ನಿಗಮ-ಮಂಡಳಿ ನೇಮಕ | ಸಿಎಂ-ಡಿಸಿಎಂ ನಡುವೆ ಮೂಡದ ಒಮ್ಮತ; ನ.28ಕ್ಕೆ ಮತ್ತೆ ಸುರ್ಜೇವಾಲ ಸಭೆ

Date:

  • ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಒಮ್ಮತ ಮೂಡಿಲ್ಲ
  • ಶಾರ್ಟ್ ಲಿಸ್ಟ್ ಸಮೇತ ತೆರಳಿರುವ ರಣದೀಪ್‌ ಸಿಂಗ್ ಸುರ್ಜೆವಾಲ 

ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲ ನೇತೃತ್ವದಲ್ಲಿ ಮಂಗಳವಾರ (ನ.22) ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ವಿಚಾರವಾಗಿ ಸಭೆ ನಡೆದಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಒಮ್ಮತ ಮೂಡಿಲ್ಲ ಎಂದು ತಿಳಿದುಬಂದಿದೆ.

ತಡರಾತ್ರಿವರೆಗೂ ನಡೆದ ಸಭೆ ಅಪೂರ್ಣಗೊಂಡಿದೆ. ನಿಗಮ ಮಂಡಳಿಗಳ ನೇಮಕ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರು ತಮ್ಮ ಪರವಾಗಿರುವ ನಾಯಕರಿಗೆ ಕೊಡಿಸಲು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ರಣದೀಪ​ ಸುರ್ಜೆವಾಲ ಮತ್ತೊಮ್ಮೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.

ನವೆಂಬರ್​ 28ರಂದು ಮತ್ತೆ ರಾಜ್ಯಕ್ಕೆ ಸುರ್ಜೇವಾಲ ಆಗಮಿಸಲಿದ್ದಾರೆ. ಇನ್ನು ಮಂಗಳವಾರ ನಡೆದ ಸಭೆಯಲ್ಲಿ ಹಲವು ನಾಯಕರ ಹೆಸರು ಪ್ರಸ್ತಾಪವಾಗಿದ್ದು, ಶಾರ್ಟ್ ಲಿಸ್ಟ್ ಮಾಡಲಾಗಿದೆ. ಈ ಪಟ್ಟಿ ಸಮೇತ ತೆರಳಿರುವ ಸುರ್ಜೆವಾಲ ಎಐಸಿಸಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ನಂತರ ರಾಜ್ಯಕ್ಕೆ ಆಗಮಿಸಿ ಅಂತಿಮ ತೀರ್ಮಾನ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಷ್ಟು ಬೇಗ ನೇಮಕ: ಡಿಕೆಶಿ

ಸಭೆಯ ಬಳಿಕ ಡಿಕೆ ಶಿವಕುಮಾರ್‌ ಸುದ್ದಿಗಾರರ ಜೊತೆ ಮಾತನಾಡಿ, “ನಾವು ಲೋಕಸಭಾ ಚುನಾವಣೆಗೆ ಹೋಗಬೇಕು. ಹೀಗಾಗಿ ಸೂಕ್ತ ನಾಯಕರಿಗೆ ನಿಗಮ ಮಂಡಳಿ ಸ್ಥಾನ ಸಿಗಬೇಕಿದೆ. ನಮ್ಮ ನಾಯಕರ ನಡುವೆ ಚರ್ಚೆ ನಡೆದಿದ್ದು, ಆದಷ್ಟು ಬೇಗ ನೇಮಕವಾಗಲಿದೆ” ಎಂದು ತಿಳಿಸಿದರು.

ಡಾ. ಜಿ ಪರಮೇಶ್ವರ್‌ ಮುನಿಸಿಕೊಂಡಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ನಮ್ಮಲ್ಲಿ ಯಾವುದೇ ನಾಯಕರು ಮುನಿಸಿಕೊಂಡಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ನಾವೆಲ್ಲ ಒಗ್ಗಟ್ಟಾಗಿಯೇ ಇದ್ದೇವೆ” ಎಂದು ಹೇಳಿದರು.

ಸರ್ಕಾರದ ಅಧೀನದಲ್ಲಿ ಒಟ್ಟಾರೆ 85 ನಿಗಮಗಳಿದ್ದು, ಅಲ್ಲಿಗೆ ನೇಮಕ ಮಾಡುವ ಪೂರ್ಣ ಅಧಿಕಾರ ಸರ್ಕಾರಕ್ಕಿದೆ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಿರ್ದೇಶಕರನ್ನು ನೇಮಕ ಮಾಡಲಾಗುತ್ತದೆ. ಎಲ್ಲ ರಾಜಕೀಯ ಪಕ್ಷಗಳು ತಮ್ಮ ಅಧಿಕಾರದ ಸರದಿ ಬಂದಾಗ ನೇಮಕಗಳನ್ನು ಮಾಡುತ್ತವೆ.

ಸಂಭಾವ್ಯರ ಪಟ್ಟಿ ಹೀಗಿದೆ

ಶಿವಲಿಂಗೇಗೌಡ
ಬಿ.ಕೆ ಸಂಗಮೇಶ್
ಬಂಗಾರಪೇಟೆ ನಾರಾಯಣಸ್ವಾಮಿ
ಕೆ.ವೈ ನಂಜೇಗೌಡ
ಬಿ.ಆರ್ ಪಾಟೀಲ್
ಪಿ.ಎಂ ನರೇಂದ್ರ ಸ್ವಾಮಿ
ರಮೇಶ್ ಬಾಬು ಬಂಡಿಸಿದ್ದೇಗೌಡ
ಅನಿಲ್ ಚಿಕ್ಕಮಾದು
ಟಿ.ಡಿ ರಾಜೇಗೌಡ
ರಘುಮೂರ್ತಿ
ಭೀಮಣ್ಣ ನಾಯ್ಕ್
ಸತೀಶ್ ಸೈಲ್
ಪ್ರಸಾದ್ ಅಬ್ಬಯ್ಯ
ಜಿ.ಟಿ ಪಾಟೀಲ್
ಡಿ.ಆರ್ ಪಾಟೀಲ್
ಗಣೇಶ್ ಹುಕ್ಕೇರಿ
ಮಹಾಂತೇಶ್ ಕೌಜಲಗಿ
ಯಶವಂತ್ ರಾಯ್ ಗೌಡ ಪಾಟೀಲ್
ಬಿ.ಜಿ ಗೋವಿಂದಪ್ಪ
ರಾಘವೇಂದ್ರ ಹಿಟ್ನಾಳ್
ಬಸನಗೌಡ ತುರುವಿಹಾಳ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...