯನ್ನು ಪ್ರಾಧಿಕಾರದ ಅನುಮತಿ ಪಡೆಯದೆ ಮಾಡಿರುವುದು ನಿಯಮ ಲೋಪವಷ್ಟೇ ಅಲ್ಲದೆ ಪ್ರಾಧಿಕಾರಕ್ಕೆ ಅಪಾರ ಹಣಕಾಸಿನ ನಷ್ಟ ಆಗಿದೆ. ಇದಕ್ಕೆ ಯಾರು ಹೊಣೆ” ಎಂದು ಕೇಳಿದ್ದಾರೆ.

“ಕೆಸರೆ ಗ್ರಾಮದಲ್ಲಿ ತಮ್ಮ ಧರ್ಮ ಪತ್ನಿ ಅವರಿಗೆ ಸೇರಿದ್ದ 3 ಎಕರೆ 16 ಗುಂಟೆ ಜಮೀನಿನ ಬದಲಾಗಿ ಮೈಸೂರು ನಗರದ ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ 38,824 ಚದರ ಅಡಿ ವಿಸ್ತೀರ್ಣದ ದುಬಾರಿ ಬೆಲೆ ಬಾಳುವ 14 ನಿವೇಶನಗಳನ್ನು ತಮ್ಮ ಪತ್ನಿ ಹೆಸರಿಗೆ ಮಂಜೂರು ಮಾಡಿಸಿಕೊಂಡಿದ್ದೀರಲ್ಲ ಇದು ಭ್ರಷ್ಟಾಚಾರವಲ್ಲದೆ ಮತ್ತೇನು ಸಿದ್ದರಾಮಯ್ಯನವರೇ? ಸಮಾಜವಾದಿ ಮುಖವಾಡ ಹಾಕಿಕೊಂಡಿರುವ ಕಡುಭ್ರಷ್ಟ ಮಜಾವಾದಿ ಅಂದರೆ ಅದು ಸಿಎಂ ಸಿದ್ದರಾಮಯ್ಯ. ಕರ್ನಾಟಕ ಕಂಡ ಅತ್ಯಂತ ಭ್ರಷ್ಟ, ಲೂಟಿಕೋರ ಮುಖ್ಯಮಂತ್ರಿ ಅಂದರೆ ಅದು ಸಿದ್ದರಾಮಯ್ಯ” ಎಂದು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...